<p><strong>ಮಂಡ್ಯ:</strong> ‘ಕೇಂದ್ರದ ಈ ಬಾರಿಯ ಬಜೆಟ್ನಲ್ಲೂ ರಾಜ್ಯಕ್ಕೆ ಅನುದಾನ ಸಿಗುವ ನಿರೀಕ್ಷೆ ಇಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಕೊಟ್ಟ ಭರವಸೆಯನ್ನೇ ಈಡೇರಿಸಿಲ್ಲ. ಈಗ ನಮಗೆ ಅನುದಾನ ಕೊಡುತ್ತಾರೆ ಎಂಬ ವಿಶ್ವಾಸವಿಲ್ಲ’ ಎಂದು ಕೃಷಿ ಎನ್.ಚಲುವರಾಯಸ್ವಾಮಿ ಹೇಳಿದರು. </p>.<p>ಗಣರಾಜ್ಯೋತ್ಸವ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರು ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ₹16 ಸಾವಿರ ಕೋಟಿಯನ್ನು ಬಿಜೆಪಿಯವರು ಘೋಷಣೆ ಮಾಡಿದ್ದರು. ಅದನ್ನೇ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಕಳೆದ ಬಾರಿ ಬರಗಾಲದ ಪರಿಹಾರ ಕೇಳಿದ್ದೆವು. ಅವರು ಪರಿಹಾರ ಕೊಡಲಿಲ್ಲ. ನಾವು ಕೋರ್ಟ್ ಮೂಲಕ ಪರಿಹಾರ ಪಡೆದುಕೊಳ್ಳಬೇಕಾಯಿತು’ ಎಂದರು. </p>.<p>‘ಬೃಹತ್ ಕೈಗಾರಿಕಾ ಸಚಿವರಾಗಿರುವ ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಹೇಳಬೇಕು. ಯಾರೋ ಮಾಡಿದ್ದನ್ನು ನಾನು ಮಾಡಿದೆ ಅಂತಾರೆ. ಮಂಡ್ಯಕ್ಕೆ ವಿಶೇಷವಾಗಿ ಸಾವಿರ ಕೋಟಿ ರೂಪಾಯಿ ಅನುದಾನ ತರಬೇಕು. ಪ್ರಮುಖ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗೆ ಸೇರಿಸಬೇಕು. ಮೈಷುಗರ್ ಕಾರ್ಖಾನೆಗೆ ಕೇಂದ್ರದಿಂದ ₹500 ಕೋಟಿ ಕೊಡಿಸಲಿ. ನಾನೇ ಅಭಿನಂದನಾ ಸಮಾವೇಶ ಮಾಡಿ ಬೆಳ್ಳಿ ಗದೆ ಕೊಡ್ತೀನಿ. ನಾವು ಕೃಷಿ ವಿ.ವಿ.ಯನ್ನು ಮಂಡ್ಯಕ್ಕೆ ತಂದಿದ್ದೇವೆ. ಅದಕ್ಕೆ ಧನ್ಯವಾದ ಹೇಳುವ ಸೌಜನ್ಯ ಕುಮಾರಸ್ವಾಮಿಗೆ ಇಲ್ಲ’ ಎಂದು ಕುಟುಕಿದರು.</p>.<p>ಜಿ.ಪರಮೇಶ್ವರ ಮುಂದಿನ ಮುಖ್ಯಮಂತ್ರಿ ಎಂಬ ಕೂಗಿನ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಎಲ್ಲವೂ ಹೈಕಮಾಂಡ್ ನಿರ್ಧಾರ. ಮುಖ್ಯಮಂತ್ರಿ ಬದಲಾವಣೆ, ಅಧ್ಯಕ್ಷರ ಬದಲಾವಣೆ ಎಲ್ಲವನ್ನೂ ಮಲ್ಲಿಕಾರ್ಜುನ ಖರ್ಗೆ ಅವರೇ ತೀರ್ಮಾನ ಮಾಡ್ತಾರೆ. ಸಿ.ಎಂ. ಕೂಡ ನೇರವಾಗಿ ಹೇಳಿದ್ದಾರೆ. ಸಿ.ಎಂ. ಬದಲಾವಣೆ ಇಲ್ಲ’ ಎಂದು ಚಲುವರಾಯಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಕೇಂದ್ರದ ಈ ಬಾರಿಯ ಬಜೆಟ್ನಲ್ಲೂ ರಾಜ್ಯಕ್ಕೆ ಅನುದಾನ ಸಿಗುವ ನಿರೀಕ್ಷೆ ಇಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಕೊಟ್ಟ ಭರವಸೆಯನ್ನೇ ಈಡೇರಿಸಿಲ್ಲ. ಈಗ ನಮಗೆ ಅನುದಾನ ಕೊಡುತ್ತಾರೆ ಎಂಬ ವಿಶ್ವಾಸವಿಲ್ಲ’ ಎಂದು ಕೃಷಿ ಎನ್.ಚಲುವರಾಯಸ್ವಾಮಿ ಹೇಳಿದರು. </p>.<p>ಗಣರಾಜ್ಯೋತ್ಸವ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರು ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ₹16 ಸಾವಿರ ಕೋಟಿಯನ್ನು ಬಿಜೆಪಿಯವರು ಘೋಷಣೆ ಮಾಡಿದ್ದರು. ಅದನ್ನೇ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಕಳೆದ ಬಾರಿ ಬರಗಾಲದ ಪರಿಹಾರ ಕೇಳಿದ್ದೆವು. ಅವರು ಪರಿಹಾರ ಕೊಡಲಿಲ್ಲ. ನಾವು ಕೋರ್ಟ್ ಮೂಲಕ ಪರಿಹಾರ ಪಡೆದುಕೊಳ್ಳಬೇಕಾಯಿತು’ ಎಂದರು. </p>.<p>‘ಬೃಹತ್ ಕೈಗಾರಿಕಾ ಸಚಿವರಾಗಿರುವ ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎಂಬುದನ್ನು ಹೇಳಬೇಕು. ಯಾರೋ ಮಾಡಿದ್ದನ್ನು ನಾನು ಮಾಡಿದೆ ಅಂತಾರೆ. ಮಂಡ್ಯಕ್ಕೆ ವಿಶೇಷವಾಗಿ ಸಾವಿರ ಕೋಟಿ ರೂಪಾಯಿ ಅನುದಾನ ತರಬೇಕು. ಪ್ರಮುಖ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗೆ ಸೇರಿಸಬೇಕು. ಮೈಷುಗರ್ ಕಾರ್ಖಾನೆಗೆ ಕೇಂದ್ರದಿಂದ ₹500 ಕೋಟಿ ಕೊಡಿಸಲಿ. ನಾನೇ ಅಭಿನಂದನಾ ಸಮಾವೇಶ ಮಾಡಿ ಬೆಳ್ಳಿ ಗದೆ ಕೊಡ್ತೀನಿ. ನಾವು ಕೃಷಿ ವಿ.ವಿ.ಯನ್ನು ಮಂಡ್ಯಕ್ಕೆ ತಂದಿದ್ದೇವೆ. ಅದಕ್ಕೆ ಧನ್ಯವಾದ ಹೇಳುವ ಸೌಜನ್ಯ ಕುಮಾರಸ್ವಾಮಿಗೆ ಇಲ್ಲ’ ಎಂದು ಕುಟುಕಿದರು.</p>.<p>ಜಿ.ಪರಮೇಶ್ವರ ಮುಂದಿನ ಮುಖ್ಯಮಂತ್ರಿ ಎಂಬ ಕೂಗಿನ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಎಲ್ಲವೂ ಹೈಕಮಾಂಡ್ ನಿರ್ಧಾರ. ಮುಖ್ಯಮಂತ್ರಿ ಬದಲಾವಣೆ, ಅಧ್ಯಕ್ಷರ ಬದಲಾವಣೆ ಎಲ್ಲವನ್ನೂ ಮಲ್ಲಿಕಾರ್ಜುನ ಖರ್ಗೆ ಅವರೇ ತೀರ್ಮಾನ ಮಾಡ್ತಾರೆ. ಸಿ.ಎಂ. ಕೂಡ ನೇರವಾಗಿ ಹೇಳಿದ್ದಾರೆ. ಸಿ.ಎಂ. ಬದಲಾವಣೆ ಇಲ್ಲ’ ಎಂದು ಚಲುವರಾಯಸ್ವಾಮಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>