<p><strong>ಮಂಡ್ಯ:</strong> ‘ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು ಪ್ರವಾಸಿ ತಾಣಗಳನ್ನು ಪ್ರಚುರಪಡಿಸಲು ಪ್ರವಾಸಿ ಗೈಡ್, ಮ್ಯಾಪ್ ಹಾಗೂ ವೆಬ್ಸೈಟ್ಗಳನ್ನು ಸಿದ್ಧಪಡಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.</p>.<p>ಕಾವೇರಿ ನದಿ ತೀರದಲ್ಲಿ ಒತ್ತುವರಿಯಾಗಿರುವ ಜಾಗಗಳನ್ನು ತೆರವುಗೊಳಿಸುವ ಸಂಬಂಧ ಚರ್ಚಿಸಲು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರವಾಸೋದ್ಯಮ ನೀತಿ 2024-29ರಡಿ ಮಂಡ್ಯ ಜಿಲ್ಲೆಯಲ್ಲಿ 106 ಪ್ರವಾಸಿ ತಾಣಗಳನ್ನು ಸರ್ಕಾರದಿಂದ ಅಧಿಕೃತವಾಗಿ ಗುರುತಿಸಲಾಗಿದೆ ಎಂದು ಹೇಳಿದರು.</p>.<p>ಜಿಲ್ಲೆಯ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ರೀತಿಯ ವೆಬ್ಸೈಟ್ ಇರದ ಕಾರಣ ಪ್ರವಾಸೋದ್ಯಮ ಉತ್ತೇಜನ ನೀಡುವ ನಿಟ್ಟಿನಲ್ಲಿ ಜಿಲ್ಲಾ ಪ್ರವಾಸೋದ್ಯಮದ ಕುರಿತು ‘ಮಧುರ ಮಂಡ್ಯ’ ವೆಬ್ಸೈಟ್ ಅನ್ನು ಸಾರ್ವಜನಿಕರ ಹಾಗೂ ಪ್ರವಾಸಿಗರ ಉಪಯೋಗಕ್ಕಾಗಿ ಸಿದ್ಧಪಡಿಸಲಾಗಿದೆ. ಅಧಿಕೃತವಾಗಿ ಚಾಲನೆಯನ್ನು ಶೀಘ್ರದಲ್ಲೇ ನೀಡಲಾಗುವುದು ಎಂದರು.</p>.<p>ಮೇಲುಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಿಸಿರುವ ಯಾತ್ರಿನಿವಾಸ ಕಟ್ಟಡವನ್ನು ನಿರ್ವಹಣೆಗಾಗಿ ವಹಿಸುವ ಸಂಬಂಧ ಪ್ರವಾಸೋದ್ಯಮ ಇಲಾಖೆಯಿಂದ ಕರೆಯಲಾಗಿದ್ದ ಇ-ಟೆಂಡರ್ ನಲ್ಲಿ ಬಿಡ್ಡುದಾರರು ಭಾಗವಹಿಸದ ಹಿನ್ನೆಲೆಯಲ್ಲಿ ಸದರಿ ಕಟ್ಟಡವನ್ನು ಮೇಲುಕೋಟೆಯ ಧಾರ್ಮಿಕ ದತ್ತಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಮರ್ಪಕವಾಗಿ ನಿರ್ವಹಿಸಲು ತಿಳಿಸಿದರು.</p>.<p><strong>ಮರು ಟೆಂಡರ್ ಆಹ್ವಾನಿಸಿ:</strong></p>.<p>ನಾಗಮಂಗಲ ತಾಲ್ಲೂಕಿನ ಮುಳುಕಟ್ಟಮ್ಮ ದೇವಾಲಯದ ಬಳಿ ನಿರ್ಮಿಸಿರುವ ಯಾತ್ರಿ ನಿವಾಸ ಕಟ್ಟಡವನ್ನು ನಿರ್ವಹಣೆಗಾಗಿ ವಹಿಸುವ ಸಂಬಂಧ ಪ್ರವಾಸೋದ್ಯಮ ಇಲಾಖೆಯಿಂದ ಕರೆಯಲಾಗಿದ್ದ ಇ-ಟೆಂಡರ್ನಲ್ಲಿ ಇಬ್ಬರು ಬಿಡ್ಡುದಾರರು ಭಾಗವಹಿಸಿದ್ದು, ಸದರಿಯವರ ಅಗತ್ಯ ದಾಖಲೆಗಳನ್ನು ಸಲ್ಲಿಸದೇ ಇರುವ ಹಿನ್ನೆಲೆಯಲ್ಲಿ, ತಾಂತ್ರಿಕವಾಗಿ ಬಿಡ್ಗಳು ಅನರ್ಹವಾಗಿದ್ದು, ಸದರಿ ಟೆಂಡರ್ ಅನ್ನು ರದ್ದುಪಡಿಸಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವತಿಯಿಂದ ನಿರ್ವಹಿಸಲು ಸೂಕ್ತ ಸಂಸ್ಥೆಯನ್ನು ಆಯ್ಕೆ ಮಾಡಲು ಹೊಸದಾಗಿ ಮರು ಟೆಂಡರ್ ಆಹ್ವಾನಿಸಿ ಎಂದು ಹೇಳಿದರು.</p>.<p>ಮಂಡ್ಯ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮ ಇಲಾಖೆಯ ಅನುದಾನದಲ್ಲಿ ಒಟ್ಟು ₹36.72 ಕೋಟಿಯಲ್ಲಿ 41 ಮುಂದುವರಿದ ಪ್ರವಾಸಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ತಿಳಿಸಿದರು.</p>.<p>ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗಂಗಾಧರಸ್ವಾಮಿ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ-1 ಶಿವಲಿಂಗಯ್ಯ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪನಿರ್ದೇಶಕಿ ಗೀತಾ ಪಾಲ್ಗೊಂಡಿದ್ದರು. </p>.<p><strong>ಇ–ಟೆಂಡರ್: ಬಿಡ್ಡುದಾರರ ನಿರಾಸಕ್ತಿ’</strong> </p><p>ಶ್ರೀರಂಗಪಟ್ಟಣದ ಕೋಟೆ ಪ್ರದೇಶದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಅನುಷ್ಠಾನಗೊಳಿಸಿರುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮದ ನಿರ್ವಹಣೆಗಾಗಿ ಸೂಕ್ತ ಸಂಸ್ಥೆಯನ್ನು ಆಯ್ಕೆ ಮಾಡಲು ಆಹ್ವಾನಿಸಲಾಗಿದ್ದ ಇ-ಟೆಂಡರ್ ನಲ್ಲಿ ಯಾವುದೇ ಬಿಡ್ಡುದಾರರು ಭಾಗವಹಿಸದ ಹಿನ್ನೆಲೆಯಲ್ಲಿ ಸದರಿ ಸೌಲಭ್ಯವನ್ನು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವತಿಯಿಂದ ನಿರ್ವಹಿಸಲು ಸರ್ಕಾರದಿಂದ ಅನುದಾನ ಪಡೆಯಲು ಪ್ರಸ್ತಾವ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು. ಮದ್ದೂರು ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಪ್ರವಾಸಿ ತಾಣದಲ್ಲಿ ನಿರ್ಮಿಸಿರುವ ‘ನೇಚರ್ ಇಂಟರ್ಪ್ರಿಟೇಷನ್ ಸೆಂಟರ್’ ಸೌಲಭ್ಯದ ನಿರ್ವಹಣೆಗಾಗಿ ಸೂಕ್ತ ಸಂಸ್ಥೆಯನ್ನು ಆಯ್ಕೆ ಮಾಡಲು ಆಹ್ವಾನಿಸಲಾಗಿದ್ದ ಇ-ಟೆಂಡರ್ ನಲ್ಲಿ ಯಾವುದೇ ಬಿಡ್ಡುದಾರರು ಭಾಗವಹಿಸದ ಹಿನ್ನೆಲೆಯಲ್ಲಿ ಸದರಿ ಸೌಲಭ್ಯವನ್ನು ‘WWF INDIA’ ಸಂಸ್ಥೆಯಿಂದ ನಿರ್ವಹಿಸಲು ಸರ್ಕಾರದಿಂದ ಸೂಕ್ತ ಸ್ಪಷ್ಟೀಕರಣ ಪಡೆಯಬೇಕು ಎಂದು ಹೇಳಿದರು.</p>.<p><strong>‘ಕಾವೇರಿ ತೀರದ ಹೋಂಸ್ಟೇ ರದ್ದುಪಡಿಸಿ’</strong> </p><p>ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯ ನಿರ್ಮಿಸಲಾಗಿರುವ ಎರಡು ಹೋಂಸ್ಟೇಗಳು ರಂಗನತಿಟ್ಟು ಪಕ್ಷಿಧಾಮ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬರಲಿದ್ದು ಹಿಂದೆ ನೀಡಿದ್ದ ಎರಡು ಹೋಂಸ್ಟೇಗಳನ್ನು ರದ್ದುಪಡಿಸಿ ನೊಂದಣಿಯನ್ನು ಹಿಂಪಡೆಯುವಂತೆ ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು. ನಿರ್ಮಾಣ ಮಾಡಲು ಅನುಮತಿ ನೀಡಿದ ಅಧಿಕಾರಿಗಳು ಹಾಗೂ ಹೋಂಸ್ಟೇ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು ಪ್ರವಾಸಿ ತಾಣಗಳನ್ನು ಪ್ರಚುರಪಡಿಸಲು ಪ್ರವಾಸಿ ಗೈಡ್, ಮ್ಯಾಪ್ ಹಾಗೂ ವೆಬ್ಸೈಟ್ಗಳನ್ನು ಸಿದ್ಧಪಡಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಕುಮಾರ ಹೇಳಿದರು.</p>.<p>ಕಾವೇರಿ ನದಿ ತೀರದಲ್ಲಿ ಒತ್ತುವರಿಯಾಗಿರುವ ಜಾಗಗಳನ್ನು ತೆರವುಗೊಳಿಸುವ ಸಂಬಂಧ ಚರ್ಚಿಸಲು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರವಾಸೋದ್ಯಮ ನೀತಿ 2024-29ರಡಿ ಮಂಡ್ಯ ಜಿಲ್ಲೆಯಲ್ಲಿ 106 ಪ್ರವಾಸಿ ತಾಣಗಳನ್ನು ಸರ್ಕಾರದಿಂದ ಅಧಿಕೃತವಾಗಿ ಗುರುತಿಸಲಾಗಿದೆ ಎಂದು ಹೇಳಿದರು.</p>.<p>ಜಿಲ್ಲೆಯ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ರೀತಿಯ ವೆಬ್ಸೈಟ್ ಇರದ ಕಾರಣ ಪ್ರವಾಸೋದ್ಯಮ ಉತ್ತೇಜನ ನೀಡುವ ನಿಟ್ಟಿನಲ್ಲಿ ಜಿಲ್ಲಾ ಪ್ರವಾಸೋದ್ಯಮದ ಕುರಿತು ‘ಮಧುರ ಮಂಡ್ಯ’ ವೆಬ್ಸೈಟ್ ಅನ್ನು ಸಾರ್ವಜನಿಕರ ಹಾಗೂ ಪ್ರವಾಸಿಗರ ಉಪಯೋಗಕ್ಕಾಗಿ ಸಿದ್ಧಪಡಿಸಲಾಗಿದೆ. ಅಧಿಕೃತವಾಗಿ ಚಾಲನೆಯನ್ನು ಶೀಘ್ರದಲ್ಲೇ ನೀಡಲಾಗುವುದು ಎಂದರು.</p>.<p>ಮೇಲುಕೋಟೆಯಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಿಸಿರುವ ಯಾತ್ರಿನಿವಾಸ ಕಟ್ಟಡವನ್ನು ನಿರ್ವಹಣೆಗಾಗಿ ವಹಿಸುವ ಸಂಬಂಧ ಪ್ರವಾಸೋದ್ಯಮ ಇಲಾಖೆಯಿಂದ ಕರೆಯಲಾಗಿದ್ದ ಇ-ಟೆಂಡರ್ ನಲ್ಲಿ ಬಿಡ್ಡುದಾರರು ಭಾಗವಹಿಸದ ಹಿನ್ನೆಲೆಯಲ್ಲಿ ಸದರಿ ಕಟ್ಟಡವನ್ನು ಮೇಲುಕೋಟೆಯ ಧಾರ್ಮಿಕ ದತ್ತಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಮರ್ಪಕವಾಗಿ ನಿರ್ವಹಿಸಲು ತಿಳಿಸಿದರು.</p>.<p><strong>ಮರು ಟೆಂಡರ್ ಆಹ್ವಾನಿಸಿ:</strong></p>.<p>ನಾಗಮಂಗಲ ತಾಲ್ಲೂಕಿನ ಮುಳುಕಟ್ಟಮ್ಮ ದೇವಾಲಯದ ಬಳಿ ನಿರ್ಮಿಸಿರುವ ಯಾತ್ರಿ ನಿವಾಸ ಕಟ್ಟಡವನ್ನು ನಿರ್ವಹಣೆಗಾಗಿ ವಹಿಸುವ ಸಂಬಂಧ ಪ್ರವಾಸೋದ್ಯಮ ಇಲಾಖೆಯಿಂದ ಕರೆಯಲಾಗಿದ್ದ ಇ-ಟೆಂಡರ್ನಲ್ಲಿ ಇಬ್ಬರು ಬಿಡ್ಡುದಾರರು ಭಾಗವಹಿಸಿದ್ದು, ಸದರಿಯವರ ಅಗತ್ಯ ದಾಖಲೆಗಳನ್ನು ಸಲ್ಲಿಸದೇ ಇರುವ ಹಿನ್ನೆಲೆಯಲ್ಲಿ, ತಾಂತ್ರಿಕವಾಗಿ ಬಿಡ್ಗಳು ಅನರ್ಹವಾಗಿದ್ದು, ಸದರಿ ಟೆಂಡರ್ ಅನ್ನು ರದ್ದುಪಡಿಸಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವತಿಯಿಂದ ನಿರ್ವಹಿಸಲು ಸೂಕ್ತ ಸಂಸ್ಥೆಯನ್ನು ಆಯ್ಕೆ ಮಾಡಲು ಹೊಸದಾಗಿ ಮರು ಟೆಂಡರ್ ಆಹ್ವಾನಿಸಿ ಎಂದು ಹೇಳಿದರು.</p>.<p>ಮಂಡ್ಯ ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮ ಇಲಾಖೆಯ ಅನುದಾನದಲ್ಲಿ ಒಟ್ಟು ₹36.72 ಕೋಟಿಯಲ್ಲಿ 41 ಮುಂದುವರಿದ ಪ್ರವಾಸಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಸದರಿ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ತಿಳಿಸಿದರು.</p>.<p>ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗಂಗಾಧರಸ್ವಾಮಿ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ-1 ಶಿವಲಿಂಗಯ್ಯ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪನಿರ್ದೇಶಕಿ ಗೀತಾ ಪಾಲ್ಗೊಂಡಿದ್ದರು. </p>.<p><strong>ಇ–ಟೆಂಡರ್: ಬಿಡ್ಡುದಾರರ ನಿರಾಸಕ್ತಿ’</strong> </p><p>ಶ್ರೀರಂಗಪಟ್ಟಣದ ಕೋಟೆ ಪ್ರದೇಶದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಅನುಷ್ಠಾನಗೊಳಿಸಿರುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮದ ನಿರ್ವಹಣೆಗಾಗಿ ಸೂಕ್ತ ಸಂಸ್ಥೆಯನ್ನು ಆಯ್ಕೆ ಮಾಡಲು ಆಹ್ವಾನಿಸಲಾಗಿದ್ದ ಇ-ಟೆಂಡರ್ ನಲ್ಲಿ ಯಾವುದೇ ಬಿಡ್ಡುದಾರರು ಭಾಗವಹಿಸದ ಹಿನ್ನೆಲೆಯಲ್ಲಿ ಸದರಿ ಸೌಲಭ್ಯವನ್ನು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವತಿಯಿಂದ ನಿರ್ವಹಿಸಲು ಸರ್ಕಾರದಿಂದ ಅನುದಾನ ಪಡೆಯಲು ಪ್ರಸ್ತಾವ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು. ಮದ್ದೂರು ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಪ್ರವಾಸಿ ತಾಣದಲ್ಲಿ ನಿರ್ಮಿಸಿರುವ ‘ನೇಚರ್ ಇಂಟರ್ಪ್ರಿಟೇಷನ್ ಸೆಂಟರ್’ ಸೌಲಭ್ಯದ ನಿರ್ವಹಣೆಗಾಗಿ ಸೂಕ್ತ ಸಂಸ್ಥೆಯನ್ನು ಆಯ್ಕೆ ಮಾಡಲು ಆಹ್ವಾನಿಸಲಾಗಿದ್ದ ಇ-ಟೆಂಡರ್ ನಲ್ಲಿ ಯಾವುದೇ ಬಿಡ್ಡುದಾರರು ಭಾಗವಹಿಸದ ಹಿನ್ನೆಲೆಯಲ್ಲಿ ಸದರಿ ಸೌಲಭ್ಯವನ್ನು ‘WWF INDIA’ ಸಂಸ್ಥೆಯಿಂದ ನಿರ್ವಹಿಸಲು ಸರ್ಕಾರದಿಂದ ಸೂಕ್ತ ಸ್ಪಷ್ಟೀಕರಣ ಪಡೆಯಬೇಕು ಎಂದು ಹೇಳಿದರು.</p>.<p><strong>‘ಕಾವೇರಿ ತೀರದ ಹೋಂಸ್ಟೇ ರದ್ದುಪಡಿಸಿ’</strong> </p><p>ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯ ನಿರ್ಮಿಸಲಾಗಿರುವ ಎರಡು ಹೋಂಸ್ಟೇಗಳು ರಂಗನತಿಟ್ಟು ಪಕ್ಷಿಧಾಮ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಗೆ ಬರಲಿದ್ದು ಹಿಂದೆ ನೀಡಿದ್ದ ಎರಡು ಹೋಂಸ್ಟೇಗಳನ್ನು ರದ್ದುಪಡಿಸಿ ನೊಂದಣಿಯನ್ನು ಹಿಂಪಡೆಯುವಂತೆ ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು. ನಿರ್ಮಾಣ ಮಾಡಲು ಅನುಮತಿ ನೀಡಿದ ಅಧಿಕಾರಿಗಳು ಹಾಗೂ ಹೋಂಸ್ಟೇ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>