<p><strong>ಮಂಡ್ಯ:</strong> ಮುಖ್ಯಮಂತ್ರಿ ಸೇರಿದಂತೆ ಉನ್ನತ ಅಧಿಕಾರಿಗಳ ಸಹಿಯನ್ನೇ ಫೋರ್ಜರಿ ಮಾಡಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಅಮಾಯಕ ಯುವಜನರನ್ನು ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾನ್ಸ್ಟೆಬಲ್ಗಳನ್ನು ಅಮಾನತುಗೊಂಡಿದ್ದಾರೆ.</p>.<p>ಮಂಡ್ಯ ಗ್ರಾಮಾಂತರ ಠಾಣೆಯ ಚಿಕ್ಕಯ್ಯ ಹಾಗೂ ಸೆಂಟ್ರಲ್ ಠಾಣೆಯ ಲೋಕೇಶ್ ಅಮಾನತುಗೊಂಡವರು. </p>.<p>ಕೆಲಸ ಕೊಡಿಸುವುದಾಗಿ ನಿರುದ್ಯೋಗಿಗಳನ್ನು ನಂಬಿಸಿ, ಅವರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿ ಈಗಾಗಲೇ ಜೈಲು ಪಾಲಾಗಿರುವ ವೆಂಕಟೇಶನಿಗೆ ಈ ಕಾನ್ಸ್ಟೆಬಲ್ಗಳು ಸಹಕರಿಸಿದ್ದರು ಎಂಬುದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ.</p>.<p>ವಂಚಕ ವೆಂಕಟೇಶನ ಜೊತೆ ಈ ಕಾನ್ಸ್ಟೆಬಲ್ಗಳು ಸಂಪರ್ಕದಲ್ಲಿ ಇದ್ದದ್ದು ಕಂಡುಬಂದಿದೆ. ಹೀಗಾಗಿ ಕರ್ತವ್ಯ ಲೋಪದ ಆರೋಪದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. </p>.<p>ಕೋಟ್ಯಂತರ ವಂಚನೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಮುಖ್ಯಮಂತ್ರಿ ಸೇರಿದಂತೆ ಉನ್ನತ ಅಧಿಕಾರಿಗಳ ಸಹಿಯನ್ನೇ ಫೋರ್ಜರಿ ಮಾಡಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಅಮಾಯಕ ಯುವಜನರನ್ನು ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾನ್ಸ್ಟೆಬಲ್ಗಳನ್ನು ಅಮಾನತುಗೊಂಡಿದ್ದಾರೆ.</p>.<p>ಮಂಡ್ಯ ಗ್ರಾಮಾಂತರ ಠಾಣೆಯ ಚಿಕ್ಕಯ್ಯ ಹಾಗೂ ಸೆಂಟ್ರಲ್ ಠಾಣೆಯ ಲೋಕೇಶ್ ಅಮಾನತುಗೊಂಡವರು. </p>.<p>ಕೆಲಸ ಕೊಡಿಸುವುದಾಗಿ ನಿರುದ್ಯೋಗಿಗಳನ್ನು ನಂಬಿಸಿ, ಅವರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿ ಈಗಾಗಲೇ ಜೈಲು ಪಾಲಾಗಿರುವ ವೆಂಕಟೇಶನಿಗೆ ಈ ಕಾನ್ಸ್ಟೆಬಲ್ಗಳು ಸಹಕರಿಸಿದ್ದರು ಎಂಬುದು ಪೊಲೀಸ್ ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ.</p>.<p>ವಂಚಕ ವೆಂಕಟೇಶನ ಜೊತೆ ಈ ಕಾನ್ಸ್ಟೆಬಲ್ಗಳು ಸಂಪರ್ಕದಲ್ಲಿ ಇದ್ದದ್ದು ಕಂಡುಬಂದಿದೆ. ಹೀಗಾಗಿ ಕರ್ತವ್ಯ ಲೋಪದ ಆರೋಪದ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. </p>.<p>ಕೋಟ್ಯಂತರ ವಂಚನೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>