<p><strong>ಹಲಗೂರು</strong>: ‘ರಾಷ್ಟ್ರಕವಿ ಕುವೆಂಪು ಅವರ ವೈಚಾರಿಕ ಚಿಂತನೆಗಳು ಮತ್ತು ಸಂದೇಶಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೇ ಉತ್ತಮ ಸಮಾಜ ಕಟ್ಟಲು ಸಾಧ್ಯವಿದೆ’ ಎಂದು ಶಿಕ್ಷಕ ಶಿವರಾಮು ಅಭಿಪ್ರಾಯ ಪಟ್ಟರು.</p>.<p>ಹಲಗೂರಿನ ಲಯನ್ಸ್ ಭವನದಲ್ಲಿ ಲಯನ್ಸ್ ಕ್ಲಬ್ನಿಂದ ಆಯೋಜಿಸಿದ್ದ ಕುವೆಂಪು ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ವಿಶ್ವಮಾನವ ಎಂದು ಖ್ಯಾತಿ ಪಡೆದ ಕುವೆಂಪು ಅವರ ಸಾಹಿತ್ಯ ಕೃತಿಗಳಲ್ಲಿ ಜೀವನ ಮೌಲ್ಯಗಳು ಅಡಗಿವೆ. ತಮ್ಮ ಅದ್ಭುತ ಚಿಂತನೆ ವಿಚಾರ ಧಾರೆಗಳನ್ನು ಬರಹಗಳ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶ ನೀಡಿ ಅಜಾರಮರವಾಗಿ ಉಳಿದಿದ್ದಾರೆ’ ಎಂದು ಸ್ಮರಿಸಿದರು.</p>.<p>ಲಯನ್ಸ್ ಕ್ಲಬ್ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಶ್ರೀನಿವಾಸಚಾರಿ, ಖಜಾಂಚಿ ಡಿ.ಎಲ್. ಮಾದೇಗೌಡ, ಸದಸ್ಯರಾದ ಎಚ್.ಆರ್.ಪದ್ಮನಾಭ್, ಎ.ಎಸ್.ದೇವರಾಜು, ಡಾ.ಶಂಷುದ್ದೀನ್, ಎನ್.ಕೆ.ಕುಮಾರ್, ಎ.ಟಿ.ಶ್ರೀನಿವಾಸ್, ಎಲ್.ಸಿ.ಪುಟ್ಟಸ್ವಾಮಿ, ಪ್ರವೀಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು</strong>: ‘ರಾಷ್ಟ್ರಕವಿ ಕುವೆಂಪು ಅವರ ವೈಚಾರಿಕ ಚಿಂತನೆಗಳು ಮತ್ತು ಸಂದೇಶಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೇ ಉತ್ತಮ ಸಮಾಜ ಕಟ್ಟಲು ಸಾಧ್ಯವಿದೆ’ ಎಂದು ಶಿಕ್ಷಕ ಶಿವರಾಮು ಅಭಿಪ್ರಾಯ ಪಟ್ಟರು.</p>.<p>ಹಲಗೂರಿನ ಲಯನ್ಸ್ ಭವನದಲ್ಲಿ ಲಯನ್ಸ್ ಕ್ಲಬ್ನಿಂದ ಆಯೋಜಿಸಿದ್ದ ಕುವೆಂಪು ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ವಿಶ್ವಮಾನವ ಎಂದು ಖ್ಯಾತಿ ಪಡೆದ ಕುವೆಂಪು ಅವರ ಸಾಹಿತ್ಯ ಕೃತಿಗಳಲ್ಲಿ ಜೀವನ ಮೌಲ್ಯಗಳು ಅಡಗಿವೆ. ತಮ್ಮ ಅದ್ಭುತ ಚಿಂತನೆ ವಿಚಾರ ಧಾರೆಗಳನ್ನು ಬರಹಗಳ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶ ನೀಡಿ ಅಜಾರಮರವಾಗಿ ಉಳಿದಿದ್ದಾರೆ’ ಎಂದು ಸ್ಮರಿಸಿದರು.</p>.<p>ಲಯನ್ಸ್ ಕ್ಲಬ್ ಅಧ್ಯಕ್ಷ ಸುರೇಶ್, ಕಾರ್ಯದರ್ಶಿ ಶ್ರೀನಿವಾಸಚಾರಿ, ಖಜಾಂಚಿ ಡಿ.ಎಲ್. ಮಾದೇಗೌಡ, ಸದಸ್ಯರಾದ ಎಚ್.ಆರ್.ಪದ್ಮನಾಭ್, ಎ.ಎಸ್.ದೇವರಾಜು, ಡಾ.ಶಂಷುದ್ದೀನ್, ಎನ್.ಕೆ.ಕುಮಾರ್, ಎ.ಟಿ.ಶ್ರೀನಿವಾಸ್, ಎಲ್.ಸಿ.ಪುಟ್ಟಸ್ವಾಮಿ, ಪ್ರವೀಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>