<p><strong>ಮಂಡ್ಯ</strong>: ‘ಕನ್ನಡ ನಾಡಿಗೆ ಮೈಸೂರು ಮಹಾರಾಜರ ಕೊಡುಗೆ ಅಪಾರ’ ಎಂದು ಇತಿಹಾಸ ತಜ್ಞ ಧರ್ಮೇಂದ್ರಕುಮಾರ್ ಅರೇನಹಳ್ಳಿ ಹೇಳಿದರು.</p><p>ನಗರದ ಮಿಮ್ಸ್ ಸಭಾಂಗಣದಲ್ಲಿ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕನ್ನಡ ಕಾರ್ಯಕಾರಿ ಸಮಿತಿ) ವತಿಯಿಂದ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಶನಿವಾರ ನಡೆದ ಕಲರವ-2025 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯದ ನಾಡಿನ ಇತಿಹಾಸ, ರಾಜ ಮಹಾರಾಜರ ಕೊಡುಗೆ ಅನನ್ಯ. ಕಲೆ-ಸಾಹಿತ್ಯ ಜನಸಾಮಾನ್ಯರ ಜೀವನಕ್ಕಾಗಿ ಉತ್ತಮ ಆಡಳಿತದೊಂದಿಗೆ ಕೋಟೆ ಕಟ್ಟಿ ಸಾಮ್ರಾಜ್ಯ ನಡೆಸಿದ ಕೀರ್ತಿ ನಮ್ಮ ಕರುನಾಡಿಗಿದೆ. ಇದರ ಜೊತೆಗೆ ಕನ್ನಡ ಭಾಷೆಯ ಸೊಗಡು ವೈವಿಧ್ಯತೆಯಲ್ಲಿ ಏಕತೆ ಸಾರುತ್ತವೆ ಎಂದರು.</p>.<p>ಅಂದಿನ ಬೆಂದಕಾಳೂರಿಗೆ ನಾಡಪ್ರಭು ಕೆಂಪೇಗೌಡ ಹಾಕಿಕೊಟ್ಟ ಅಡಿಪಾಯವು ಪ್ರಸ್ತುತದಲ್ಲಿ ಅಜರಾಮರವಾಗಿ ಅಭಿವೃದ್ಧಿ ಹೊಂದುತ್ತಿದೆ. ಯಾವುದೇ ಜಾತಿ ಧರ್ಮ ಎನ್ನದೇ ವ್ಯಾಪಾರ ನಡೆಸಲು, ಕೃಷಿ ಮಾಡಲು ಕೆರೆಗಳ ನಿರ್ಮಾಣ ಸೇರಿಸಿದಂತೆ ಕೆಂಪೇಗೌಡರ ದೂರದೃಷ್ಟಿ ಇಂದಿನ ರಾಜಕಾರಣಿಗಳಿಗೆ ದಾರಿದೀಪ ಎಂದರೆ ಅತಿಶಯೋಕ್ತಿಯಲ್ಲ ಎಂದು ಶ್ಲಾಘಿಸಿದರು.</p>.<p>ಮಿಮ್ಸ್ ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ, ವೈದ್ಯಕೀಯ ಅಧೀಕ್ಷಕ ಡಾ.ಜಿ.ಶಿವಕುಮಾರ್, ಸ್ಥಾನೀಯ ವೈದ್ಯಾಧಿಕಾರಿ ಡಾ.ಡಿ.ಬಿ.ದರ್ಶನ್ ಕುಮಾರ್, ಶುಶ್ರೂಷಕ ಪ್ರಾಂಶುಪಾಲ ಎಲ್.ಎಲ್.ಕ್ಲೆಮೆಂಟ್, ಪ್ರಭಾರ ಶಶ್ರೂಷಕ ಅಧೀಕ್ಷಕಿ ಸಿ.ಎಂ.ರೇಣು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಕನ್ನಡ ನಾಡಿಗೆ ಮೈಸೂರು ಮಹಾರಾಜರ ಕೊಡುಗೆ ಅಪಾರ’ ಎಂದು ಇತಿಹಾಸ ತಜ್ಞ ಧರ್ಮೇಂದ್ರಕುಮಾರ್ ಅರೇನಹಳ್ಳಿ ಹೇಳಿದರು.</p><p>ನಗರದ ಮಿಮ್ಸ್ ಸಭಾಂಗಣದಲ್ಲಿ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕನ್ನಡ ಕಾರ್ಯಕಾರಿ ಸಮಿತಿ) ವತಿಯಿಂದ 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಶನಿವಾರ ನಡೆದ ಕಲರವ-2025 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಜ್ಯದ ನಾಡಿನ ಇತಿಹಾಸ, ರಾಜ ಮಹಾರಾಜರ ಕೊಡುಗೆ ಅನನ್ಯ. ಕಲೆ-ಸಾಹಿತ್ಯ ಜನಸಾಮಾನ್ಯರ ಜೀವನಕ್ಕಾಗಿ ಉತ್ತಮ ಆಡಳಿತದೊಂದಿಗೆ ಕೋಟೆ ಕಟ್ಟಿ ಸಾಮ್ರಾಜ್ಯ ನಡೆಸಿದ ಕೀರ್ತಿ ನಮ್ಮ ಕರುನಾಡಿಗಿದೆ. ಇದರ ಜೊತೆಗೆ ಕನ್ನಡ ಭಾಷೆಯ ಸೊಗಡು ವೈವಿಧ್ಯತೆಯಲ್ಲಿ ಏಕತೆ ಸಾರುತ್ತವೆ ಎಂದರು.</p>.<p>ಅಂದಿನ ಬೆಂದಕಾಳೂರಿಗೆ ನಾಡಪ್ರಭು ಕೆಂಪೇಗೌಡ ಹಾಕಿಕೊಟ್ಟ ಅಡಿಪಾಯವು ಪ್ರಸ್ತುತದಲ್ಲಿ ಅಜರಾಮರವಾಗಿ ಅಭಿವೃದ್ಧಿ ಹೊಂದುತ್ತಿದೆ. ಯಾವುದೇ ಜಾತಿ ಧರ್ಮ ಎನ್ನದೇ ವ್ಯಾಪಾರ ನಡೆಸಲು, ಕೃಷಿ ಮಾಡಲು ಕೆರೆಗಳ ನಿರ್ಮಾಣ ಸೇರಿಸಿದಂತೆ ಕೆಂಪೇಗೌಡರ ದೂರದೃಷ್ಟಿ ಇಂದಿನ ರಾಜಕಾರಣಿಗಳಿಗೆ ದಾರಿದೀಪ ಎಂದರೆ ಅತಿಶಯೋಕ್ತಿಯಲ್ಲ ಎಂದು ಶ್ಲಾಘಿಸಿದರು.</p>.<p>ಮಿಮ್ಸ್ ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ, ವೈದ್ಯಕೀಯ ಅಧೀಕ್ಷಕ ಡಾ.ಜಿ.ಶಿವಕುಮಾರ್, ಸ್ಥಾನೀಯ ವೈದ್ಯಾಧಿಕಾರಿ ಡಾ.ಡಿ.ಬಿ.ದರ್ಶನ್ ಕುಮಾರ್, ಶುಶ್ರೂಷಕ ಪ್ರಾಂಶುಪಾಲ ಎಲ್.ಎಲ್.ಕ್ಲೆಮೆಂಟ್, ಪ್ರಭಾರ ಶಶ್ರೂಷಕ ಅಧೀಕ್ಷಕಿ ಸಿ.ಎಂ.ರೇಣು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>