ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿಯನ್ನು ಕೊಂದು ನದಿಗೆ ಎಸೆದ ಪತಿ

Published 9 ಆಗಸ್ಟ್ 2023, 15:48 IST
Last Updated 9 ಆಗಸ್ಟ್ 2023, 15:48 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ತಾಲ್ಲೂಕಿನ ಮಂಡ್ಯಕೊಪ್ಪಲು ಗ್ರಾಮದಲ್ಲಿ  ಶ್ರೀನಾಥ್‌ ಎಂಬಾತ ತನ್ನ ಪತ್ನಿ ಪೂಜಾ (29) ಅವರನ್ನು ಭಾನುವಾರ ವೇಲ್‌ನಿಂದ ಬಿಗಿದು ಕೊಲೆ ಮಾಡಿ ಬೋರೇದೇವರ ದೇವಾಲಯ ಬಳಿ ಕಾವೇರಿ ನದಿಗೆ ಎಸೆದು, ಶ್ರೀರಂಗಪಟ್ಟಣ ಠಾಣೆಗೆ ಬುಧವಾರ ಬಂದು ಶರಣಾಗಿದ್ದಾನೆ.

‘ಅನ್ಯ ಪುರುಷನ ಜತೆ ಅನೈತಿಕ ಸಂಬಂಧ ಹೊಂದಿದ್ದ ಕಾರಣಕ್ಕೆ ಪೂಜಾಳನ್ನು ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆತ ನೀಡಿದ ಮಾಹಿತಿ ಆಧರಿಸಿ ಪೊಲೀಸರು ಶೋಧ ನಡೆಸಿದಾಗ ಭಾಗಶಃ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ರಾಮಸ್ವಾಮಿ ನಾಲೆಯ ಗೇಟ್‌ಗೆ ಶವ ಸಿಕ್ಕಿಕೊಂಡಿತ್ತು’ ಎಂದು ಪೊಲೀಸರು ತಿಳಿಸಿದ್ದಾರೆ. ಅರಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT