ಪಟ್ಟಣದ ನದಿ ತೀರ, ಗಂಜಾಂ, ಗೋಸಾಯಿಘಾಟ್, ಪಶ್ಚಿಮವಾಹಿನಿ ಮತ್ತು ಕಾವೇರಿ ಸಂಗಮ ಅಪಾರ ಭಕ್ತರು ಬರಲಿದ್ದಾರೆ. ಪೂಜೆ, ಹೋಮ, ಹವನ ಇನ್ನಿತರ ಧಾರ್ಮಿಕ ಕಾರ್ಯಗಳಿಗಾಗಿ ಬರುವವರನ್ನು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಬೇಕು. ಸ್ಯಾನಿಟೈಸರ್ ನೀಡಬೇಕು. ಅಂತರ ಕಾಪಾಡಿಕೊಳ್ಳುವ ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 10 ವರ್ಷ ಒಳಗಿನ ಮತ್ತು 65 ವರ್ಷ ಮೇಲ್ಪಟ್ಟವರಿಗೆ ಅವಕಾಶ ನೀಡಬಾರದು. ಬಟ್ಟೆ, ಇತರ ತ್ಯಾಜ್ಯವನ್ನು ನದಿಯಲ್ಲಿ ವಿಸರ್ಜಿಸಬಾರದು ಎಂದು ತಿಳಿಸಿದ್ದಾರೆ.