ಗ್ರಾ.ಪಂ ಅಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಈ ರಸ್ತೆಯು ಪಾಲಾಗ್ರಹಾರ, ಹೊಸಹಳ್ಳಿ, ಬ್ಯಾಡರಹಳ್ಳಿ, ಕೆಂಚೇಗೌಡನಕೊಪ್ಪಲು, ನಲ್ಕುಂಡಿ, ಹರದನಹಳ್ಳಿ ಸೇರಿದಂತೆ ರಾಮೇನಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, ರೈತರು ಸೇರಿದಂತೆ ಜನಸಾಮಾನ್ಯರು ಸಂಚರಿಸು ತ್ತಾರೆ. ಪ್ರಮುಖವಾಗಿ ವೃದ್ಧರು, ರೋಗಿಗಳು ಸೇರಿದಂತೆ ಗರ್ಭಿಣಿಯರು ವಾಹನಗಳಲ್ಲಿ ಸಂಚರಿಸಲು ಸಮಸ್ಯೆ ಯಾಗುತ್ತಿದೆ. ಜೊತೆಗೆ ಈ ಮಾರ್ಗದಲ್ಲಿ ಇರುವ ಸೇತುವೆಗಳು ಕುಸಿದಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ.