ಶ್ರೀರಂಗಪಟ್ಟಣ: ಬಂಧುಗಳ ಮದುವೆಗೆ ಬಂದಿದ್ದ ಇಬ್ಬರು ಯುವಕರು ಈಜಲು ನದಿಗೆ ಇಳಿದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಳಗೊಳ ಬಳಿಯ ಬಲಮುರಿ ಪ್ರಕೃತಿ ತಾಣದಲ್ಲಿ ಭಾನುವಾರ ಸಂಜೆ ನಡೆದಿದೆ.
ಹೊಳೆನರಸೀಪುರದ ಹೌಸಿಂಗ್ ಬೋರ್ಡ್ ಕಾಲೊನಿಯ ದರ್ಶನ್ (19) ಮತ್ತು ಧನಂಜಯ (19) ಮೃತರು.
ಮದುವೆ ಮುಗಿದ ಬಳಿಕ ಈಜಲು ನದಿಗೆ ಇಳಿದಾಗ ಸುಳಿಗೆ ಸಿಕ್ಕಿ ಮುಳುಗಿದ್ದಾರೆ. ತಕ್ಷಣಕ್ಕೆ ಅವರನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಂಜೆ ವೇಳೆಗೆ ಈಜುಗಾರರ ಸಹಾಯದಿಂದ ಶವಗಳನ್ನು ನದಿಯಿಂದ ಮೇಲೆ ತೆಗೆದು ಮೈಸೂರಿನ ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಯಿತು. ಕೆಆರ್ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.