ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಶೋಷಿತ ವರ್ಗದ ಜನರನ್ನು ಮತ್ತಷ್ಟು ಶೋಷಣೆಗೆ ಈಡು ಮಾಡುತ್ತಿವೆ. ಮತ್ತೆ ಸಾಮಾಜಿಕ, ಆರ್ಥಿಕ ಅಸಮಾನತೆ ಸೃಷ್ಟಿಯಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ ಬಂದಿದೆ. ರೈಲು, ವಿಮಾನ ಇತರ ಉದ್ಯಮಗಳನ್ನು ಖಾಸಗೀಕರಣ ಮಾಡಿ ಹಿಂದುಳಿದವರ ಉದ್ಯೋಗ ಕಸಿದುಕೊಳ್ಳಲಾಗುತ್ತಿದೆ. ರೈತರು, ಕಾರ್ಮಿಕರು, ಮಹಿಳೆಯರ ಪ್ರತಿಭಟಿಸುವ ಹಕ್ಕನ್ನೇ ದಮನಿಸಲಾಗು ತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.