<p><strong>ನಾಗಮಂಗಲ</strong>: ಕಲ್ಲು ಗಣಿಗಾರಿಕೆ ಕ್ವಾರಿಯ ನೀರಿಗೆ ಶುಕ್ರವಾರ ಮುಂಜಾನೆ ಬಿದ್ದಿದ್ದ ಟಿಪ್ಪರ್ ಲಾರಿ ಚಾಲಕನ ಶವವು ಮೂರು ದಿನದ ನಂತರ ಸೋಮವಾರ ರಾತ್ರಿ ಪತ್ತೆಯಾಗಿದೆ. </p>.<p>ತಾಲ್ಲೂಕಿನ ದುಮ್ಮಸಂದ್ರ ಗ್ರಾಮದ ಲಕ್ಷ್ಮಣ ಅಲಿಯಾಸ್ ಲಚ್ಚಿ (45) ಎಂಬಾತನೇ ಮೃತಪಟ್ಟ ಟಿಪ್ಪರ್ ಚಾಲಕ.</p>.<p>ತಾಲ್ಲೂಕಿನ ವಡೇರಪುರ ಸಮೀಪದ ದೊಡ್ಡಜಟಕಾ ರಸ್ತೆಯಲ್ಲಿರುವ ಬಸವೇಶ್ವರ ಸ್ಟೋನ್ ಕ್ರಷರ್ನಲ್ಲಿ ಶುಕ್ರವಾರ ನಸುಕಿನ ವೇಳೆ ಘಟನೆ ಸಂಭವಿಸಿತ್ತು.</p>.<p>ವಡೇರಪುರ ಗ್ರಾಮದ ಕಾಂತರಾಜು ಎಂಬುವರಿಗೆ ಸೇರಿದ ಬಸವೇಶ್ವರ ಸ್ಟೋನ್ ಕ್ರಷರ್ ಮತ್ತು ಕಲ್ಲುಗಣಿಗಾರಿಕೆ ಕ್ವಾರಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ (ಲಚ್ಚಿ) ಟಿಪ್ಪರ್ ಲಾರಿಯಲ್ಲಿ ಬೋರ್ಡ್ರಸ್ ಕಲ್ಲು ತುಂಬಿಕೊಂಡು ಕಿರಿದಾದ ಕಲ್ಲುಕ್ವಾರಿಯ ರಸ್ತೆಯಲ್ಲಿ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಟಿಪ್ಪರ್ ಪಕ್ಕದಲ್ಲಿನ ನೀರು ತುಂಬಿದ ಹಳ್ಳಕ್ಕೆ ಉರುಳಿಬಿದ್ದು ಈ ಅವಘಡ ಸಂಭವಿಸಿತ್ತು.</p>.<p>ಈಜು ತಜ್ಞ ಈಶ್ವರ್ ಮಲ್ಪೆ ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ಮೃತದೇಹಕ್ಕಾಗಿ ಶೋಧ ನಡೆಸಿದ್ದರು ಕೂಡ ಮೃತದೇಹ ಪತ್ತೆಯಾಗಿರಲಿಲ್ಲ. ಶನಿವಾರ ಟಿಪ್ಪರ್ ಲಾರಿಯನ್ನು ಪತ್ತೆಹಚ್ಚಿ ಮೆಲಕ್ಕೆತ್ತಲಾಗಿತ್ತು. ಸೋಮವಾರ ಮೃತದೇಹ ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ</strong>: ಕಲ್ಲು ಗಣಿಗಾರಿಕೆ ಕ್ವಾರಿಯ ನೀರಿಗೆ ಶುಕ್ರವಾರ ಮುಂಜಾನೆ ಬಿದ್ದಿದ್ದ ಟಿಪ್ಪರ್ ಲಾರಿ ಚಾಲಕನ ಶವವು ಮೂರು ದಿನದ ನಂತರ ಸೋಮವಾರ ರಾತ್ರಿ ಪತ್ತೆಯಾಗಿದೆ. </p>.<p>ತಾಲ್ಲೂಕಿನ ದುಮ್ಮಸಂದ್ರ ಗ್ರಾಮದ ಲಕ್ಷ್ಮಣ ಅಲಿಯಾಸ್ ಲಚ್ಚಿ (45) ಎಂಬಾತನೇ ಮೃತಪಟ್ಟ ಟಿಪ್ಪರ್ ಚಾಲಕ.</p>.<p>ತಾಲ್ಲೂಕಿನ ವಡೇರಪುರ ಸಮೀಪದ ದೊಡ್ಡಜಟಕಾ ರಸ್ತೆಯಲ್ಲಿರುವ ಬಸವೇಶ್ವರ ಸ್ಟೋನ್ ಕ್ರಷರ್ನಲ್ಲಿ ಶುಕ್ರವಾರ ನಸುಕಿನ ವೇಳೆ ಘಟನೆ ಸಂಭವಿಸಿತ್ತು.</p>.<p>ವಡೇರಪುರ ಗ್ರಾಮದ ಕಾಂತರಾಜು ಎಂಬುವರಿಗೆ ಸೇರಿದ ಬಸವೇಶ್ವರ ಸ್ಟೋನ್ ಕ್ರಷರ್ ಮತ್ತು ಕಲ್ಲುಗಣಿಗಾರಿಕೆ ಕ್ವಾರಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಲಕ್ಷ್ಮಣ (ಲಚ್ಚಿ) ಟಿಪ್ಪರ್ ಲಾರಿಯಲ್ಲಿ ಬೋರ್ಡ್ರಸ್ ಕಲ್ಲು ತುಂಬಿಕೊಂಡು ಕಿರಿದಾದ ಕಲ್ಲುಕ್ವಾರಿಯ ರಸ್ತೆಯಲ್ಲಿ ಬರುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಟಿಪ್ಪರ್ ಪಕ್ಕದಲ್ಲಿನ ನೀರು ತುಂಬಿದ ಹಳ್ಳಕ್ಕೆ ಉರುಳಿಬಿದ್ದು ಈ ಅವಘಡ ಸಂಭವಿಸಿತ್ತು.</p>.<p>ಈಜು ತಜ್ಞ ಈಶ್ವರ್ ಮಲ್ಪೆ ತಂಡ ಹಾಗೂ ಅಗ್ನಿಶಾಮಕ ಸಿಬ್ಬಂದಿ ಮೃತದೇಹಕ್ಕಾಗಿ ಶೋಧ ನಡೆಸಿದ್ದರು ಕೂಡ ಮೃತದೇಹ ಪತ್ತೆಯಾಗಿರಲಿಲ್ಲ. ಶನಿವಾರ ಟಿಪ್ಪರ್ ಲಾರಿಯನ್ನು ಪತ್ತೆಹಚ್ಚಿ ಮೆಲಕ್ಕೆತ್ತಲಾಗಿತ್ತು. ಸೋಮವಾರ ಮೃತದೇಹ ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>