<p><strong>ಮಂಡ್ಯ:</strong> ಉಪಲೋಕಾಯುಕ್ತ ಬಿ.ವೀರಪ್ಪ ಅವರು ಜಿಲ್ಲೆಯಲ್ಲಿ ನಾಲ್ಕು ದಿನಗಳ (ಮೇ 26ರಿಂದ ಮೇ 29ರವರೆಗೆ) ಪ್ರವಾಸ ಕೈಗೊಂಡು, ಸರ್ಕಾರಿ ಕಚೇರಿ, ಸರ್ಕಾರಿ ಜಾಗ ಸೇರಿದಂತೆ ಒಟ್ಟು 26 ಸ್ಥಳಗಳಿಗೆ ಭೇಟಿ ಕೊಟ್ಟು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. </p>.<p>ಕರ್ತವ್ಯದಲ್ಲಿ ನಿರ್ಲಕ್ಷ್ಯ, ವಿಳಂಬ ಧೋರಣೆ, ಅಕ್ರಮ ಎಸಗಿದ ತಪ್ಪಿತಸ್ಥ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ನಿಗದಿತ ಸಮಯದಲ್ಲಿ ಸೂಚಿಸಿದ ಕೆಲಸಗಳನ್ನು ಪೂರ್ಣಗೊಳಿಸುವಂತೆ ತಾಕೀತು ಮಾಡಿದರು. ಒಟ್ಟು 23 ಸ್ವಯಂಪ್ರೇರಿತ ದೂರುಗಳನ್ನು ದಾಖಲಿಸಿಕೊಂಡು, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. ಇಂಡುವಾಳು ಗ್ರಾಮ ಪಂಚಾಯಿತಿಯ ಪಿಡಿಒ ಆಗಿದ್ದ ವಿಶಾಲಮೂರ್ತಿ ಮತ್ತು ಹಾಲಿ ಪಿಡಿಒ ಯೋಗೇಶ್ ಇಬ್ಬರನ್ನೂ ಅಮಾನತುಗೊಳಿಸಿದ್ದಾರೆ. </p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಸಾರ್ವಜನಿಕರ ಅಹವಾಲು ಮತ್ತು ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತರಿಗೆ 445 ಹೊಸ ದೂರುಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದವು. ಇವುಗಳಲ್ಲಿ 155 ದೂರು ಅರ್ಜಿಗಳನ್ನು ವಿಚಾರಣೆ ನಡೆಸಿ, ಪರಿಹಾರ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು. ಹೊಸ ಪ್ರಕರಣಗಳಲ್ಲಿ 54 ದೂರು ಅರ್ಜಿಗಳನ್ನು ಮುಕ್ತಾಯಗೊಳಿಸಿದರು. </p>.<p>ಬುಧವಾರ ಮತ್ತು ಗುರುವಾರ ಬೆಳಿಗ್ಗೆಯಿಂದ ತಡರಾತ್ರಿವರೆಗೆ ನಿರಂತರವಾಗಿ ವಿಚಾರಣೆ ನಡೆಸಿದ ಪರಿಣಾಮ, ವಿಚಾರಣೆ ಮಾಡಿದ 157 ಬಾಕಿ ದೂರುಗಳಲ್ಲಿ ಒಂದೇ ದಿನ 62 ಅರ್ಜಿಗಳನ್ನು ಮುಕ್ತಾಯಗೊಳಿಸಿದರು. ಒಟ್ಟಾರೆ 116 ಪ್ರಕರಣಗಳನ್ನು ಇತ್ಯರ್ಥಗೊಳಿಸುವಲ್ಲಿ ಉಪಲೋಕಾಯುಕ್ತರು ಯಶಸ್ವಿಯಾದರು. </p>.<p>ಇಂಡುವಾಳು ಗ್ರಾಮ ಪಂಚಾಯಿತಿ, ಮಂಡ್ಯ ಗ್ರಾಮಾಂತರ ಗ್ರಾಮ ಪಂಚಾಯಿತಿ, ಮಂಡ್ಯ ತಾಲ್ಲೂಕು ಪಂಚಾಯಿತಿ, ಮಿಮ್ಸ್ ಆಸ್ಪತ್ರೆ, ಶ್ರೀರಂಗಪಟ್ಟಣದ ಕಾವೇರಿ ನದಿ, ಕರಿಘಟ್ಟ, ವೆಲ್ಲೆಸ್ಲಿ ಸೇತುವೆ, ಮಂಡ್ಯ ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ನಗರ ಸಾರಿಗೆ ಬಸ್ ನಿಲ್ದಾಣ, ಸಮಾಜ ಕಲ್ಯಾಣ ಇಲಾಖೆ, ಹಾಸ್ಟೆಲ್, ಆರ್ಟಿಒ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೇರಿದಂತೆ ಒಟ್ಟು 26 ಸ್ಥಳಗಳಿಗೆ ಭೇಟಿ ಕೊಟ್ಟು, ಜನರಿಂದ ಸಮಸ್ಯೆ ಆಲಿಸಿದರು ಮತ್ತು ದಾಖಲೆಗಳನ್ನು ಪರಿಶೀಲಿಸಿದರು. </p>.<p>ದಾಖಲೆ ತರದವರಿಗೆ ತರಾಟೆ:</p>.<p>ದೂರು ಅರ್ಜಿಯ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ತರದೆ, ಕೈಬೀಸಿಕೊಂಡು ಬರುವ ಅಧಿಕಾರಿಗಳಿಗೆ ಉಪಲೋಕಾಯುಕ್ತರು ಚಳಿ ಬಿಡಿಸಿದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ರಿಟ್ ಕಾಪಿ ಮತ್ತು ಮೇಲಧಿಕಾರಿಗಳು ಹೊರಡಿಸಿದ ಆದೇಶ ಪ್ರತಿಗಳನ್ನು ಏಕೆ ತಂದಿಲ್ಲ. ಎಷ್ಟು ಬಾರಿ ಹೇಳಿದರೂ ನಿಮ್ಮ ಬುದ್ಧಿಯನ್ನು ನೀವು ಬಿಡುವುದಿಲ್ಲ. ನಿಮ್ಮದು ಎಮ್ಮೆ ಚರ್ಮ. ನಿಮ್ಮ ಬೇಜವಾಬ್ದಾರಿತನದಿಂದ ಪ್ರಕರಣಗಳ ವಿಲೇವಾರಿ ವಿಳಂಬವಾಗುತ್ತಿದೆ. ನಮ್ಮ ಸಮಯವನ್ನು ಏಕೆ ಹಾಳು ಮಾಡುತ್ತೀರಿ ಎಂದು ನಾಗಮಂಗಲ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪಿಡಿಇ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. </p>.<p>ಆಸ್ಪತ್ರೆಗಳಲ್ಲಿ ಸಿಸಿಟಿವಿಗೆ ಗ್ರಹಣ:</p>.<p>ಮಂಡ್ಯ ಜಿಲ್ಲೆಯ ಕೆರಗೋಡು, ಹುಲಿವಾನ, ಮಾರಗೊಂಡನಹಳ್ಳಿ, ಕಿಲಾರ ಸೇರಿದಂತೆ ವಿವಿಧೆಡೆ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಮತ್ತು ಬಯೋಮೆಟ್ರಿಕ್ ಯಂತ್ರಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದರಿಂದ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಸರಿಯಾದ ವೇಳೆಗೆ ಆಸ್ಪತ್ರೆಗೆ ಬರುವುದಿಲ್ಲ. ಇದರಿಂದ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸಾಗರ್ ಎಂಬುವರು ದೂರಿದರು.</p>.<p><strong>‘ರಿಸೈನ್ ಮಾಡಿ ಮನೆಗೆ ಹೋಗಿ’</strong></p><p> ಖಾಸಗಿ ಜಮೀನಿನ ಒತ್ತುವರಿ ತೆರವುಗೊಳಿಸಲು ವಿಳಂಬ ಮಾಡಿದ ಮಂಡ್ಯ ತಹಶೀಲ್ದಾರ್ ಶಿವಕುಮಾರ್ ಬಿರಾದಾರ್ ವಿರುದ್ಧ ಉಪಲೋಕಾಯುಕ್ತರು ಕಿಡಿಕಾರಿದರು. ‘ನ್ಯಾಯಾಲಯ ಆದೇಶವಿದ್ದರೂ ಏಕೆ ಪಾಲಿಸಿಲ್ಲ. ಕೆಲಸ ಮಾಡದಿದ್ದರೆ ರಿಸೈನ್ ಮಾಡಿ ಮನೆಗೆ ಹೋಗಿ. 15 ದಿನಗಳಲ್ಲಿ ತೆರವುಗೊಳಿಸದಿದ್ದರೆ ನಿಮ್ಮ ಮೇಲೆ ಕ್ರಮ ಕೈಗೊಳ್ಳುತ್ತೇನೆ’ ಎಂದು ಎಚ್ಚರಿಕೆ ನೀಡಿದರು. </p>.<p> <strong>ಜನವಸತಿ ಪ್ರದೇಶದಲ್ಲಿ ಬಾರ್!</strong></p><p> ‘ಮದ್ದೂರು ತಾಲ್ಲೂಕಿನ ನಿಡಘಟ್ಟ ಗ್ರಾಮದ ಜನವಸತಿ ಪ್ರದೇಶದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಹೇಗೆ ಅನುಮತಿ ಕೊಟ್ರಿ? ಇ–ಸ್ವತ್ತಿನಲ್ಲಿ ವಾಸದ ಮನೆ ಎಂದು ಅಂತ ಅನುಮತಿ ಪಡೆದು ಬಾರ್ ನಡೆಸುತ್ತಿದ್ದರೂ ಕಣ್ಮುಚ್ಚಿ ಕುಳಿತಿರುವುದು ಏಕೆ? ರಸ್ತೆ ಒತ್ತುವರಿ ಮಾಡಿಕೊಂಡು ಶಾಲೆ ಸಮೀಪವೇ ಬಾರ್ ತೆರೆದಿರುವ ಕಳ್ಳರಿಗೆ ಸಹಾಯ ಮಾಡುತ್ತಿದ್ದೀರಾ?’ ಎಂದು ಉಪಲೋಕಾಯುಕ್ತರು ಅಬಕಾರಿ ಇಲಾಖೆ ಉಪ ಆಯುಕ್ತ ಮತ್ತು ಪಂಚಾಯಿತಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಉಪಲೋಕಾಯುಕ್ತ ಬಿ.ವೀರಪ್ಪ ಅವರು ಜಿಲ್ಲೆಯಲ್ಲಿ ನಾಲ್ಕು ದಿನಗಳ (ಮೇ 26ರಿಂದ ಮೇ 29ರವರೆಗೆ) ಪ್ರವಾಸ ಕೈಗೊಂಡು, ಸರ್ಕಾರಿ ಕಚೇರಿ, ಸರ್ಕಾರಿ ಜಾಗ ಸೇರಿದಂತೆ ಒಟ್ಟು 26 ಸ್ಥಳಗಳಿಗೆ ಭೇಟಿ ಕೊಟ್ಟು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. </p>.<p>ಕರ್ತವ್ಯದಲ್ಲಿ ನಿರ್ಲಕ್ಷ್ಯ, ವಿಳಂಬ ಧೋರಣೆ, ಅಕ್ರಮ ಎಸಗಿದ ತಪ್ಪಿತಸ್ಥ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು, ನಿಗದಿತ ಸಮಯದಲ್ಲಿ ಸೂಚಿಸಿದ ಕೆಲಸಗಳನ್ನು ಪೂರ್ಣಗೊಳಿಸುವಂತೆ ತಾಕೀತು ಮಾಡಿದರು. ಒಟ್ಟು 23 ಸ್ವಯಂಪ್ರೇರಿತ ದೂರುಗಳನ್ನು ದಾಖಲಿಸಿಕೊಂಡು, ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದರು. ಇಂಡುವಾಳು ಗ್ರಾಮ ಪಂಚಾಯಿತಿಯ ಪಿಡಿಒ ಆಗಿದ್ದ ವಿಶಾಲಮೂರ್ತಿ ಮತ್ತು ಹಾಲಿ ಪಿಡಿಒ ಯೋಗೇಶ್ ಇಬ್ಬರನ್ನೂ ಅಮಾನತುಗೊಳಿಸಿದ್ದಾರೆ. </p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಸಾರ್ವಜನಿಕರ ಅಹವಾಲು ಮತ್ತು ದೂರು ಸ್ವೀಕಾರ ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತರಿಗೆ 445 ಹೊಸ ದೂರುಗಳು ಸಾರ್ವಜನಿಕರಿಂದ ಸಲ್ಲಿಕೆಯಾಗಿದ್ದವು. ಇವುಗಳಲ್ಲಿ 155 ದೂರು ಅರ್ಜಿಗಳನ್ನು ವಿಚಾರಣೆ ನಡೆಸಿ, ಪರಿಹಾರ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು. ಹೊಸ ಪ್ರಕರಣಗಳಲ್ಲಿ 54 ದೂರು ಅರ್ಜಿಗಳನ್ನು ಮುಕ್ತಾಯಗೊಳಿಸಿದರು. </p>.<p>ಬುಧವಾರ ಮತ್ತು ಗುರುವಾರ ಬೆಳಿಗ್ಗೆಯಿಂದ ತಡರಾತ್ರಿವರೆಗೆ ನಿರಂತರವಾಗಿ ವಿಚಾರಣೆ ನಡೆಸಿದ ಪರಿಣಾಮ, ವಿಚಾರಣೆ ಮಾಡಿದ 157 ಬಾಕಿ ದೂರುಗಳಲ್ಲಿ ಒಂದೇ ದಿನ 62 ಅರ್ಜಿಗಳನ್ನು ಮುಕ್ತಾಯಗೊಳಿಸಿದರು. ಒಟ್ಟಾರೆ 116 ಪ್ರಕರಣಗಳನ್ನು ಇತ್ಯರ್ಥಗೊಳಿಸುವಲ್ಲಿ ಉಪಲೋಕಾಯುಕ್ತರು ಯಶಸ್ವಿಯಾದರು. </p>.<p>ಇಂಡುವಾಳು ಗ್ರಾಮ ಪಂಚಾಯಿತಿ, ಮಂಡ್ಯ ಗ್ರಾಮಾಂತರ ಗ್ರಾಮ ಪಂಚಾಯಿತಿ, ಮಂಡ್ಯ ತಾಲ್ಲೂಕು ಪಂಚಾಯಿತಿ, ಮಿಮ್ಸ್ ಆಸ್ಪತ್ರೆ, ಶ್ರೀರಂಗಪಟ್ಟಣದ ಕಾವೇರಿ ನದಿ, ಕರಿಘಟ್ಟ, ವೆಲ್ಲೆಸ್ಲಿ ಸೇತುವೆ, ಮಂಡ್ಯ ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ನಗರ ಸಾರಿಗೆ ಬಸ್ ನಿಲ್ದಾಣ, ಸಮಾಜ ಕಲ್ಯಾಣ ಇಲಾಖೆ, ಹಾಸ್ಟೆಲ್, ಆರ್ಟಿಒ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೇರಿದಂತೆ ಒಟ್ಟು 26 ಸ್ಥಳಗಳಿಗೆ ಭೇಟಿ ಕೊಟ್ಟು, ಜನರಿಂದ ಸಮಸ್ಯೆ ಆಲಿಸಿದರು ಮತ್ತು ದಾಖಲೆಗಳನ್ನು ಪರಿಶೀಲಿಸಿದರು. </p>.<p>ದಾಖಲೆ ತರದವರಿಗೆ ತರಾಟೆ:</p>.<p>ದೂರು ಅರ್ಜಿಯ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ತರದೆ, ಕೈಬೀಸಿಕೊಂಡು ಬರುವ ಅಧಿಕಾರಿಗಳಿಗೆ ಉಪಲೋಕಾಯುಕ್ತರು ಚಳಿ ಬಿಡಿಸಿದರು.</p>.<p>ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ರಿಟ್ ಕಾಪಿ ಮತ್ತು ಮೇಲಧಿಕಾರಿಗಳು ಹೊರಡಿಸಿದ ಆದೇಶ ಪ್ರತಿಗಳನ್ನು ಏಕೆ ತಂದಿಲ್ಲ. ಎಷ್ಟು ಬಾರಿ ಹೇಳಿದರೂ ನಿಮ್ಮ ಬುದ್ಧಿಯನ್ನು ನೀವು ಬಿಡುವುದಿಲ್ಲ. ನಿಮ್ಮದು ಎಮ್ಮೆ ಚರ್ಮ. ನಿಮ್ಮ ಬೇಜವಾಬ್ದಾರಿತನದಿಂದ ಪ್ರಕರಣಗಳ ವಿಲೇವಾರಿ ವಿಳಂಬವಾಗುತ್ತಿದೆ. ನಮ್ಮ ಸಮಯವನ್ನು ಏಕೆ ಹಾಳು ಮಾಡುತ್ತೀರಿ ಎಂದು ನಾಗಮಂಗಲ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪಿಡಿಇ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. </p>.<p>ಆಸ್ಪತ್ರೆಗಳಲ್ಲಿ ಸಿಸಿಟಿವಿಗೆ ಗ್ರಹಣ:</p>.<p>ಮಂಡ್ಯ ಜಿಲ್ಲೆಯ ಕೆರಗೋಡು, ಹುಲಿವಾನ, ಮಾರಗೊಂಡನಹಳ್ಳಿ, ಕಿಲಾರ ಸೇರಿದಂತೆ ವಿವಿಧೆಡೆ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ ಮತ್ತು ಬಯೋಮೆಟ್ರಿಕ್ ಯಂತ್ರಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದರಿಂದ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಸರಿಯಾದ ವೇಳೆಗೆ ಆಸ್ಪತ್ರೆಗೆ ಬರುವುದಿಲ್ಲ. ಇದರಿಂದ ರೋಗಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸಾಗರ್ ಎಂಬುವರು ದೂರಿದರು.</p>.<p><strong>‘ರಿಸೈನ್ ಮಾಡಿ ಮನೆಗೆ ಹೋಗಿ’</strong></p><p> ಖಾಸಗಿ ಜಮೀನಿನ ಒತ್ತುವರಿ ತೆರವುಗೊಳಿಸಲು ವಿಳಂಬ ಮಾಡಿದ ಮಂಡ್ಯ ತಹಶೀಲ್ದಾರ್ ಶಿವಕುಮಾರ್ ಬಿರಾದಾರ್ ವಿರುದ್ಧ ಉಪಲೋಕಾಯುಕ್ತರು ಕಿಡಿಕಾರಿದರು. ‘ನ್ಯಾಯಾಲಯ ಆದೇಶವಿದ್ದರೂ ಏಕೆ ಪಾಲಿಸಿಲ್ಲ. ಕೆಲಸ ಮಾಡದಿದ್ದರೆ ರಿಸೈನ್ ಮಾಡಿ ಮನೆಗೆ ಹೋಗಿ. 15 ದಿನಗಳಲ್ಲಿ ತೆರವುಗೊಳಿಸದಿದ್ದರೆ ನಿಮ್ಮ ಮೇಲೆ ಕ್ರಮ ಕೈಗೊಳ್ಳುತ್ತೇನೆ’ ಎಂದು ಎಚ್ಚರಿಕೆ ನೀಡಿದರು. </p>.<p> <strong>ಜನವಸತಿ ಪ್ರದೇಶದಲ್ಲಿ ಬಾರ್!</strong></p><p> ‘ಮದ್ದೂರು ತಾಲ್ಲೂಕಿನ ನಿಡಘಟ್ಟ ಗ್ರಾಮದ ಜನವಸತಿ ಪ್ರದೇಶದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ತೆರೆಯಲು ಹೇಗೆ ಅನುಮತಿ ಕೊಟ್ರಿ? ಇ–ಸ್ವತ್ತಿನಲ್ಲಿ ವಾಸದ ಮನೆ ಎಂದು ಅಂತ ಅನುಮತಿ ಪಡೆದು ಬಾರ್ ನಡೆಸುತ್ತಿದ್ದರೂ ಕಣ್ಮುಚ್ಚಿ ಕುಳಿತಿರುವುದು ಏಕೆ? ರಸ್ತೆ ಒತ್ತುವರಿ ಮಾಡಿಕೊಂಡು ಶಾಲೆ ಸಮೀಪವೇ ಬಾರ್ ತೆರೆದಿರುವ ಕಳ್ಳರಿಗೆ ಸಹಾಯ ಮಾಡುತ್ತಿದ್ದೀರಾ?’ ಎಂದು ಉಪಲೋಕಾಯುಕ್ತರು ಅಬಕಾರಿ ಇಲಾಖೆ ಉಪ ಆಯುಕ್ತ ಮತ್ತು ಪಂಚಾಯಿತಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>