ಪಟ್ಟಣದ ಟಿಪ್ಪು ಬೇಸಿಗೆ ಅರಮನೆ ಮುಂದೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ನಿಯಮ ಉಲ್ಲಂಘಿಸಿ ವಾಣಿಜ್ಯ ಮಳಿಗೆ ನಿರ್ಮಿಸಲಾಗಿತ್ತು. ಈ ಮಳಿಗೆ ತೆರವು ಮಾಡಿಸುವಂತೆ ಹೈಕೋರ್ಟ್ ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ನಸುಕಿನಲ್ಲಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಮತ್ತೆ ಅನಧಿಕೃತ ಕಟ್ಟಡ ಅಥವಾ ಶೆಡ್ ನಿರ್ಮಿಸಿದರೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ತಹಶೀಲ್ದಾರ್ ಎಂ.ವಿ.ರೂಪಾ ಎಚ್ಚರಿಸಿದರು.