<p><strong>ಮಂಡ್ಯ:</strong> ಜಿಲ್ಲೆಯ ಎರಡು ಕಡೆ ಬಾರ್ ಹಾಗೂ ವೈನ್ಶಾಪ್ಗೆ ಕನ್ನಹಾಕಿರುವ ಕಿಡಿಗೇಡಿಗಳು, ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಹೊತ್ತೊಯ್ದಿದ್ದಾರೆ.</p>.<p>ತಾಲ್ಲೂಕಿನ ಚಿಕ್ಕಮಂಡ್ಯದ ಕೃತಿಕಾ ಬಾರ್ನ ಕಿಟಕಿ ಸರಳು ಮುರಿದು ಒಳನುಗ್ಗಿ, ₹5 ಲಕ್ಷ ಮೌಲ್ಯದ ಮದ್ಯ ಕಳ್ಳತನ ಮಾಡಿದ್ದಾರೆ. ಟಾರ್ಚ್ ಬೆಳಕಿನಲ್ಲಿ ಕಳ್ಳತನ ಮಾಡುತ್ತಿರುವ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<p>ಮಳವಳ್ಳಿ ತಾಲ್ಲೂಕು ಹಾಡ್ಲಿ ವೃತ್ತದಲ್ಲಿರುವ ವಿನಾಯಕ ವೈನ್ಶಾಪ್ನಲ್ಲಿ ಗೋಡೆ ಕೊರೆದು ಗುರುವಾರ ರಾತ್ರಿ ಮದ್ಯ ಕದ್ದಿದ್ದಾರೆ.</p>.<p><strong>ಮಂಡ್ಯ: </strong>ಜಿಲ್ಲೆಯ ಎರಡು ಕಡೆ ಬಾರ್ ಹಾಗೂ ವೈನ್ಶಾಪ್ಗೆ ಕನ್ನಹಾಕಿರುವ ಕಿಡಿಗೇಡಿಗಳು, ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಹೊತ್ತೊಯ್ದಿದ್ದಾರೆ.ನಿಷೇಧಾಜ್ಞೆ ನಡುವೆಯೂ ಜಿಲ್ಲೆಯ ವಿವಿಧೆಡೆ ಕದ್ದುಮುಚ್ಚಿ ಮದ್ಯ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ.<br />ಮದ್ಯ ಸಂಗ್ರಹದಲ್ಲಿ ವ್ಯತ್ಯಾಸ ಕಂಡು ಬಂದರೆ ಅಂಗಡಿಗಳ ಲೈಸೆನ್ಸ್ ರದ್ದುಗೊಳಿಸಲಾಗುವುದು ಎಂದು ಅಬಕಾರಿ ಇಲಾಖೆ ಮೈಸೂರು ವಲಯದ ಜಂಟಿ ಆಯುಕ್ತ ಮಾದೇಶ್ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಜಿಲ್ಲೆಯ ಎರಡು ಕಡೆ ಬಾರ್ ಹಾಗೂ ವೈನ್ಶಾಪ್ಗೆ ಕನ್ನಹಾಕಿರುವ ಕಿಡಿಗೇಡಿಗಳು, ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಹೊತ್ತೊಯ್ದಿದ್ದಾರೆ.</p>.<p>ತಾಲ್ಲೂಕಿನ ಚಿಕ್ಕಮಂಡ್ಯದ ಕೃತಿಕಾ ಬಾರ್ನ ಕಿಟಕಿ ಸರಳು ಮುರಿದು ಒಳನುಗ್ಗಿ, ₹5 ಲಕ್ಷ ಮೌಲ್ಯದ ಮದ್ಯ ಕಳ್ಳತನ ಮಾಡಿದ್ದಾರೆ. ಟಾರ್ಚ್ ಬೆಳಕಿನಲ್ಲಿ ಕಳ್ಳತನ ಮಾಡುತ್ತಿರುವ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ.</p>.<p>ಮಳವಳ್ಳಿ ತಾಲ್ಲೂಕು ಹಾಡ್ಲಿ ವೃತ್ತದಲ್ಲಿರುವ ವಿನಾಯಕ ವೈನ್ಶಾಪ್ನಲ್ಲಿ ಗೋಡೆ ಕೊರೆದು ಗುರುವಾರ ರಾತ್ರಿ ಮದ್ಯ ಕದ್ದಿದ್ದಾರೆ.</p>.<p><strong>ಮಂಡ್ಯ: </strong>ಜಿಲ್ಲೆಯ ಎರಡು ಕಡೆ ಬಾರ್ ಹಾಗೂ ವೈನ್ಶಾಪ್ಗೆ ಕನ್ನಹಾಕಿರುವ ಕಿಡಿಗೇಡಿಗಳು, ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಹೊತ್ತೊಯ್ದಿದ್ದಾರೆ.ನಿಷೇಧಾಜ್ಞೆ ನಡುವೆಯೂ ಜಿಲ್ಲೆಯ ವಿವಿಧೆಡೆ ಕದ್ದುಮುಚ್ಚಿ ಮದ್ಯ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ.<br />ಮದ್ಯ ಸಂಗ್ರಹದಲ್ಲಿ ವ್ಯತ್ಯಾಸ ಕಂಡು ಬಂದರೆ ಅಂಗಡಿಗಳ ಲೈಸೆನ್ಸ್ ರದ್ದುಗೊಳಿಸಲಾಗುವುದು ಎಂದು ಅಬಕಾರಿ ಇಲಾಖೆ ಮೈಸೂರು ವಲಯದ ಜಂಟಿ ಆಯುಕ್ತ ಮಾದೇಶ್ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>