<p><strong>ಶ್ರೀರಂಗಪಟ್ಟಣ:</strong> ‘ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಹೆಸರಿನಲ್ಲಿ ಪಟ್ಟಣದಲ್ಲಿ ವಿಶ್ವವಿದ್ಯಾಲಯ ಮತ್ತು ಟಿಪ್ಪು ಸುಲ್ತಾನ್ ಸಂಶೋಧನಾ ಕೇಂದ್ರ ತೆರೆಯುವ ಕುರಿತು ಚಿಂತನೆ ನಡೆದಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರ ಜತೆ ಚರ್ಚೆ ನಡೆಸಿದ್ದೇನೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.</p>.<p>ಪಟ್ಟಣದ ಈದ್ಗಾ ಮೈದಾನದಲ್ಲಿ ಸೋಮವಾರ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿ ಮಾತನಾಡಿದ ಅವರು, ‘ಯುದ್ದ ಭೂಮಿಯಲ್ಲಿ ವಿಶ್ವದಲ್ಲೇ ಮೊದಲು ರಾಕೆಟ್ ಬಳಸಿದ್ದು ಟಿಪ್ಪು ಸುಲ್ತಾನ್. ಬ್ರಿಟಿಷರ ವಿರುದ್ಧ ನಡೆದ ಯುದ್ದದಲ್ಲಿ ಆತ ಬಳಸಿದ ರಾಕೆಟ್ಗಳು ಈಗಲೂ ಬ್ರಿಟಿಷ್ ಮ್ಯೂಸಿಯಂನಲ್ಲಿವೆ. ಈ ಕಾರಣಕ್ಕೆ ಅಬ್ದುಲ್ ಕಲಾಂ ಅವರಿಗೆ ಟಿಪ್ಪು ಮತ್ತು ಈ ಊರಿನ ಬಗ್ಗೆ ವಿಶೇಷ ಆಸಕ್ತಿ ಇತ್ತು’ ಎಂದರು.</p>.<p>‘ಕಲಾಂ ಅವರು ರಾಷ್ಟ್ರಪತಿಯಾಗಿದ್ದಾಗ ಇಲ್ಲಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಕಾರಣಾಂತರಗಳಿಂದ ರದ್ದಾಯಿತು. 9ನೇ ಶತಮಾನದಿಂದಲೂ ಈ ಪಟ್ಟಣ ರಾಜರ ಆಳ್ವಿಕೆಗೆ ಒಳಪಟ್ಟಿದ್ದು, ಜಾಗತಿಕ ಭೂ ಪಟದಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ. ಈ ಪಾರಂಪರಿಕ ಪಟ್ಟಣದಲ್ಲಿ ಸ್ಥಾಪಿಸುವ ವಿಶ್ವವಿದ್ಯಾಲಯದಲ್ಲಿ ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಪದವಿವರೆಗೆ ಶಿಕ್ಷಣ ಸಿಗುವಂತೆ ಯೋಜಿಸಲಾಗುವುದು’ ಎಂದರು.</p>.<p>‘ಜನಪರ ಆಡಳಿತ ನೀಡಿದ ಮತ್ತು ನಾಡಿನ ರಕ್ಷಣೆಗಾಗಿ ಹೋರಾಡುತ್ತಲೇ ಮಡಿದ ಟಿಪ್ಪುಸುಲ್ತಾನ್ ಈ ನೆಲದ ಹೆಮ್ಮೆ. ಆತ ಜಾರಿಗೆ ತಂದ ಸಾಮಾಜಿಕ, ಆರ್ಥಿಕ ಮತ್ತು ಕೃಷಿ ಕ್ಷೇತ್ರದ ಸುಧಾರಣೆಗಳು ಜನ ಮನ್ನಣೆ ಗಳಿಸಿವೆ. ಹೀಗಾಗಿ, ಆತನ ಹೆಸರಿನಲ್ಲಿ ಸಂಶೋಧನಾ ಕೇಂದ್ರ ತೆರೆಯಲಾಗುವುದು. ಶೀಘ್ರ ಶಿಕ್ಷಣ ತಜ್ಞರು ಮತ್ತು ಉನ್ನತ ಅಧಿಕಾರಿಗಳ ಸಭೆ ನಡೆಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ‘ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಹೆಸರಿನಲ್ಲಿ ಪಟ್ಟಣದಲ್ಲಿ ವಿಶ್ವವಿದ್ಯಾಲಯ ಮತ್ತು ಟಿಪ್ಪು ಸುಲ್ತಾನ್ ಸಂಶೋಧನಾ ಕೇಂದ್ರ ತೆರೆಯುವ ಕುರಿತು ಚಿಂತನೆ ನಡೆದಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರ ಜತೆ ಚರ್ಚೆ ನಡೆಸಿದ್ದೇನೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.</p>.<p>ಪಟ್ಟಣದ ಈದ್ಗಾ ಮೈದಾನದಲ್ಲಿ ಸೋಮವಾರ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿ ಮಾತನಾಡಿದ ಅವರು, ‘ಯುದ್ದ ಭೂಮಿಯಲ್ಲಿ ವಿಶ್ವದಲ್ಲೇ ಮೊದಲು ರಾಕೆಟ್ ಬಳಸಿದ್ದು ಟಿಪ್ಪು ಸುಲ್ತಾನ್. ಬ್ರಿಟಿಷರ ವಿರುದ್ಧ ನಡೆದ ಯುದ್ದದಲ್ಲಿ ಆತ ಬಳಸಿದ ರಾಕೆಟ್ಗಳು ಈಗಲೂ ಬ್ರಿಟಿಷ್ ಮ್ಯೂಸಿಯಂನಲ್ಲಿವೆ. ಈ ಕಾರಣಕ್ಕೆ ಅಬ್ದುಲ್ ಕಲಾಂ ಅವರಿಗೆ ಟಿಪ್ಪು ಮತ್ತು ಈ ಊರಿನ ಬಗ್ಗೆ ವಿಶೇಷ ಆಸಕ್ತಿ ಇತ್ತು’ ಎಂದರು.</p>.<p>‘ಕಲಾಂ ಅವರು ರಾಷ್ಟ್ರಪತಿಯಾಗಿದ್ದಾಗ ಇಲ್ಲಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಕಾರಣಾಂತರಗಳಿಂದ ರದ್ದಾಯಿತು. 9ನೇ ಶತಮಾನದಿಂದಲೂ ಈ ಪಟ್ಟಣ ರಾಜರ ಆಳ್ವಿಕೆಗೆ ಒಳಪಟ್ಟಿದ್ದು, ಜಾಗತಿಕ ಭೂ ಪಟದಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ. ಈ ಪಾರಂಪರಿಕ ಪಟ್ಟಣದಲ್ಲಿ ಸ್ಥಾಪಿಸುವ ವಿಶ್ವವಿದ್ಯಾಲಯದಲ್ಲಿ ಪ್ರಾಥಮಿಕ ಹಂತದಿಂದ ಸ್ನಾತಕೋತ್ತರ ಪದವಿವರೆಗೆ ಶಿಕ್ಷಣ ಸಿಗುವಂತೆ ಯೋಜಿಸಲಾಗುವುದು’ ಎಂದರು.</p>.<p>‘ಜನಪರ ಆಡಳಿತ ನೀಡಿದ ಮತ್ತು ನಾಡಿನ ರಕ್ಷಣೆಗಾಗಿ ಹೋರಾಡುತ್ತಲೇ ಮಡಿದ ಟಿಪ್ಪುಸುಲ್ತಾನ್ ಈ ನೆಲದ ಹೆಮ್ಮೆ. ಆತ ಜಾರಿಗೆ ತಂದ ಸಾಮಾಜಿಕ, ಆರ್ಥಿಕ ಮತ್ತು ಕೃಷಿ ಕ್ಷೇತ್ರದ ಸುಧಾರಣೆಗಳು ಜನ ಮನ್ನಣೆ ಗಳಿಸಿವೆ. ಹೀಗಾಗಿ, ಆತನ ಹೆಸರಿನಲ್ಲಿ ಸಂಶೋಧನಾ ಕೇಂದ್ರ ತೆರೆಯಲಾಗುವುದು. ಶೀಘ್ರ ಶಿಕ್ಷಣ ತಜ್ಞರು ಮತ್ತು ಉನ್ನತ ಅಧಿಕಾರಿಗಳ ಸಭೆ ನಡೆಸಲಾಗುವುದು’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>