<p><strong>ಮಂಡ್ಯ/ಪಾಂಡವಪುರ:</strong> ರೈತರ ತೀವ್ರ ವಿರೋಧದ ನಡುವೆಯೂ ಜಿಲ್ಲಾಡಳಿತ ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದ ಗಣಿ ಪ್ರದೇಶದಲ್ಲಿ ಪೊಲೀಸ್ ಭದ್ರತೆಯೊಂದಿಗೆ ‘ಪರೀಕ್ಷಾರ್ಥ ಸ್ಫೋಟ’ದ ಸಿದ್ಧತೆಗೆ ಕುಳಿ ಕೊರೆಯುವ (ಡ್ರಿಲ್ಲಿಂಗ್) ಕಾರ್ಯವನ್ನು ಬುಧವಾರ ಆರಂಭಿಸಿತು.</p><p>‘ನ್ಯಾಯಾಲಯದ ಆದೇಶ ಬರುವವರೆಗೆ ‘ಟ್ರಯಲ್ ಬ್ಲಾಸ್ಟ್’ ನಡೆಸುವುದಿಲ್ಲ’ ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಮಂಗಳವಾರ ಪ್ರತಿಭಟನಾನಿರತ ರೈತರಿಗೆ ಭರವಸೆ ನೀಡಿದ್ದರು. ಆದರೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸದ್ದಿಲ್ಲದೆ ಬೇಬಿಬೆಟ್ಟದಲ್ಲಿ ಯಂತ್ರದ ಮೂಲಕ ‘ಡ್ರಿಲ್ಲಿಂಗ್’ ಕಾರ್ಯ ನಡೆಸಿದರು. </p><p>ಈ ವಿಷಯ ತಿಳಿಯುತ್ತಿದ್ದಂತೆ, ಬುಧವಾರ ರೈತ ಸಂಘದ ನೂರಾರು ಕಾರ್ಯಕರ್ತರು ಬಡಗಲಪುರ ನಾಗೇಂದ್ರ ಮತ್ತು ಎ.ಎಲ್. ಕೆಂಪೂಗೌಡ ನೇತೃತ್ವದಲ್ಲಿ ಕೆ.ಆರ್.ಎಸ್. ಬೃಂದಾವನ ಗೇಟ್ ಸಮೀಪ ಜಮಾಯಿಸಿ ಪ್ರತಿಭಟನೆ ನಡೆಸಿದರು. ‘ಪರೀಕ್ಷಾರ್ಥ ಸ್ಫೋಟ ನಿಲ್ಲಿಸಿ, ಕೆಆರ್ಎಸ್ ಡ್ಯಾಂ ಉಳಿಸಿ’ ಎಂದು ಘೋಷಣೆ ಕೂಗಿದರು. </p><p>ಇನ್ನೊಂದೆಡೆ ಸತ್ಯಾಂಶ ತಿಳಿಯಲು ‘ಪರೀಕ್ಷಾರ್ಥ ಸ್ಫೋಟ’ ನಡೆಸಬೇಕು ಎಂದು ಮತ್ತೊಂದು ರೈತ ಬಣದವರು ಆಗ್ರಹಿಸಿದರು. ಇದಕ್ಕೆ ಕಲ್ಲುಗಣಿ ಮಾಲೀಕರು ಬೆಂಬಲ ಸೂಚಿಸಿದರು. ಪರ–ವಿರೋಧದ ಅಲೆಯಿಂದ ಗೊಂದಲಮಯ ವಾತಾವರಣ ಸೃಷ್ಟಿಯಾಯಿತು. </p><p>‘ಹೈಕೋರ್ಟ್ ಆದೇಶದಂತೆ ಬೇಬಿ ಬೆಟ್ಟದ ಗಣಿಗಾರಿಕೆ ಪ್ರದೇಶದಲ್ಲಿ ಸರಾಸರಿ 60 ಅಡಿ ಆಳದಲ್ಲಿ 5 ಕಡೆ ಕುಳಿ ಕೊರೆಯುತ್ತಿದ್ದೇವೆ. ಈ ಕಾರ್ಯ ಮುಗಿದ ಮೇಲೆ ಪುಣೆ ಮತ್ತು ಜಾರ್ಖಂಡ್ ಮೂಲಕ ಗಣಿ ತಜ್ಞರು ‘ಪರೀಕ್ಷಾರ್ಥ ಸ್ಫೋಟ’ ನಡೆಸಲಿದ್ದಾರೆ’ ಎಂದು ಹಿರಿಯ ಭೂವಿಜ್ಞಾನಿ ರೇಷ್ಮಾ ತಿಳಿಸಿದರು.</p><p><strong>ಜೈಲಿಗೆ ಹೋಗಲು ಸಿದ್ಧ</strong></p><p>ಬೃಂದಾವನದ ಬಳಿ ಪ್ರತಿಭಟನೆ ನಡೆಸಿದ ನಂತರ, ರೈತರು ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಕುಮಾರ ಅವರನ್ನು ಭೇಟಿ ಮಾಡಿದರು. ‘ಟ್ರಯಲ್ ಬ್ಲಾಸ್ಟ್ ಕೂಡಲೇ ನಿಲ್ಲಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಯವರು ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದರೆ ಜು.5ರಂದು ಪ್ರತಿಭಟನೆ ನಡೆಸುತ್ತೇವೆ. ಈ ಹೋರಾಟದಲ್ಲಿ ಜೈಲಿಗೆ ಹೋಗಲು ಸಿದ್ಧರಿದ್ದೇವೆ’ ಎಂದು ರೈತ ಮುಖಂಡರು ಗುಡುಗಿದರು. </p><p>ಈ ‘ಟ್ರಯಲ್ ಬ್ಲಾಸ್ಟ್’ ನಡೆಸುವ ಉದ್ದೇಶ ನಮಗೆ ಅಥವಾ ಸರ್ಕಾರಕ್ಕಾಗಲೀ ಇಲ್ಲ. ಇದು ನ್ಯಾಯಾಲಯದ ಆದೇಶವಾಗಿರುವುದರಿಂದ ಪಾಲಿಸಲೇಬೇಕಿದೆ</p><p><strong>– ಕುಮಾರ, ಜಿಲ್ಲಾಧಿಕಾರಿ, ಮಂಡ್ಯ</strong></p><p>ಕೆ.ಆರ್.ಎಸ್ ಅಣೆಕಟ್ಟೆಗೆ ಅಪಾಯವಿದೆ ಎಂದು ಗೊತ್ತಿದ್ದರೂ ಜಿಲ್ಲಾಡಳಿತ ‘ಟ್ರಯಲ್ ಬ್ಲಾಸ್ಟ್’ಗೆ ಮುಂದಾಗಿದೆ. ಇದರಲ್ಲಿ ಪ್ರಭಾವಿಗಳ ಕೈವಾಡ ಮತ್ತು ಕಲ್ಲು ಗಣಿಗಾರಿಕೆ ನಡೆಸುವ ಹುನ್ನಾರವಿದೆ</p><p><strong>– ಬಡಗಲಪುರ ನಾಗೇಂದ್ರ, ರಾಜ್ಯ ಘಟಕದ ಅಧ್ಯಕ್ಷ, ರೈತ ಸಂಘ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ/ಪಾಂಡವಪುರ:</strong> ರೈತರ ತೀವ್ರ ವಿರೋಧದ ನಡುವೆಯೂ ಜಿಲ್ಲಾಡಳಿತ ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟದ ಗಣಿ ಪ್ರದೇಶದಲ್ಲಿ ಪೊಲೀಸ್ ಭದ್ರತೆಯೊಂದಿಗೆ ‘ಪರೀಕ್ಷಾರ್ಥ ಸ್ಫೋಟ’ದ ಸಿದ್ಧತೆಗೆ ಕುಳಿ ಕೊರೆಯುವ (ಡ್ರಿಲ್ಲಿಂಗ್) ಕಾರ್ಯವನ್ನು ಬುಧವಾರ ಆರಂಭಿಸಿತು.</p><p>‘ನ್ಯಾಯಾಲಯದ ಆದೇಶ ಬರುವವರೆಗೆ ‘ಟ್ರಯಲ್ ಬ್ಲಾಸ್ಟ್’ ನಡೆಸುವುದಿಲ್ಲ’ ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಮಂಗಳವಾರ ಪ್ರತಿಭಟನಾನಿರತ ರೈತರಿಗೆ ಭರವಸೆ ನೀಡಿದ್ದರು. ಆದರೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಸದ್ದಿಲ್ಲದೆ ಬೇಬಿಬೆಟ್ಟದಲ್ಲಿ ಯಂತ್ರದ ಮೂಲಕ ‘ಡ್ರಿಲ್ಲಿಂಗ್’ ಕಾರ್ಯ ನಡೆಸಿದರು. </p><p>ಈ ವಿಷಯ ತಿಳಿಯುತ್ತಿದ್ದಂತೆ, ಬುಧವಾರ ರೈತ ಸಂಘದ ನೂರಾರು ಕಾರ್ಯಕರ್ತರು ಬಡಗಲಪುರ ನಾಗೇಂದ್ರ ಮತ್ತು ಎ.ಎಲ್. ಕೆಂಪೂಗೌಡ ನೇತೃತ್ವದಲ್ಲಿ ಕೆ.ಆರ್.ಎಸ್. ಬೃಂದಾವನ ಗೇಟ್ ಸಮೀಪ ಜಮಾಯಿಸಿ ಪ್ರತಿಭಟನೆ ನಡೆಸಿದರು. ‘ಪರೀಕ್ಷಾರ್ಥ ಸ್ಫೋಟ ನಿಲ್ಲಿಸಿ, ಕೆಆರ್ಎಸ್ ಡ್ಯಾಂ ಉಳಿಸಿ’ ಎಂದು ಘೋಷಣೆ ಕೂಗಿದರು. </p><p>ಇನ್ನೊಂದೆಡೆ ಸತ್ಯಾಂಶ ತಿಳಿಯಲು ‘ಪರೀಕ್ಷಾರ್ಥ ಸ್ಫೋಟ’ ನಡೆಸಬೇಕು ಎಂದು ಮತ್ತೊಂದು ರೈತ ಬಣದವರು ಆಗ್ರಹಿಸಿದರು. ಇದಕ್ಕೆ ಕಲ್ಲುಗಣಿ ಮಾಲೀಕರು ಬೆಂಬಲ ಸೂಚಿಸಿದರು. ಪರ–ವಿರೋಧದ ಅಲೆಯಿಂದ ಗೊಂದಲಮಯ ವಾತಾವರಣ ಸೃಷ್ಟಿಯಾಯಿತು. </p><p>‘ಹೈಕೋರ್ಟ್ ಆದೇಶದಂತೆ ಬೇಬಿ ಬೆಟ್ಟದ ಗಣಿಗಾರಿಕೆ ಪ್ರದೇಶದಲ್ಲಿ ಸರಾಸರಿ 60 ಅಡಿ ಆಳದಲ್ಲಿ 5 ಕಡೆ ಕುಳಿ ಕೊರೆಯುತ್ತಿದ್ದೇವೆ. ಈ ಕಾರ್ಯ ಮುಗಿದ ಮೇಲೆ ಪುಣೆ ಮತ್ತು ಜಾರ್ಖಂಡ್ ಮೂಲಕ ಗಣಿ ತಜ್ಞರು ‘ಪರೀಕ್ಷಾರ್ಥ ಸ್ಫೋಟ’ ನಡೆಸಲಿದ್ದಾರೆ’ ಎಂದು ಹಿರಿಯ ಭೂವಿಜ್ಞಾನಿ ರೇಷ್ಮಾ ತಿಳಿಸಿದರು.</p><p><strong>ಜೈಲಿಗೆ ಹೋಗಲು ಸಿದ್ಧ</strong></p><p>ಬೃಂದಾವನದ ಬಳಿ ಪ್ರತಿಭಟನೆ ನಡೆಸಿದ ನಂತರ, ರೈತರು ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಕುಮಾರ ಅವರನ್ನು ಭೇಟಿ ಮಾಡಿದರು. ‘ಟ್ರಯಲ್ ಬ್ಲಾಸ್ಟ್ ಕೂಡಲೇ ನಿಲ್ಲಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಯವರು ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದರೆ ಜು.5ರಂದು ಪ್ರತಿಭಟನೆ ನಡೆಸುತ್ತೇವೆ. ಈ ಹೋರಾಟದಲ್ಲಿ ಜೈಲಿಗೆ ಹೋಗಲು ಸಿದ್ಧರಿದ್ದೇವೆ’ ಎಂದು ರೈತ ಮುಖಂಡರು ಗುಡುಗಿದರು. </p><p>ಈ ‘ಟ್ರಯಲ್ ಬ್ಲಾಸ್ಟ್’ ನಡೆಸುವ ಉದ್ದೇಶ ನಮಗೆ ಅಥವಾ ಸರ್ಕಾರಕ್ಕಾಗಲೀ ಇಲ್ಲ. ಇದು ನ್ಯಾಯಾಲಯದ ಆದೇಶವಾಗಿರುವುದರಿಂದ ಪಾಲಿಸಲೇಬೇಕಿದೆ</p><p><strong>– ಕುಮಾರ, ಜಿಲ್ಲಾಧಿಕಾರಿ, ಮಂಡ್ಯ</strong></p><p>ಕೆ.ಆರ್.ಎಸ್ ಅಣೆಕಟ್ಟೆಗೆ ಅಪಾಯವಿದೆ ಎಂದು ಗೊತ್ತಿದ್ದರೂ ಜಿಲ್ಲಾಡಳಿತ ‘ಟ್ರಯಲ್ ಬ್ಲಾಸ್ಟ್’ಗೆ ಮುಂದಾಗಿದೆ. ಇದರಲ್ಲಿ ಪ್ರಭಾವಿಗಳ ಕೈವಾಡ ಮತ್ತು ಕಲ್ಲು ಗಣಿಗಾರಿಕೆ ನಡೆಸುವ ಹುನ್ನಾರವಿದೆ</p><p><strong>– ಬಡಗಲಪುರ ನಾಗೇಂದ್ರ, ರಾಜ್ಯ ಘಟಕದ ಅಧ್ಯಕ್ಷ, ರೈತ ಸಂಘ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>