ಬೆಂಗಳೂರು– ಮಂಗಳೂರು ಹೆದ್ದಾರಿಯಲ್ಲಿ ಬೆಂಗಳೂರಿನ ಕಡೆಯಿಂದ ಹಾಸನ ಕಡೆಗೆ ಚಲಿಸುತ್ತಿದ್ದ ಸ್ವಿಫ್ಟ್ ಕಾರು ಕಾಫಿ ಡೇ ಸಮೀಪದ ಸೇತುವೆ ಬಳಿ ಈ ಘಟನೆ ಸಂಭವಿಸಿದ್ದು. ಕಾರಿನಲ್ಲಿದ್ದ ಬೆಂಗಳೂರು ರಾಮಮೂರ್ತಿನಗರದ ನಿವಾಸಿಗಳಾದ ಸತೀಶ್ಕುಮಾರ್, ಮಂಜುನಾಥ್ ಹಾಗೂ ಉಮೇಶ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.