110 ವಿದ್ಯಾರ್ಥಿಗಳು ಶ್ರೀಕ್ಷೇತ್ರಕ್ಕೆ ಧಾರ್ಮಿಕ ಪ್ರವಾಸ ಕೈಗೊಂಡಿದ್ದರು. ಚೆಲುವರಾಯಸ್ವಾಮಿ ದೇವಾಲಯದಲ್ಲಿ ದೇವರ ದರ್ಶನ ಪಡೆದು ಬೆಳಿಗ್ಗೆ 11 ಗಂಟೆಯ ವೇಳೆ ಯೋಗಾನರಸಿಂಹಸ್ವಾಮಿ ಬೆಟ್ಟ ಏರುತ್ತಿದ್ದರು. ಮೆಟ್ಟಿಲು ಪಕ್ಕದಲ್ಲೇ ಒಣಗಿದ್ದ ಅರಳಿ ಮರದ ಕೊಂಬೆ ಏಕಾಏಕಿ ವಿದ್ಯಾರ್ಥಿಗಳ ಮೇಲೆ ಮುರಿದು ಬಿದ್ದಿದೆ. ಘಟನೆಯಲ್ಲಿ ವಿದ್ಯಾರ್ಥಿಗಳಾದ ನಿಶಾಂತ್, ವರುಣ್, ಯೋಗೇಶ್ ಹಾಗೂ ಶಿಕ್ಷಕ ಕೇಶವರಾವ್ ಗಂಭೀರ ಗಾಯಗೊಂಡಿದ್ದಾರೆ.