ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

‘ಆರ್‌ಟಿಐ’ಯಿಂದ ಪಾರದರ್ಶಕ ಆಡಳಿತ: ಆಯುಕ್ತ ಹರೀಶ್‌ಕುಮಾರ್‌

Published : 21 ಜೂನ್ 2025, 15:17 IST
Last Updated : 21 ಜೂನ್ 2025, 15:17 IST
ಫಾಲೋ ಮಾಡಿ
Comments
ಅಧಿಕಾರಿಗಳನ್ನು ಪದೇ ಪದೇ ಬೆಂಗಳೂರಿಗೆ ಕರೆಸಿದರೆ ಸಾರ್ವಜನಿಕರ ಕೆಲಸಕ್ಕೆ ತೊಂದರೆಯಾಗುತ್ತದೆ. ವಿಡಿಯೊ ಕಾನ್ಫರೆನ್ಸ್‌ ಮೂಲಕ ಆಯೋಗವು ವಿಚಾರಣೆ ನಡೆಸಿದರೆ ಅನುಕೂಲ
– ಕುಮಾರ ಜಿಲ್ಲಾಧಿಕಾರಿ ಮಂಡ್ಯ
‘ಕೆಡಿಪಿ ಸಭೆಯಲ್ಲಿ ಆರ್‌ಟಿಐ ವಿಷಯವಿರಲಿ’
‘ಪ್ರಗತಿ ಪರಿಶೀಲನಾ ಸಭೆಗಳಲ್ಲಿ (ಕೆಡಿಪಿ) ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾದ ಅರ್ಜಿಗಳ ವಿಲೇವಾರಿ ಬಗ್ಗೆ ಚರ್ಚಿಸುವುದರಿಂದ ವಿಳಂಬ ಧೋರಣೆ ತಡೆಗಟ್ಟಬಹುದು ಮತ್ತು ಸಕಾಲದಲ್ಲಿ ಸಾರ್ವಜನಿಕರಿಗೆ ಮಾಹಿತಿ ಕೊಡಿಸಬಹುದು’ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಕೆ. ಬದ್ರುದ್ದೀನ್ ಅವರು ಜಿಲ್ಲಾಧಿಕಾರಿಗೆ ಸೂಚಿಸಿದರು.  ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿರುವ ಅರ್ಜಿಯನ್ನು ಉಡಾಫೆ ಮಾಡಬೇಡಿ ಅಧಿಕಾರಿಗಳು ಆರ್.ಟಿ.ಐ ಕಾಯ್ದೆಯ ಕುರಿತು ಮೊದಲು ಸಮರ್ಪಕವಾಗಿ ತಿಳಿದುಕೊಳ್ಳಿ. ಆಯೋಗವು ಸಮಾಜಘಾತುಕ ಶಕ್ತಿಗಳಿಗೆ ಮಣೆ ಹಾಕುವುದಿಲ್ಲ. ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಳಕೆ ಮಾಡಿಕೊಳ್ಳುವವರನ್ನು ಸಹಿಸುವುದಿಲ್ಲ. ಸಾರ್ವಜನಿಕ ಹಿತಾಸಕ್ತಿ ಇಲ್ಲದೆ ದುರುದ್ದೇಶದಿಂದ ಪದೇ ಪದೇ ಅರ್ಜಿ ಸಲ್ಲಿಸುವವರನ್ನು ‘ಕಪ್ಪು ಪಟ್ಟಿಗೆ’ ಸೇರಿಸುತ್ತಿದ್ದೇವೆ ಎಂದರು.  ಮಂಡ್ಯ ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ 1135 ಮೇಲ್ಮನವಿ ಅರ್ಜಿಗಳು ಬಾಕಿ ಇವೆ. ಎಲ್ಲಾ ಜಿಲ್ಲೆಗೆ ಹೋಲಿಸಿದರೆ ಮಂಡ್ಯ ಜಿಲ್ಲೆಯ ಶೇ 3.5ರಷ್ಟು ಮಾತ್ರ ಇದೆ. ಇದು ಶೂನ್ಯಕ್ಕೆ ಇಳಿಕೆಯಾಗಬೇಕು. ಪ್ರಥಮ ಮೇಲ್ಮನವಿ ಪ್ರಾಧಿಕಾರ ಸರಿಯಾಗಿ ಸ್ಪಂದಿಸಿದರೆ ಆಯೋಗಕ್ಕೆ ಬರುವ ಅರ್ಜಿಗಳನ್ನು ಕಡಿಮೆ ಮಾಡಬಹುದು ಎಂದರು. 
‘9 ಸಾವಿರ ಅರ್ಜಿವಿಲೇವಾರಿ’   
ಜಿಲ್ಲಾಧಿಕಾರಿ ಕುಮಾರ ಮಾತನಾಡಿ ಜಿಲ್ಲೆಯ ಪ್ರಸಕ್ತ ಸಾಲಿನ 10 ಸಾವಿರಕ್ಕೂ ಹೆಚ್ಚು ಅರ್ಜಿಗಳು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿದ್ದವು. ಈಗಾಗಲೇ 9 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಸರ್ಕಾರಿ ನೌಕರರಿಗೆ ಕರ್ತವ್ಯದಲ್ಲಿ ನಿಷ್ಠೆ ಪ್ರಾಮಾಣಿಕತೆ ಇದ್ದರೆ ಯಾರಿಗೂ ಹೆದರುವ ಅಗತ್ಯವಿರುವುದಿಲ್ಲ. ವಿಳಂಬ ಮಾಡದೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT