ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಗ್ರರ ದಾಳಿ: ಮಂಡ್ಯ ಯೋಧ ಹುತಾತ್ಮ

Last Updated 14 ಫೆಬ್ರುವರಿ 2019, 18:29 IST
ಅಕ್ಷರ ಗಾತ್ರ

ಮಂಡ್ಯ: ಕಾಶ್ಮೀರ ಉಗ್ರರ ದಾಳಿಯಿಂದ ಹುತಾತ್ಮರಾದ ಸಿ ಆರ್ ಪಿ ಎಫ್ ಯೋಧರಲ್ಲಿ ಜಿಲ್ಲೆಯ ಯೋಧರೊಬ್ಬರು ಸೇರಿದ್ದಾರೆ.
ಮದ್ದೂರು ತಾಲ್ಲೂಕು, ಗುಡಿಗೆರೆ ಗ್ರಾಮದ ಎಚ್.ಗುರು (33) ಉಗ್ರರ ದಾಳಿಯಿಂದ ಹುತಾತ್ಮರಾದ ಯೋಧ.

ಅವರು ಹೊನ್ನಯ್ಯ- ಚಿಕ್ಕಹೊಳ್ಳಮ್ಮ ದಂಪತಿಯ ಹಿರಿಯ ಪುತ್ರ. ಇನ್ನಿಬ್ಬರು ಪುತ್ರರು ಇದ್ದಾರೆ. ಎಚ್.ಗುರು ಕಳೆದ 8 ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಕನಕಪುರ ತಾಲ್ಲೂಕು ಸಾಸಲಾಪುರ ಗ್ರಾಮದ ಕಲಾವತಿ ಅವರನ್ನು ವಿವಾಹವಾಗಿದ್ದರು. ಮದುವೆಯ ನಂತರ ಪತ್ನಿಯನ್ನು ಸಾಸಲಾಪುರದಲ್ಲೇ ಬಿಟ್ಟು ಕರ್ತವ್ಯಕ್ಕೆ ತೆರಳಿದ್ದರು.

ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದ ಸದಸ್ಯರು ದುಃಖದಲ್ಲಿ ಮುಳುಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT