ಗ್ರಾಮದ ಮುಖಂಡ ರಾಜಶೆಟ್ಟಿ ಮಾತನಾಡಿ, ‘ನಮ್ಮ ಪೂರ್ವಿಕರು ಕಾಶಿ ವಿಶ್ವನಾಥ ದೇವಸ್ಥಾನದಿಂದ ಅಲ್ಲಿನ ಮಾದರಿಯ ಶಿವಲಿಂಗ ತಂದು ಪ್ರತಿಷ್ಠಾಪಿಸಿದ್ದರು. ಅಂದಿನಿಂದಲೂ ಸಂಪ್ರದಾಯದಂತೆ ವಿಶೇಷ ಪೂಜಾ ಕೈಂಕರ್ಯ ನಡೆಸಿಕೊಂಡು ಬರಲಾಗಿತ್ತು. ಇದೀಗ ದೇವಸ್ಥಾನದ ಅಭಿವೃದ್ಧಿಯನ್ನು ಹಂತಹಂತವಾಗಿ ನಡೆಸಲಾಗುತ್ತಿತ್ತು. ಘಟನೆ ಸಂಬಂಧ ಪುರೋಹಿತರನ್ನು ಸಂಪರ್ಕಿಸಿ ನೂತನ ಲಿಂಗ ಪ್ರತಿಷ್ಠಾಪಿಸಬೇಕೇ, ಅಥವಾ ಲಿಂಗಶುದ್ಧಿ ನಡೆಸಬೇಕೇ ಎಂಬುದರ ಕುರಿತು ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದರು.