<p><strong>ಶ್ರೀರಂಗಪಟ್ಟಣ</strong>: ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಚುಚ್ಚಿ ಕೊಲೆಗೆ ಯತ್ನಿಸಿದ್ದ ಆರೋಪಿಗೆ ಪಟ್ಟಣದ ಮೂರನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿದೆ.</p>.<p>ಪಟ್ಟಣ ವ್ಯಾಪ್ತಿಯ ಗಂಜಾಂನ ನಂಜುಂಡ ನಾಯಕ ಎಂಬವರ ಮಗ ನಿತೀಶ್ ಶಿಕ್ಷೆಗೆ ಗುರಿಯಾಗಿದ್ದಾರೆ. ನ್ಯಾಯಾಧೀಶರಾದ ಟಿ. ಗೋಪಾಲಕೃಷ್ಣ ರೈ ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ ತೀರ್ಪು ನೀಡಿದ್ದಾರೆ.</p>.<p>ತಾಲ್ಲೂಕಿನ ಕಿರಂಗೂರು ಗ್ರಾಮದ ಜಾನ್ಸನ್ ಪ್ರಭು ಎಂಬವರನ್ನು ನಿತಿನ್ 2013ರ ಜ.27ರಂದು ಅಪಹರಿಸಿ, ಮಂಡ್ಯ ತಾಲ್ಲೂಕಿನ ಹೊಡಾಘಟ್ಟ ಬಳಿಗೆ ಕರೆದೊಯ್ದು ಚೂರಿಯಿಂದ ಇರಿದಿದ್ದನು. ಅಂದಿನ ಎಸ್ಐ ಬಿ.ಜಿ. ಕುಮಾರ್ ಆರೋಪಿಯನ್ನು ಬಂಧಿಸಿದ್ದರು. ಪ್ರಕರಣ ಕುರಿತು ಅಂದಿನ ತನಿಖಾಧಿಕಾರಿ ವಂಕಟರಾಮಪ್ಪ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ಸರ್ಕಾರಿ ಅಭಿಯೋಜಕರಾದ ಎಂ.ಕೆ. ಪ್ರಪುಲ್ಲಾ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಚುಚ್ಚಿ ಕೊಲೆಗೆ ಯತ್ನಿಸಿದ್ದ ಆರೋಪಿಗೆ ಪಟ್ಟಣದ ಮೂರನೇ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ₹10 ಸಾವಿರ ದಂಡ ವಿಧಿಸಿದೆ.</p>.<p>ಪಟ್ಟಣ ವ್ಯಾಪ್ತಿಯ ಗಂಜಾಂನ ನಂಜುಂಡ ನಾಯಕ ಎಂಬವರ ಮಗ ನಿತೀಶ್ ಶಿಕ್ಷೆಗೆ ಗುರಿಯಾಗಿದ್ದಾರೆ. ನ್ಯಾಯಾಧೀಶರಾದ ಟಿ. ಗೋಪಾಲಕೃಷ್ಣ ರೈ ಆರೋಪಿಯನ್ನು ದೋಷಿ ಎಂದು ತೀರ್ಮಾನಿಸಿ ತೀರ್ಪು ನೀಡಿದ್ದಾರೆ.</p>.<p>ತಾಲ್ಲೂಕಿನ ಕಿರಂಗೂರು ಗ್ರಾಮದ ಜಾನ್ಸನ್ ಪ್ರಭು ಎಂಬವರನ್ನು ನಿತಿನ್ 2013ರ ಜ.27ರಂದು ಅಪಹರಿಸಿ, ಮಂಡ್ಯ ತಾಲ್ಲೂಕಿನ ಹೊಡಾಘಟ್ಟ ಬಳಿಗೆ ಕರೆದೊಯ್ದು ಚೂರಿಯಿಂದ ಇರಿದಿದ್ದನು. ಅಂದಿನ ಎಸ್ಐ ಬಿ.ಜಿ. ಕುಮಾರ್ ಆರೋಪಿಯನ್ನು ಬಂಧಿಸಿದ್ದರು. ಪ್ರಕರಣ ಕುರಿತು ಅಂದಿನ ತನಿಖಾಧಿಕಾರಿ ವಂಕಟರಾಮಪ್ಪ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ಸರ್ಕಾರಿ ಅಭಿಯೋಜಕರಾದ ಎಂ.ಕೆ. ಪ್ರಪುಲ್ಲಾ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>