<p><strong>ಮಂಡ್ಯ:</strong> ರುಂಡ, ಮುಂಡ ಬೇರ್ಪಡಿಸಿದ ರೀತಿಯಲ್ಲಿ ಈಚೆಗೆ ಪತ್ತೆಯಾಗಿದ್ದ ಇಬ್ಬರು ಅಪರಿಚಿತ ಮಹಿಳೆಯರ ಗುರುತು ಪತ್ತೆ ಕಾರ್ಯಾಚರಣೆ ಪೊಲೀಸರಿಗೆ ತಲೆನೋವಾಗಿದೆ. ಕೊಲೆಯಾದ ಮಹಿಳೆಯರ ಸುಳಿವು ನೀಡಿದವರಿಗೆ ₹ 1 ಲಕ್ಷ ಬಹುಮಾನ ನೀಡಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಿಸಿದೆ.</p>.<p>ಎರಡೂ ಮೃತದೇಹಗಳು ಒಂದೇ ರೀತಿಯಲ್ಲಿ ಕೊಲೆಯಾಗಿದ್ದು ಪೊಲೀಸರಿಗೆ ಹಲವು ಅನುಮಾನಗಳು ಕಾಡುತ್ತಿವೆ. ಕಳೆದೆರಡು ವಾರದಿಂದ ಆರೋಪಿಗಳ ಪತ್ತೆ ಸಾಧ್ಯವಾಗಿಲ್ಲ. 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಜಿಲ್ಲೆ, ಹೊರ ಜಿಲ್ಲೆಗಳಲ್ಲಿ ಮಾಹಿತಿ ಕಲೆಹಾಕುತ್ತಿದ್ದಾರೆ. ಭಿತ್ತಿಪತ್ರಗಳನ್ನು ಹಂಚಿಕೆ ಮಾಡಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಮತ್ತಷ್ಟು ಜಟಿಲವಾಗುತ್ತಿರುವ ಕಾರಣ ಪೊಲೀಸರು ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ್ದಾರೆ.</p>.<p>ಜೂನ್ 8ರಂದು ಪಾಂಡವಪುರ ತಾಲ್ಲೂಕು ಬೇಬಿ ಗ್ರಾಮದ ಕೆರೆಯ ಕಾಲುವೆಯಲ್ಲಿ ಒಂದು ಶವ ಪತ್ತೆಯಾಗಿದ್ದರೆ, ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಬಳಿಯ ಸಿಡಿಎಸ್ ನಾಲೆಯಲ್ಲಿ ಇನ್ನೊಂದು ಶವ ಪತ್ತೆಯಾಗಿತ್ತು. ದೇಹಗಳು ಮುಂಡ ಭಾಗ ಮಾತ್ರ ಪತ್ತೆಯಾಗಿದ್ದು ರುಂಡ ಸಿಕ್ಕಿರಲಿಲ್ಲ. ಎರಡೂ ಕೊಲೆಗಳು ಒಂದೇ ರೀತಿಯಲ್ಲಿ ನಡೆದಿರುವ ಕಾರಣ ಪೊಲೀಸರು ವಿವಿಧ ದಿಕ್ಕುಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.</p>.<p>‘ಮಹಿಳೆಯರ ಗುರುತು ಪತ್ತೆಯಾದರೆ ತನಿಖೆಗೆ ಸಹಾಯವಾಗುತ್ತಿದೆ. ಆ ನಿಟ್ಟಿನಲ್ಲಿ ಗುರುತು ಪತ್ತೆಗೆ ಪ್ರಮುಖ ಆದ್ಯತೆ ನೀಡಲಾಗಿದೆ. ಶೀಘ್ರ ಮಾಹಿತಿ ದೊರೆಯುವ ನಿರೀಕ್ಷೆ ಇದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ರುಂಡ, ಮುಂಡ ಬೇರ್ಪಡಿಸಿದ ರೀತಿಯಲ್ಲಿ ಈಚೆಗೆ ಪತ್ತೆಯಾಗಿದ್ದ ಇಬ್ಬರು ಅಪರಿಚಿತ ಮಹಿಳೆಯರ ಗುರುತು ಪತ್ತೆ ಕಾರ್ಯಾಚರಣೆ ಪೊಲೀಸರಿಗೆ ತಲೆನೋವಾಗಿದೆ. ಕೊಲೆಯಾದ ಮಹಿಳೆಯರ ಸುಳಿವು ನೀಡಿದವರಿಗೆ ₹ 1 ಲಕ್ಷ ಬಹುಮಾನ ನೀಡಲಾಗುವುದು ಎಂದು ಪೊಲೀಸ್ ಇಲಾಖೆ ಪ್ರಕಟಿಸಿದೆ.</p>.<p>ಎರಡೂ ಮೃತದೇಹಗಳು ಒಂದೇ ರೀತಿಯಲ್ಲಿ ಕೊಲೆಯಾಗಿದ್ದು ಪೊಲೀಸರಿಗೆ ಹಲವು ಅನುಮಾನಗಳು ಕಾಡುತ್ತಿವೆ. ಕಳೆದೆರಡು ವಾರದಿಂದ ಆರೋಪಿಗಳ ಪತ್ತೆ ಸಾಧ್ಯವಾಗಿಲ್ಲ. 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಜಿಲ್ಲೆ, ಹೊರ ಜಿಲ್ಲೆಗಳಲ್ಲಿ ಮಾಹಿತಿ ಕಲೆಹಾಕುತ್ತಿದ್ದಾರೆ. ಭಿತ್ತಿಪತ್ರಗಳನ್ನು ಹಂಚಿಕೆ ಮಾಡಿ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ಮತ್ತಷ್ಟು ಜಟಿಲವಾಗುತ್ತಿರುವ ಕಾರಣ ಪೊಲೀಸರು ಸುಳಿವು ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ್ದಾರೆ.</p>.<p>ಜೂನ್ 8ರಂದು ಪಾಂಡವಪುರ ತಾಲ್ಲೂಕು ಬೇಬಿ ಗ್ರಾಮದ ಕೆರೆಯ ಕಾಲುವೆಯಲ್ಲಿ ಒಂದು ಶವ ಪತ್ತೆಯಾಗಿದ್ದರೆ, ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಬಳಿಯ ಸಿಡಿಎಸ್ ನಾಲೆಯಲ್ಲಿ ಇನ್ನೊಂದು ಶವ ಪತ್ತೆಯಾಗಿತ್ತು. ದೇಹಗಳು ಮುಂಡ ಭಾಗ ಮಾತ್ರ ಪತ್ತೆಯಾಗಿದ್ದು ರುಂಡ ಸಿಕ್ಕಿರಲಿಲ್ಲ. ಎರಡೂ ಕೊಲೆಗಳು ಒಂದೇ ರೀತಿಯಲ್ಲಿ ನಡೆದಿರುವ ಕಾರಣ ಪೊಲೀಸರು ವಿವಿಧ ದಿಕ್ಕುಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.</p>.<p>‘ಮಹಿಳೆಯರ ಗುರುತು ಪತ್ತೆಯಾದರೆ ತನಿಖೆಗೆ ಸಹಾಯವಾಗುತ್ತಿದೆ. ಆ ನಿಟ್ಟಿನಲ್ಲಿ ಗುರುತು ಪತ್ತೆಗೆ ಪ್ರಮುಖ ಆದ್ಯತೆ ನೀಡಲಾಗಿದೆ. ಶೀಘ್ರ ಮಾಹಿತಿ ದೊರೆಯುವ ನಿರೀಕ್ಷೆ ಇದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>