ಮಂಡ್ಯ: ಕಾಶ್ಮೀರ ಉಗ್ರರ ದಾಳಿಯಿಂದ ಹುತಾತ್ಮರಾದ ಸಿ ಆರ್ ಪಿ ಎಫ್ ಯೋಧರಲ್ಲಿ ಜಿಲ್ಲೆಯ ಯೋಧರೊಬ್ಬರು ಸೇರಿದ್ದಾರೆ. ಮದ್ದೂರು ತಾಲ್ಲೂಕು, ಗುಡಿಗೆರೆ ಗ್ರಾಮದ ಎಚ್.ಗುರು (33) ಉಗ್ರರ ದಾಳಿಯಿಂದ ಹುತಾತ್ಮರಾದ ಯೋಧ.
ಅವರು ಹೊನ್ನಯ್ಯ- ಚಿಕ್ಕಹೊಳ್ಳಮ್ಮ ದಂಪತಿಯ ಹಿರಿಯ ಪುತ್ರ. ಇನ್ನಿಬ್ಬರು ಪುತ್ರರು ಇದ್ದಾರೆ. ಎಚ್.ಗುರು ಕಳೆದ 8 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಕನಕಪುರ ತಾಲ್ಲೂಕು ಸಾಸಲಾಪುರ ಗ್ರಾಮದ ಕಲಾವತಿ ಅವರನ್ನು ವಿವಾಹವಾಗಿದ್ದರು. ಮದುವೆಯ ನಂತರ ಪತ್ನಿಯನ್ನು ಸಾಸಲಾಪುರದಲ್ಲೇ ಬಿಟ್ಟು ಕರ್ತವ್ಯಕ್ಕೆ ತೆರಳಿದ್ದರು.
ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದ ಸದಸ್ಯರು ದುಃಖದಲ್ಲಿ ಮುಳುಗಿದ್ದಾರೆ.