ತಾಲ್ಲೂಕಿನ ಕಿರಂಗೂರು ಗ್ರಾಮದ ಜಾನ್ಸನ್ ಪ್ರಭು ಎಂಬವರನ್ನು ನಿತಿನ್ 2013ರ ಜ.27ರಂದು ಅಪಹರಿಸಿ, ಮಂಡ್ಯ ತಾಲ್ಲೂಕಿನ ಹೊಡಾಘಟ್ಟ ಬಳಿಗೆ ಕರೆದೊಯ್ದು ಚೂರಿಯಿಂದ ಇರಿದಿದ್ದನು. ಅಂದಿನ ಎಸ್ಐ ಬಿ.ಜಿ. ಕುಮಾರ್ ಆರೋಪಿಯನ್ನು ಬಂಧಿಸಿದ್ದರು. ಪ್ರಕರಣ ಕುರಿತು ಅಂದಿನ ತನಿಖಾಧಿಕಾರಿ ವಂಕಟರಾಮಪ್ಪ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರ ಸರ್ಕಾರಿ ಅಭಿಯೋಜಕರಾದ ಎಂ.ಕೆ. ಪ್ರಪುಲ್ಲಾ ವಾದ ಮಂಡಿಸಿದ್ದರು.