<p><strong>ಮಂಡ್ಯ</strong>: ‘ತುಂಬುಕೆರೆಯಲ್ಲಿ ಅಲೆಮಾರಿ ಜನಾಂಗದವರು ವಾಸವಿದ್ದು, ಅವರಿಗೆ ಜಾತಿ ಪ್ರಮಾಣ ಪತ್ರ ಸೇರಿದಂತೆ ಹಲವು ಸೌಲಭ್ಯಗಳು ಸಿಕ್ಕಿಲ್ಲ’ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದಶ್ ಬೇಸರ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ತುಂಬಕೆರೆ ಅಲೆಮಾರಿ ಬಡಾವಣೆಯಲ್ಲಿ ಮಾನವ ಬಂಧುತ್ವ ವೇದಿಕೆ, ಕಾಯಕಯೋಗಿ ಫೌಂಡೇಷನ್, ಲಿಂಗಾಯತ ಮಹಾಸಭಾದ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಬಸವ ಪಂಚಮಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ವಿವಿಧೆಡೆ ಇರುವಂತಹ ಅಲೆಮಾರಿ ಸಮುದಾಯಕ್ಕೆ ಶಾಶ್ವತ ನೆಲೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಬದುಕನ್ನು ಅರಸುತ್ತಲೇ ಕಳೆದುಹೋಗುವ ಅಲೆಮಾರಿ ಜನಾಂಗಕ್ಕೆ ನೆಲೆ ಕಲ್ಪಿಸಬೇಕಾದದ್ದು ಸರ್ಕಾರದ ಆದ್ಯ ಕರ್ತವ್ಯ. ಆದರೆ ಸೌಲಭ್ಯಗಳಿಂದಲೇ ವಂಚಿತರಾಗುವುದು’ ದುರಂತ ಎಂದರು.</p>.<p>‘ತುಂಬಕೆರೆಯಲ್ಲಿ ಹಲವು ವರ್ಷಗಳಿಂದ ವಾಸವಿರುವ ಅಲೆಮಾರಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ, ನಿವೇಶನದ ಹಕ್ಕು ಪತ್ರವೇ ಸಿಕ್ಕಿಲ್ಲ, ಜೊತೆಗೆ ಮೂಲ ಸೌಲಭ್ಯದಿಂದಲೇ ವಂಚಿತರಾಗಿದ್ದಾರೆ. ಇವರನ್ನು ಜಿಲ್ಲಾಡಳಿತ ಮತ್ತು ಸರ್ಕಾರ ಗುರುತಿಸಿ ಸಮಸ್ಯೆ ಬಗೆಹರಿಸಿಕೊಡಬೇಕು’ ಎಂದು ಮನವಿ ಮಾಡಿದರು.</p>.<p>ಕಾಯಕಯೋಗಿ ಫೌಂಡೇಷನ್ ಅಧ್ಯಕ್ಷ ಎಂ.ಶಿವಕುಮಾರ್ ಮಾತನಾಡಿದರು. ಮಾನವ ಬಂಧುತ್ವ ವೇದಿಕೆಯ ಸಂಚಾಲಕ ಡಿ.ದೇವರಾಜ್ ಕೊಪ್ಪ, ಸಂಘಟಕ ಕಾರಸವಾಡಿ ಮಹದೇವು, ಉಪನ್ಯಾಸಕ ಲೋಕೇಶ್, ಮುಖಂಡರಾದ ಜಯಸುಧಾ, ಸಿದ್ಧಶೆಟ್ಟಿ, ಕಲಾವಿದ ವೈರಮುಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ತುಂಬುಕೆರೆಯಲ್ಲಿ ಅಲೆಮಾರಿ ಜನಾಂಗದವರು ವಾಸವಿದ್ದು, ಅವರಿಗೆ ಜಾತಿ ಪ್ರಮಾಣ ಪತ್ರ ಸೇರಿದಂತೆ ಹಲವು ಸೌಲಭ್ಯಗಳು ಸಿಕ್ಕಿಲ್ಲ’ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದಶ್ ಬೇಸರ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ತುಂಬಕೆರೆ ಅಲೆಮಾರಿ ಬಡಾವಣೆಯಲ್ಲಿ ಮಾನವ ಬಂಧುತ್ವ ವೇದಿಕೆ, ಕಾಯಕಯೋಗಿ ಫೌಂಡೇಷನ್, ಲಿಂಗಾಯತ ಮಹಾಸಭಾದ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಬಸವ ಪಂಚಮಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜಿಲ್ಲೆಯ ವಿವಿಧೆಡೆ ಇರುವಂತಹ ಅಲೆಮಾರಿ ಸಮುದಾಯಕ್ಕೆ ಶಾಶ್ವತ ನೆಲೆ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಬದುಕನ್ನು ಅರಸುತ್ತಲೇ ಕಳೆದುಹೋಗುವ ಅಲೆಮಾರಿ ಜನಾಂಗಕ್ಕೆ ನೆಲೆ ಕಲ್ಪಿಸಬೇಕಾದದ್ದು ಸರ್ಕಾರದ ಆದ್ಯ ಕರ್ತವ್ಯ. ಆದರೆ ಸೌಲಭ್ಯಗಳಿಂದಲೇ ವಂಚಿತರಾಗುವುದು’ ದುರಂತ ಎಂದರು.</p>.<p>‘ತುಂಬಕೆರೆಯಲ್ಲಿ ಹಲವು ವರ್ಷಗಳಿಂದ ವಾಸವಿರುವ ಅಲೆಮಾರಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ, ನಿವೇಶನದ ಹಕ್ಕು ಪತ್ರವೇ ಸಿಕ್ಕಿಲ್ಲ, ಜೊತೆಗೆ ಮೂಲ ಸೌಲಭ್ಯದಿಂದಲೇ ವಂಚಿತರಾಗಿದ್ದಾರೆ. ಇವರನ್ನು ಜಿಲ್ಲಾಡಳಿತ ಮತ್ತು ಸರ್ಕಾರ ಗುರುತಿಸಿ ಸಮಸ್ಯೆ ಬಗೆಹರಿಸಿಕೊಡಬೇಕು’ ಎಂದು ಮನವಿ ಮಾಡಿದರು.</p>.<p>ಕಾಯಕಯೋಗಿ ಫೌಂಡೇಷನ್ ಅಧ್ಯಕ್ಷ ಎಂ.ಶಿವಕುಮಾರ್ ಮಾತನಾಡಿದರು. ಮಾನವ ಬಂಧುತ್ವ ವೇದಿಕೆಯ ಸಂಚಾಲಕ ಡಿ.ದೇವರಾಜ್ ಕೊಪ್ಪ, ಸಂಘಟಕ ಕಾರಸವಾಡಿ ಮಹದೇವು, ಉಪನ್ಯಾಸಕ ಲೋಕೇಶ್, ಮುಖಂಡರಾದ ಜಯಸುಧಾ, ಸಿದ್ಧಶೆಟ್ಟಿ, ಕಲಾವಿದ ವೈರಮುಡಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>