<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಕಸಬಾ, ಹಲಗೂರು ಹೋಬಳಿಯ ವಿವಿಧೆಡೆ ಗುರುವಾರ ರಾತ್ರಿ ಅಕಾಲಿಕ ಧಾರಾಕಾರ ಮಳೆಯಾಗಿದ್ದು, ನೂರಾರು ಎಕರೆಯಲ್ಲಿ ಭತ್ತದ ಬೆಳೆ ಮುಳುಗಿದೆ. </p>.<p>ತಾಲ್ಲೂಕಿನ ನೆಲಮಾಕನಹಳ್ಳಿ, ತಳಗವಾದಿ, ಮಾದಹಳ್ಳಿ, ಗುಳಘಟ್ಟ, ಕಂದೇಗಾಲ, ನೆಲ್ಲೂರು, ದುಗ್ಗನಹಳ್ಳಿ ತಾಲ್ಲೂಕಿನ ಬಹುತೇಕ ಕಡೆ ಮಧ್ಯರಾತ್ರಿ 2 ಗಂಟೆ ಕಾಲ ಮಳೆಯಾಯಿತು.</p>.<p>‘ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹ 30 ಸಾವಿರ ಪರಿಹಾರ ನೀಡಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಎನ್.ಭರತ್ ರಾಜ್ ಆಗ್ರಹಿಸಿದ್ದಾರೆ.</p>.<p><strong>ಚಾಮರಾಜನಗರ; ಬಿರುಸು ಮಳೆ :</strong> ಜಿಲ್ಲೆಯ ಹಲವೆಡೆ ಶುಕ್ರವಾರ ಬೆಳಿಗ್ಗೆ ಬಿರುಸಿನ ಮಳೆಯಾಯಿತು. ನಗರದಲ್ಲಿ ಜೋರು ಮಳೆಯಾದರೆ, ಯಳಂದೂರು, ಸಂತೇಮರಹಳ್ಳಿ ಹಾಗೂ ಗುಂಡ್ಲುಪೇಟೆಯಲ್ಲಿ ಸಾಧಾರಣ ಮಳೆ ಬಿತ್ತು. ಮಳೆಯಿಂದಾಗಿ ಕೆಲಹೊತ್ತು ಮೋಡಕವಿದಿದ್ದರೆ ಕೆಲಹೊತ್ತು ಬಿಸಿಲಿನ ವಾತಾವರಣ ಇತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಕಸಬಾ, ಹಲಗೂರು ಹೋಬಳಿಯ ವಿವಿಧೆಡೆ ಗುರುವಾರ ರಾತ್ರಿ ಅಕಾಲಿಕ ಧಾರಾಕಾರ ಮಳೆಯಾಗಿದ್ದು, ನೂರಾರು ಎಕರೆಯಲ್ಲಿ ಭತ್ತದ ಬೆಳೆ ಮುಳುಗಿದೆ. </p>.<p>ತಾಲ್ಲೂಕಿನ ನೆಲಮಾಕನಹಳ್ಳಿ, ತಳಗವಾದಿ, ಮಾದಹಳ್ಳಿ, ಗುಳಘಟ್ಟ, ಕಂದೇಗಾಲ, ನೆಲ್ಲೂರು, ದುಗ್ಗನಹಳ್ಳಿ ತಾಲ್ಲೂಕಿನ ಬಹುತೇಕ ಕಡೆ ಮಧ್ಯರಾತ್ರಿ 2 ಗಂಟೆ ಕಾಲ ಮಳೆಯಾಯಿತು.</p>.<p>‘ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹ 30 ಸಾವಿರ ಪರಿಹಾರ ನೀಡಬೇಕು’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಎನ್.ಭರತ್ ರಾಜ್ ಆಗ್ರಹಿಸಿದ್ದಾರೆ.</p>.<p><strong>ಚಾಮರಾಜನಗರ; ಬಿರುಸು ಮಳೆ :</strong> ಜಿಲ್ಲೆಯ ಹಲವೆಡೆ ಶುಕ್ರವಾರ ಬೆಳಿಗ್ಗೆ ಬಿರುಸಿನ ಮಳೆಯಾಯಿತು. ನಗರದಲ್ಲಿ ಜೋರು ಮಳೆಯಾದರೆ, ಯಳಂದೂರು, ಸಂತೇಮರಹಳ್ಳಿ ಹಾಗೂ ಗುಂಡ್ಲುಪೇಟೆಯಲ್ಲಿ ಸಾಧಾರಣ ಮಳೆ ಬಿತ್ತು. ಮಳೆಯಿಂದಾಗಿ ಕೆಲಹೊತ್ತು ಮೋಡಕವಿದಿದ್ದರೆ ಕೆಲಹೊತ್ತು ಬಿಸಿಲಿನ ವಾತಾವರಣ ಇತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>