ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭತ್ತದ ಗದ್ದೆಯಲ್ಲಿ ಕಾಡಾನೆ ಕಳೇಬರ ಪತ್ತೆ

Last Updated 17 ಜೂನ್ 2021, 3:33 IST
ಅಕ್ಷರ ಗಾತ್ರ

ಮಳವಳ್ಳಿ: ತಾಲ್ಲೂಕಿನ ನೆಟ್ಕಲ್ ಗ್ರಾಮದ ಕೆರೆ ಸಮೀಪದ ಭತ್ತದ ಗದ್ದೆಯಲ್ಲಿ ಬುಧವಾರ ಕಾಡಾನೆಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿದೆ.

ಗ್ರಾಮದ ನಾಗಯ್ಯ ಎಂಬುವರಿಗೆ ಸೇರಿದ ಭತ್ತದ ಗದ್ದೆಯಲ್ಲಿ 7ರಿಂದ 8 ವರ್ಷದ ಗಂಡಾನೆಯ ಶವ ಮಧ್ಯಾಹ್ನ ಪತ್ತೆಯಾಗಿದೆ.

ಸ್ಥಳಕ್ಕೆ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್‌ ಭೇಟಿ ನೀಡಿ ಪರಿಶೀಲಿಸಿದರು.

ಮಂಗಳವಾರ ತಡರಾತ್ರಿ ಕಾಡಾನೆಗಳ ಗುಂಪೊಂದು ಭತ್ತದ ಗದ್ದೆಗೆ ಬಂದಿವೆ. ಇದರಲ್ಲಿ ಗಂಡಾನೆಯೊಂದು ಮೃತಪಟ್ಟಿದ್ದು, ಶವ ಪರೀಕ್ಷೆಯ ನಂತರ ಸಾವಿಗೆ ಕಾರಣ ತಿಳಿಯಲಿದೆ ಎಂದು ರಮೇಶ್‌ ತಿಳಿಸಿದರು.

ಎಸಿಎಫ್ಅಂಕರಾಜು, ಆರ್‌ಎಫ್‌ಒ ಮಹದೇವಸ್ವಾಮಿ, ನಂದೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT