ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಕ್ಕಳ ಅಪೌಷ್ಟಿಕತೆಯನ್ನು ಹೋಗಲಾಡಿಸಲು ತಜ್ಞರ ಸಲಹೆ ಮೇರೆಗೆ ಮೊಟ್ಟೆ ವಿತರಿಸಲಾಗುತ್ತಿದೆ. ಯಾರ ಮೇಲೂ ಒತ್ತಡ ಹೇರಿಲ್ಲ. ಮೊಟ್ಟೆ, ಬಾಳೆಹಣ್ಣಿನೊಂದಿಗೆ ಇತರ ಪೌಷ್ಟಿಕಾಂಶವುಳ್ಳ ಪದಾರ್ಥಗಳನ್ನೂ ಆಯ್ಕೆ ಮಾಡಲಾಗಿದ್ದು, ತಜ್ಞರು ಒಪ್ಪಿದರೆ ಅವುಗಳನ್ನು ನೀಡಲಾಗುವುದು’ ಎಂದರು.