<p><strong>ಶ್ರೀರಂಗಪಟ್ಟಣ</strong> : ‘ಇಸ್ಲಾಂ ಧರ್ಮದ ಹೆಸರಿನಲ್ಲಿ ಕಾಶ್ಮೀರದಲ್ಲಿ ನರಮೇಧ ನಡೆಸಿರುವವರು ನೈಜ ಮುಸ್ಲಿಮರಲ್ಲ. ನೈಜ ಮುಸ್ಲಿಮರಲ್ಲಿ ಪ್ರೀತಿ, ಕರುಣೆ, ಪರಸ್ಪರ ಸಹಕಾರ ಮನೋಭಾವ ಇರುತ್ತದೆ’ ಎಂದು ಲೇಖಕಿ ಬಾನು ಮುಷ್ತಾಕ್ ಹೇಳಿದರು.</p>.<p>ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಮುಸ್ಲಿಂ ಸೌಹಾರ್ದ ಒಕ್ಕೂಟದ ವಾರ್ಷಿಕೋತ್ಸವ ಮತ್ತು ‘ಸೌಹಾರ್ದ ಸೇತು ಸಾಧಕ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಕಾಶ್ಮೀರದಲ್ಲಿ ಪೈಶಾಚಿಕ ಕೃತ್ಯ ನಡೆಸಿರುವ ದುರುಳರು ಇಸ್ಲಾಂ ಧರ್ಮದ ತತ್ವವನ್ನೇ ಕೊಲೆ ಮಾಡಿದ್ದಾರೆ. ಮಕ್ಕಳು ಮತ್ತು ಪತ್ನಿಯ ಎದುರು ಅಮಾಯಕರನ್ನು ಹತ್ಯೆ ಮಾಡಿರುವುದು ಅರಗಿಸಿಕೊಳ್ಳಲಾಗದ ಕೃತ್ಯ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಅಮೆರಿಕ ತನ್ನ ಸ್ವಾರ್ಥಕ್ಕಾಗಿ ಅಲ್–ಖೈದಾ ಮತ್ತು ತಾನಿಬಾನಿ ಉಗ್ರರನ್ನು ಬೆಳೆಸುತ್ತಿದೆ ಎಂದು ಹಿಲರಿ ಕ್ಲಿಂಟನ್ ಅವರೇ ಹೇಳಿದ್ದಾರೆ. ಇನ್ನಾದರೂ ಉಗ್ರವಾದ ಪೋಷಿಸುವುದನ್ನು ನಿಲ್ಲಿಸಬೇಕು’ ಎಂದರು.</p>.<p>‘ದೇಶದಲ್ಲಿನ ವೈವಿಧ್ಯವನ್ನು ಒಪ್ಪಿಕೊಂಡು ಅನುಮಾನಕ್ಕೆ ಆಸ್ಪದ ಇಲ್ಲದಂತೆ ಬದುಕಬೇಕು. ರಾಜಕಾರಣ ಆಯಾ ಪ್ರದೇಶದ ಅಭಿವೃದ್ಧಿಯ ಸೂಚ್ಯಂಕದ ಆಧಾರದ ಮೇಲೆ ನಡೆಯಬೇಕೇ ಹೊರತು ಧರ್ಮ ಅಥವಾ ಜಾತಿಯ ಆಧಾರದಲ್ಲಲ್ಲ. ಮನುಷ್ಯರ ನೆಮ್ಮದಿಗೆ ಪೂರಕವಾದ ಸೌಕರ್ಯ ಕಲ್ಪಿಸುವುದೇ ಆಳುವವರ ಆದ್ಯತೆಯಾಗಬೇಕು’ ಎಂದು ಹೇಳಿದರು.</p>.<p>ಬಾನು ಮುಷ್ತಾಕ್, ಬಿ.ಸುಜಯಕುಮಾರ್, ಪತ್ರಕರ್ತ ಕೆ.ದೀಪಕ್, ನಾಗಮಂಗಲ ತಾಲ್ಲೂಕು ಹೊನ್ನಾವರ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಟಿಪ್ಪು ಸುಲ್ತಾನ್ ಹಾಗೂ ಕುಸ್ತಿಪಟು ಪೈ. ಗಿರೀಶ್ ಅವರಿಗೆ ‘ಸೌಹಾರ್ದ ಸೇತು ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<div><blockquote>ಭಾರತದಲ್ಲಿ ವಾಸಿಸುವ ಮುಸ್ಲಿಂ ಕ್ರೈಸ್ತರ ಪೂರ್ವಜರು ಹಿಂದೂಗಳೇ ಆಗಿದ್ದು ಹಿಂದೂ ಬೌದ್ಧ ಜೈನ ಧರ್ಮೀಯರ ಜತೆ ಇವರಿಗೆ ಸಹೋದರತ್ವದ ನಂಟಿದೆ</blockquote><span class="attribution"> ಬಾನು ಮುಷ್ತಾಕ್ ಲೇಖಕಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong> : ‘ಇಸ್ಲಾಂ ಧರ್ಮದ ಹೆಸರಿನಲ್ಲಿ ಕಾಶ್ಮೀರದಲ್ಲಿ ನರಮೇಧ ನಡೆಸಿರುವವರು ನೈಜ ಮುಸ್ಲಿಮರಲ್ಲ. ನೈಜ ಮುಸ್ಲಿಮರಲ್ಲಿ ಪ್ರೀತಿ, ಕರುಣೆ, ಪರಸ್ಪರ ಸಹಕಾರ ಮನೋಭಾವ ಇರುತ್ತದೆ’ ಎಂದು ಲೇಖಕಿ ಬಾನು ಮುಷ್ತಾಕ್ ಹೇಳಿದರು.</p>.<p>ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಮುಸ್ಲಿಂ ಸೌಹಾರ್ದ ಒಕ್ಕೂಟದ ವಾರ್ಷಿಕೋತ್ಸವ ಮತ್ತು ‘ಸೌಹಾರ್ದ ಸೇತು ಸಾಧಕ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಕಾಶ್ಮೀರದಲ್ಲಿ ಪೈಶಾಚಿಕ ಕೃತ್ಯ ನಡೆಸಿರುವ ದುರುಳರು ಇಸ್ಲಾಂ ಧರ್ಮದ ತತ್ವವನ್ನೇ ಕೊಲೆ ಮಾಡಿದ್ದಾರೆ. ಮಕ್ಕಳು ಮತ್ತು ಪತ್ನಿಯ ಎದುರು ಅಮಾಯಕರನ್ನು ಹತ್ಯೆ ಮಾಡಿರುವುದು ಅರಗಿಸಿಕೊಳ್ಳಲಾಗದ ಕೃತ್ಯ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಅಮೆರಿಕ ತನ್ನ ಸ್ವಾರ್ಥಕ್ಕಾಗಿ ಅಲ್–ಖೈದಾ ಮತ್ತು ತಾನಿಬಾನಿ ಉಗ್ರರನ್ನು ಬೆಳೆಸುತ್ತಿದೆ ಎಂದು ಹಿಲರಿ ಕ್ಲಿಂಟನ್ ಅವರೇ ಹೇಳಿದ್ದಾರೆ. ಇನ್ನಾದರೂ ಉಗ್ರವಾದ ಪೋಷಿಸುವುದನ್ನು ನಿಲ್ಲಿಸಬೇಕು’ ಎಂದರು.</p>.<p>‘ದೇಶದಲ್ಲಿನ ವೈವಿಧ್ಯವನ್ನು ಒಪ್ಪಿಕೊಂಡು ಅನುಮಾನಕ್ಕೆ ಆಸ್ಪದ ಇಲ್ಲದಂತೆ ಬದುಕಬೇಕು. ರಾಜಕಾರಣ ಆಯಾ ಪ್ರದೇಶದ ಅಭಿವೃದ್ಧಿಯ ಸೂಚ್ಯಂಕದ ಆಧಾರದ ಮೇಲೆ ನಡೆಯಬೇಕೇ ಹೊರತು ಧರ್ಮ ಅಥವಾ ಜಾತಿಯ ಆಧಾರದಲ್ಲಲ್ಲ. ಮನುಷ್ಯರ ನೆಮ್ಮದಿಗೆ ಪೂರಕವಾದ ಸೌಕರ್ಯ ಕಲ್ಪಿಸುವುದೇ ಆಳುವವರ ಆದ್ಯತೆಯಾಗಬೇಕು’ ಎಂದು ಹೇಳಿದರು.</p>.<p>ಬಾನು ಮುಷ್ತಾಕ್, ಬಿ.ಸುಜಯಕುಮಾರ್, ಪತ್ರಕರ್ತ ಕೆ.ದೀಪಕ್, ನಾಗಮಂಗಲ ತಾಲ್ಲೂಕು ಹೊನ್ನಾವರ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಟಿಪ್ಪು ಸುಲ್ತಾನ್ ಹಾಗೂ ಕುಸ್ತಿಪಟು ಪೈ. ಗಿರೀಶ್ ಅವರಿಗೆ ‘ಸೌಹಾರ್ದ ಸೇತು ಪ್ರಶಸ್ತಿ’ ಪ್ರದಾನ ಮಾಡಲಾಯಿತು.</p>.<div><blockquote>ಭಾರತದಲ್ಲಿ ವಾಸಿಸುವ ಮುಸ್ಲಿಂ ಕ್ರೈಸ್ತರ ಪೂರ್ವಜರು ಹಿಂದೂಗಳೇ ಆಗಿದ್ದು ಹಿಂದೂ ಬೌದ್ಧ ಜೈನ ಧರ್ಮೀಯರ ಜತೆ ಇವರಿಗೆ ಸಹೋದರತ್ವದ ನಂಟಿದೆ</blockquote><span class="attribution"> ಬಾನು ಮುಷ್ತಾಕ್ ಲೇಖಕಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>