‘ಉದ್ಯೋಗ ಭದ್ರತೆ ಇಲ್ಲದ ಸಾವಿರಾರು ಅತಿಥಿ ಉಪನ್ಯಾಸಕರು ಮನೋರೋಗಿಗಳಾಗುತ್ತಿದ್ದಾರೆ. ಲಾಕ್ಡೌನ್ ಅವಧಿಯಲ್ಲಿ ನಿರುದ್ಯೋಗಿಗಳಾಗಿ, ಆತ್ಮಹತ್ಯೆ ಹಾದಿ ತುಳಿಯುತ್ತಿದ್ದಾರೆ. ಸರ್ಕಾರವು ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸಬೇಕು’ ಎಂದು ರಾಜ್ಯ ಶೈಕ್ಷಣಿಕ ದಿಕ್ಸೂಚಿ ಹಾಗೂ ಸುಧಾರಣಾ ಸಮಿತಿ ಅಧ್ಯಕ್ಷ ಸುಧಾಕರ ಹೊಸಳ್ಳಿ ಒತ್ತಾಯಿಸಿದರು.