ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮುತ್ತತ್ತಿ: ದೇವಸ್ಥಾನದಲ್ಲಿ ಕಳವು

Last Updated 20 ಸೆಪ್ಟೆಂಬರ್ 2021, 4:04 IST
ಅಕ್ಷರ ಗಾತ್ರ

ಬೆಳಕವಾಡಿ: ಮಳವಳ್ಳಿ ತಾಲ್ಲೂಕಿನ ಚಿಕ್ಕಮುತ್ತತ್ತಿ ಆಂಜನೇಯಸ್ವಾಮಿ ದೇವಸ್ಥಾನದ ಬೀಗ ಮುರಿದ ಕಳ್ಳರು ದೇವರ ಪೂಜಾ ಸಾಮಗ್ರಿಗಳನ್ನು ಕಳವು ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಆರ್ಚಕರು ಗುರುವಾರ ಸಂಜೆ ಪೂಜೆ ಮುಗಿಸಿ ಬಾಗಿಲು ಹಾಕಿಕೊಂಡು ಹೋಗಿ, ಶುಕ್ರವಾರ ಮಧ್ಯಾಹ್ನ ದೇವಸ್ಥಾನದ ಬಾಗಿಲು ತೆರೆದಾಗ ಕಳ್ಳತ ನವಾಗಿರುವುದು ಬೆಳಕಿಗೆ ಬಂದಿದೆ.

ಹಿತ್ತಾಳೆ ಹಾಗೂ ಪಂಚಲೋಹದ ದೇವರಕವಚ, ಪೂಜಾ ಸಾಮಗ್ರಿ ಸೇರಿದಂತೆ ₹ 60 ಸಾವಿರ ಮೌಲ್ಯದ ವಸ್ತುಗಳು ಕಳವಾಗಿವೆ ಎಂದು ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಪಿಎಸ್ಐ ಕೆ.ಎಂ.ಮಹೇಶ್ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT