<p><strong>ಶ್ರೀರಂಗಪಟ್ಟಣ:</strong> ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆಯೊಳಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಮೂವರ ಪೈಕಿ ಇಬ್ಬರನ್ನು ಕೆಆರ್ಎಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಪಾಂಡವಪುರ ತಾಲ್ಲೂಕಿನ ಚಿಕ್ಕಾಡೆಯ ಮೂರ್ತಿ ಮತ್ತು ಜೀವನ್ ಬಂಧಿತರು. ಇವರ ಜತೆಗಿದ್ದ ದರ್ಶನ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ.</p>.<p>ಒಂದು ತಿಂಗಳ ಹಿಂದೆ ಅಣೆಕಟ್ಟೆಯ ದಕ್ಷಿಣ ದ್ವಾರದ ಸಮೀಪ ಒಳಕ್ಕೆ ಇಳಿದು ರೀಲ್ಸ್ ಮಾಡಿದ್ದರು. ಅಣೆಕಟ್ಟೆಯೊಳಗೆ, ಆರ್ಬಿಎಲ್ಎಲ್ ನಾಲೆ (ಬಲದಂಡೆ ನಾಲೆ)ಯ ದುರಸ್ತಿ ಕಾರ್ಯ ನಡೆಯುವ ಸಂದರ್ಭದಲ್ಲಿ ಕೂಲಿ ಕಾರ್ಮಿಕರ ಜತೆ ಮೂವರು ತೆರಳಿ ಜಲಾಶಯದಲ್ಲಿ ನೀರು ಖಾಲಿಯಾಗುತ್ತಿರುವುದನ್ನು ವಿಡಿಯೊ ಮಾಡಿದ್ದರು.</p>.<p>ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೊ ಆಧರಿಸಿ, ಅಣೆಕಟ್ಟೆಯೊಳಕ್ಕೆ ಅಕ್ರಮ ಪ್ರವೇಶ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಫಾರೂಕ್ ಅಬು ಕೆಆರ್ಎಸ್ ಠಾಣೆಗೆ ಮೂರು ದಿನಗಳ ಹಿಂದೆ ದೂರು ನೀಡಿದ್ದರು.</p>.<p>ಅಣೆಕಟ್ಟೆಯೊಳಗೆ ಇಳಿದು ವಿಡಿಯೊ ಮಾಡಿದ್ದ ಮೂವರ ಪೈಕಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಕೆಆರ್ಎಸ್ ಠಾಣೆ ಪಿಎಸ್ಐ ರಮೇಶ್ ಕರ್ಕಿಕಟ್ಟಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆಯೊಳಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಮೂವರ ಪೈಕಿ ಇಬ್ಬರನ್ನು ಕೆಆರ್ಎಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಪಾಂಡವಪುರ ತಾಲ್ಲೂಕಿನ ಚಿಕ್ಕಾಡೆಯ ಮೂರ್ತಿ ಮತ್ತು ಜೀವನ್ ಬಂಧಿತರು. ಇವರ ಜತೆಗಿದ್ದ ದರ್ಶನ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ.</p>.<p>ಒಂದು ತಿಂಗಳ ಹಿಂದೆ ಅಣೆಕಟ್ಟೆಯ ದಕ್ಷಿಣ ದ್ವಾರದ ಸಮೀಪ ಒಳಕ್ಕೆ ಇಳಿದು ರೀಲ್ಸ್ ಮಾಡಿದ್ದರು. ಅಣೆಕಟ್ಟೆಯೊಳಗೆ, ಆರ್ಬಿಎಲ್ಎಲ್ ನಾಲೆ (ಬಲದಂಡೆ ನಾಲೆ)ಯ ದುರಸ್ತಿ ಕಾರ್ಯ ನಡೆಯುವ ಸಂದರ್ಭದಲ್ಲಿ ಕೂಲಿ ಕಾರ್ಮಿಕರ ಜತೆ ಮೂವರು ತೆರಳಿ ಜಲಾಶಯದಲ್ಲಿ ನೀರು ಖಾಲಿಯಾಗುತ್ತಿರುವುದನ್ನು ವಿಡಿಯೊ ಮಾಡಿದ್ದರು.</p>.<p>ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೊ ಆಧರಿಸಿ, ಅಣೆಕಟ್ಟೆಯೊಳಕ್ಕೆ ಅಕ್ರಮ ಪ್ರವೇಶ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಫಾರೂಕ್ ಅಬು ಕೆಆರ್ಎಸ್ ಠಾಣೆಗೆ ಮೂರು ದಿನಗಳ ಹಿಂದೆ ದೂರು ನೀಡಿದ್ದರು.</p>.<p>ಅಣೆಕಟ್ಟೆಯೊಳಗೆ ಇಳಿದು ವಿಡಿಯೊ ಮಾಡಿದ್ದ ಮೂವರ ಪೈಕಿ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಕೆಆರ್ಎಸ್ ಠಾಣೆ ಪಿಎಸ್ಐ ರಮೇಶ್ ಕರ್ಕಿಕಟ್ಟಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>