<p><strong>ಪಾಂಡವಪುರ</strong>: ಬಾಯಿ ಕ್ಯಾನ್ಸರ್ಗೆ ಕಾರಣವಾಗಿರುವ ತಂಬಾಕು ಸೇವನೆಗೆ ಕಡಿವಾಣ ಹಾಕಬೇಕಿದೆ ಎಂದು ದಂತ ತಜ್ಞೆ ಡಾ.ಪ್ರಿಯದರ್ಶಿನಿ ಹೇಳಿದರು.</p>.<p>ತಾಲ್ಲೂಕಿನ ಚಿನಕುರಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಚೆಗೆ ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜಾಗೃತಿ ಹಾಗೂ ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಬೀಡಿ, ಸಿಗರೇಟು ಸೇರಿ ತಂಬಾಕು ಉತ್ಪನ್ನಗಳ ಧೂಮಪಾನವನ್ನು ಜನರು ನಿಲ್ಲಿಸಬೇಕು. ಜತೆಗೆ ಗುಟ್ಕಾ, ಪಾನ್ಪರಾಗ್ನಂತಹ ವಸ್ತುಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಜನರು ತಾವು ಸೇವಿಸುವ ಆಹಾರ ಮತ್ತು ತಮ್ಮ ಜೀವನ ಶೈಲಿ ಉತ್ತಮವಾಗಿರಬೇಕು. ಆಗಾಗ್ಗೆ ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.</p>.<p>ಬಳಿಕ ಡಾ.ಪ್ರಿಯದರ್ಶಿನಿ ಅವರು ಜನರಿಗೆ ಬಾಯಿ ತಪಾಸಣೆ ಮಾಡಿ, ವೈದ್ಯಕೀಯ ಸಲಹೆ ನೀಡಿದರು.</p>.<p>ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವೈದ್ಯಾಧಿಕಾರಿಗಳಾದ ಡಾ.ಸೀಮಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಸಿ. ಶಿವಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿ ಪುಟ್ಟಸ್ವಾಮಿ, ಹರಿಕೃಷ್ಣ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಚಂದನ್, ವಿಜಯ್, ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ಬಾಯಿ ಕ್ಯಾನ್ಸರ್ಗೆ ಕಾರಣವಾಗಿರುವ ತಂಬಾಕು ಸೇವನೆಗೆ ಕಡಿವಾಣ ಹಾಕಬೇಕಿದೆ ಎಂದು ದಂತ ತಜ್ಞೆ ಡಾ.ಪ್ರಿಯದರ್ಶಿನಿ ಹೇಳಿದರು.</p>.<p>ತಾಲ್ಲೂಕಿನ ಚಿನಕುರಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಚೆಗೆ ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜಾಗೃತಿ ಹಾಗೂ ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಬೀಡಿ, ಸಿಗರೇಟು ಸೇರಿ ತಂಬಾಕು ಉತ್ಪನ್ನಗಳ ಧೂಮಪಾನವನ್ನು ಜನರು ನಿಲ್ಲಿಸಬೇಕು. ಜತೆಗೆ ಗುಟ್ಕಾ, ಪಾನ್ಪರಾಗ್ನಂತಹ ವಸ್ತುಗಳನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಜನರು ತಾವು ಸೇವಿಸುವ ಆಹಾರ ಮತ್ತು ತಮ್ಮ ಜೀವನ ಶೈಲಿ ಉತ್ತಮವಾಗಿರಬೇಕು. ಆಗಾಗ್ಗೆ ತಮ್ಮ ಆರೋಗ್ಯವನ್ನು ತಪಾಸಣೆ ಮಾಡಿಸಿಕೊಳ್ಳಬೇಕು ಎಂದರು.</p>.<p>ಬಳಿಕ ಡಾ.ಪ್ರಿಯದರ್ಶಿನಿ ಅವರು ಜನರಿಗೆ ಬಾಯಿ ತಪಾಸಣೆ ಮಾಡಿ, ವೈದ್ಯಕೀಯ ಸಲಹೆ ನೀಡಿದರು.</p>.<p>ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಸಂದೀಪ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವೈದ್ಯಾಧಿಕಾರಿಗಳಾದ ಡಾ.ಸೀಮಾ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಸಿ. ಶಿವಮ್ಮ, ಆರೋಗ್ಯ ನಿರೀಕ್ಷಣಾಧಿಕಾರಿ ಪುಟ್ಟಸ್ವಾಮಿ, ಹರಿಕೃಷ್ಣ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಚಂದನ್, ವಿಜಯ್, ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>