ಪಾಂಡವಪುರ: ಕೆಎಸ್ಆರ್ಟಿಸಿ ಬಸ್ನ ನಿರ್ವಾಹಕ– ಚಾಲಕ, ತಾಲ್ಲೂಕಿನ ಡಾಮಡಹಳ್ಳಿ ಗ್ರಾಮದ ಕಿಸಾನ್ ಸಿಂಗ್ ಅವರ ಪುತ್ರ ಪಟ್ಟಣದ ಶಾಂತಿನಗರ ನಿವಾಸಿ ಪ್ರಕಾಶ್ ಸಿಂಗ್ (42) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮನೆಯಲ್ಲಿದ್ದಾಗ ಇದ್ದಕ್ಕಿಂದಂತೆ ಕುಸಿದುಬಿದ್ದಿದ್ದಾರೆ. ತಕ್ಷಣ ಉಪವಿಭಾಗೀಯ ಸಾರ್ವಜನಿಕ ಆಸ್ಪತ್ರೆಯ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ ಪತ್ನಿ, ಓರ್ವ ಪುತ್ರಿ, ಪುತ್ರನಿದ್ದಾನೆ. ಮೃತರ ಮನೆಗೆ ಸಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿದರು.