<p><strong>ಭಾರತೀನಗರ:</strong> ‘ಚಳವಳಿಗಾರರನ್ನು ರೋಲ್ಕಾಲ್, ಎಂಜಲು ಕಾಸಿನ ಗಿರಾಕಿಗಳು ಎಂದು ಹೇಳಿಕೆ ನೀಡಿರುವ ಶಾಸಕ ಕೆ.ಎಂ.ಉದಯ್ ಅವರೇ ರೋಲ್ಕಾಲ್ ಗಿರಾಕಿಯಾಗಿದ್ದು, ರೋಲ್ಕಾಲ್ ಮಾಡುವುದು ಆತನಿಗೆ ಚೆನ್ನಾಗಿ ಗೊತ್ತಿದೆ’ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ಟೀಕಿಸಿದ್ದಾರೆ.</p>.<p>‘ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ಸಂಬಂಧ ರೈತ ಹೋರಾಟಗಾರರು ಮತ್ತು ಚಳವಳಿಕಾರರನ್ನು ಟೀಕಿಸಿರುವ ಅವರಿಗೆ ಎಂಜಲು ಕಾಸಿಗೆ ನಾಲಿಗೆ ಚಾಚಿ ನಿಂತ ಅಭ್ಯಾಸವೂ ಇರಬಹುದು. ರೈತ ಚಳವಳಿಗಾರರಿಗೆ, ಕಮ್ಯುನಿಸ್ಟ್ ಪಕ್ಷಕ್ಕೆ ಆ ರೀತಿಯ ಎಂಜಲು ಕಾಸಿನ ರಾಜಕಾರಣ ಮಾಡಿ ಅಭ್ಯಾಸವಿಲ್ಲ ಎಂಬುದನ್ನು ಗಟ್ಟಿಯಾಗಿ ಹೇಳಲು ಬಯಸುತ್ತೇನೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಶಾಸಕರು ಅವರ ಪೂರ್ವಾಶ್ರಮಗಳನ್ನು ನೆನಪಿಸಿಕೊಂನಡರೆ ಒಳಿತು. 12 ವರ್ಷಗಳ ಹಿಂದೆ ಎಲ್ಲಿದ್ದರು, ಈಗ ಎಲ್ಲಿದ್ದಾರೆ, ಅವರು ಸಂಪಾದನೆ ಮಾಡಿರುವುದು ಯಾವ ರೀತಿ, ಯಾರು ಸಂಪಾದನೆ ಮಾಡಿದ ಹಣ ಎಂಬುದನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದು ಆಗ್ರಹಿಸಿದರು.</p>.<p>‘ತಾಲ್ಲೂಕು ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕೆ ಔಷಧಿಯಿಲ್ಲ, ಜ್ವರ ಬಂದವರಿಗೆ ಚಿಕಿತ್ಸೆ ಸಿಗುತ್ತಿಲ್ಲ. ಮದ್ದೂರು ಪಟ್ಟಣದಲ್ಲಿ ಏನೆಲ್ಲ ನಾಗರಿಕ ಸಮಸ್ಯೆಗಳಿವೆ. ಅವುಗಳನ್ನು ಸರಿಪಡಿಸಲಿ. ವಿದ್ಯಾರ್ಥಿಗಳ, ರೈತರ ಸಮಸ್ಯೆ ಸಾಕಷ್ಟಿವೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ಚಳವಳಿಕಾರರನ್ನು ಟೀಕಿಸುವ ಕೆಳಮಟ್ಟಕ್ಕೆ ಇಳಿದಿದ್ದಾರೆ’ ಎಂದು ಕಿಡಿಕಾರಿದರು.</p>.<p>‘ಮದ್ದೂರು ಪಟ್ಟಣವನ್ನು ನಗರಸಭೆ ಮಾಡಲು ನಿರಾಕರಿಸಿರುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಜೂ 26ರಂದು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಸಿಪಿಐಎಂ ಬೃಹತ್ ಪ್ರತಿಭಟನೆ ಆಯೋಜಿಸಿದೆ. ಎಲ್ಲಾ ಚಳವಳಿಕಾರರು, ಹೋರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಪಕ್ಷದ ಮುಖಂಡರಾದ ಬಿ.ಹನುಮೇಶ್, ಲತಾ, ಶೋಭಾ, ಮಂಚೇಗೌಡ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀನಗರ:</strong> ‘ಚಳವಳಿಗಾರರನ್ನು ರೋಲ್ಕಾಲ್, ಎಂಜಲು ಕಾಸಿನ ಗಿರಾಕಿಗಳು ಎಂದು ಹೇಳಿಕೆ ನೀಡಿರುವ ಶಾಸಕ ಕೆ.ಎಂ.ಉದಯ್ ಅವರೇ ರೋಲ್ಕಾಲ್ ಗಿರಾಕಿಯಾಗಿದ್ದು, ರೋಲ್ಕಾಲ್ ಮಾಡುವುದು ಆತನಿಗೆ ಚೆನ್ನಾಗಿ ಗೊತ್ತಿದೆ’ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ಟೀಕಿಸಿದ್ದಾರೆ.</p>.<p>‘ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಾಣ ಸಂಬಂಧ ರೈತ ಹೋರಾಟಗಾರರು ಮತ್ತು ಚಳವಳಿಕಾರರನ್ನು ಟೀಕಿಸಿರುವ ಅವರಿಗೆ ಎಂಜಲು ಕಾಸಿಗೆ ನಾಲಿಗೆ ಚಾಚಿ ನಿಂತ ಅಭ್ಯಾಸವೂ ಇರಬಹುದು. ರೈತ ಚಳವಳಿಗಾರರಿಗೆ, ಕಮ್ಯುನಿಸ್ಟ್ ಪಕ್ಷಕ್ಕೆ ಆ ರೀತಿಯ ಎಂಜಲು ಕಾಸಿನ ರಾಜಕಾರಣ ಮಾಡಿ ಅಭ್ಯಾಸವಿಲ್ಲ ಎಂಬುದನ್ನು ಗಟ್ಟಿಯಾಗಿ ಹೇಳಲು ಬಯಸುತ್ತೇನೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಶಾಸಕರು ಅವರ ಪೂರ್ವಾಶ್ರಮಗಳನ್ನು ನೆನಪಿಸಿಕೊಂನಡರೆ ಒಳಿತು. 12 ವರ್ಷಗಳ ಹಿಂದೆ ಎಲ್ಲಿದ್ದರು, ಈಗ ಎಲ್ಲಿದ್ದಾರೆ, ಅವರು ಸಂಪಾದನೆ ಮಾಡಿರುವುದು ಯಾವ ರೀತಿ, ಯಾರು ಸಂಪಾದನೆ ಮಾಡಿದ ಹಣ ಎಂಬುದನ್ನು ಸಾರ್ವಜನಿಕರಿಗೆ ತಿಳಿಸಬೇಕು ಎಂದು ಆಗ್ರಹಿಸಿದರು.</p>.<p>‘ತಾಲ್ಲೂಕು ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕೆ ಔಷಧಿಯಿಲ್ಲ, ಜ್ವರ ಬಂದವರಿಗೆ ಚಿಕಿತ್ಸೆ ಸಿಗುತ್ತಿಲ್ಲ. ಮದ್ದೂರು ಪಟ್ಟಣದಲ್ಲಿ ಏನೆಲ್ಲ ನಾಗರಿಕ ಸಮಸ್ಯೆಗಳಿವೆ. ಅವುಗಳನ್ನು ಸರಿಪಡಿಸಲಿ. ವಿದ್ಯಾರ್ಥಿಗಳ, ರೈತರ ಸಮಸ್ಯೆ ಸಾಕಷ್ಟಿವೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ಚಳವಳಿಕಾರರನ್ನು ಟೀಕಿಸುವ ಕೆಳಮಟ್ಟಕ್ಕೆ ಇಳಿದಿದ್ದಾರೆ’ ಎಂದು ಕಿಡಿಕಾರಿದರು.</p>.<p>‘ಮದ್ದೂರು ಪಟ್ಟಣವನ್ನು ನಗರಸಭೆ ಮಾಡಲು ನಿರಾಕರಿಸಿರುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಜೂ 26ರಂದು ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಸಿಪಿಐಎಂ ಬೃಹತ್ ಪ್ರತಿಭಟನೆ ಆಯೋಜಿಸಿದೆ. ಎಲ್ಲಾ ಚಳವಳಿಕಾರರು, ಹೋರಾಟಗಾರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿದರು.</p>.<p>ಪಕ್ಷದ ಮುಖಂಡರಾದ ಬಿ.ಹನುಮೇಶ್, ಲತಾ, ಶೋಭಾ, ಮಂಚೇಗೌಡ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>