<p><strong>ಶ್ರೀರಂಗಪಟ್ಟಣ</strong>: ಇಲ್ಲಿಗೆ ಸಮೀಪದ ದೊಡ್ಡ ಗೋಸಾಯಿಘಾಟ್ ಬಳಿ ಹಾಗೂ ಪಟ್ಟಣದ ಬೇಸಿಗೆ ಅರಮನೆ ಮುಂದೆ ನಿರ್ಮಿಸಿದ್ದ ಅನಧಿಕೃತ ಶೆಡ್ ಮತ್ತು ಕಟ್ಟಡಗಳನ್ನು ಶನಿವಾರ ತೆರವುಗೊಳಿಸಲಾಯಿತು.</p>.<p>ತಾಲ್ಲೂಕು ಆಡಳಿತ ಮತ್ತು ಪುರಸಭೆ ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಶೆಡ್ಗಳು ಮತ್ತು ಕಟ್ಟಡಗಳನ್ನು ತೆರವು ಮಾಡಿಸಿದವು.</p>.<p>ಗೋಸಾಯಿಘಾಟ್ ಬಳಿ ಕಾವೇರಿ ನದಿ ತೀರದಲ್ಲಿ ಈಚೆಗೆ ಹಲವು ಖಾಸಗಿ ಶೆಡ್ಗಳು ತಲೆ ಎತ್ತಿದ್ದವು. ಅಸ್ಥಿ ವಿಸರ್ಜನೆ, ಪಿಂಡ ಪ್ರದಾನ ಇತರ ಕೈಂಕರ್ಯಗಳನ್ನು ನಡೆಸುವ ಉದ್ದೇಶದಿಂದ ಸ್ಥಳೀಯರು ಶೆಡ್ಗಳನ್ನು ನಿರ್ಮಿಸಿ<br />ಕೊಂಡಿದ್ದರು. ಈ ಬಗ್ಗೆ ದೂರುಗಳು ಬಂದಿದ್ದವು.</p>.<p>ಅನಧಿಕೃತ ಕಟ್ಟಡ ಮತ್ತು ಶೆಡ್ಗಳನ್ನು ತೆರವು ಮಾಡುವ ವೇಳೆ ಕೆಲವರು ಪ್ರತಿರೋಧ ತೋರಿದರು. ಪೊಲೀಸ್ ಬಂದೋಬಸ್ತ್ನಲ್ಲಿ ಕಾರ್ಯಾಚರಣೆ ನಡೆಸಲಾಯಿತು.</p>.<p>ಪಟ್ಟಣದ ಟಿಪ್ಪು ಬೇಸಿಗೆ ಅರಮನೆ ಮುಂದೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ನಿಯಮ ಉಲ್ಲಂಘಿಸಿ ವಾಣಿಜ್ಯ ಮಳಿಗೆ ನಿರ್ಮಿಸಲಾಗಿತ್ತು. ಈ ಮಳಿಗೆ ತೆರವು ಮಾಡಿಸುವಂತೆ ಹೈಕೋರ್ಟ್ ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ನಸುಕಿನಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಮತ್ತೆ ಅನಧಿಕೃತ ಕಟ್ಟಡ ಅಥವಾ ಶೆಡ್ ನಿರ್ಮಿಸಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಹಶೀಲ್ದಾರ್ ಎಂ.ವಿ.ರೂಪಾ ಎಚ್ಚರಿಸಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ಇಲ್ಲಿಗೆ ಸಮೀಪದ ದೊಡ್ಡ ಗೋಸಾಯಿಘಾಟ್ ಬಳಿ ಹಾಗೂ ಪಟ್ಟಣದ ಬೇಸಿಗೆ ಅರಮನೆ ಮುಂದೆ ನಿರ್ಮಿಸಿದ್ದ ಅನಧಿಕೃತ ಶೆಡ್ ಮತ್ತು ಕಟ್ಟಡಗಳನ್ನು ಶನಿವಾರ ತೆರವುಗೊಳಿಸಲಾಯಿತು.</p>.<p>ತಾಲ್ಲೂಕು ಆಡಳಿತ ಮತ್ತು ಪುರಸಭೆ ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಶೆಡ್ಗಳು ಮತ್ತು ಕಟ್ಟಡಗಳನ್ನು ತೆರವು ಮಾಡಿಸಿದವು.</p>.<p>ಗೋಸಾಯಿಘಾಟ್ ಬಳಿ ಕಾವೇರಿ ನದಿ ತೀರದಲ್ಲಿ ಈಚೆಗೆ ಹಲವು ಖಾಸಗಿ ಶೆಡ್ಗಳು ತಲೆ ಎತ್ತಿದ್ದವು. ಅಸ್ಥಿ ವಿಸರ್ಜನೆ, ಪಿಂಡ ಪ್ರದಾನ ಇತರ ಕೈಂಕರ್ಯಗಳನ್ನು ನಡೆಸುವ ಉದ್ದೇಶದಿಂದ ಸ್ಥಳೀಯರು ಶೆಡ್ಗಳನ್ನು ನಿರ್ಮಿಸಿ<br />ಕೊಂಡಿದ್ದರು. ಈ ಬಗ್ಗೆ ದೂರುಗಳು ಬಂದಿದ್ದವು.</p>.<p>ಅನಧಿಕೃತ ಕಟ್ಟಡ ಮತ್ತು ಶೆಡ್ಗಳನ್ನು ತೆರವು ಮಾಡುವ ವೇಳೆ ಕೆಲವರು ಪ್ರತಿರೋಧ ತೋರಿದರು. ಪೊಲೀಸ್ ಬಂದೋಬಸ್ತ್ನಲ್ಲಿ ಕಾರ್ಯಾಚರಣೆ ನಡೆಸಲಾಯಿತು.</p>.<p>ಪಟ್ಟಣದ ಟಿಪ್ಪು ಬೇಸಿಗೆ ಅರಮನೆ ಮುಂದೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ನಿಯಮ ಉಲ್ಲಂಘಿಸಿ ವಾಣಿಜ್ಯ ಮಳಿಗೆ ನಿರ್ಮಿಸಲಾಗಿತ್ತು. ಈ ಮಳಿಗೆ ತೆರವು ಮಾಡಿಸುವಂತೆ ಹೈಕೋರ್ಟ್ ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ನಸುಕಿನಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಮತ್ತೆ ಅನಧಿಕೃತ ಕಟ್ಟಡ ಅಥವಾ ಶೆಡ್ ನಿರ್ಮಿಸಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಹಶೀಲ್ದಾರ್ ಎಂ.ವಿ.ರೂಪಾ ಎಚ್ಚರಿಸಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>