ನಾಳೆ, ನಾಡಿದ್ದು ರಜೆ ಇಲ್ಲ: ಕಿಸಾನ್ ಸಮ್ಮಾನ್ ಯೋಜನೆಗೆ ದಾಖಲಾತಿ ಪಡೆಯಲು ಶನಿವಾರ ಮತ್ತು ಭಾನುವಾರ ಜಿಲ್ಲೆಯಲ್ಲಿ ವಿಶೇಷ ಅಭಿಯಾನ ಕೈಗೊಳ್ಳಲಾಗಿದೆ. ಕೃಷಿ, ಕಂದಾಯ ಇಲಾಖೆ ಸಿಬ್ಬಂದಿ ಹಳ್ಳಿಗಳಿಗೆ ತೆರಳಿ ರೈತರ ಜಮೀನು ಘೋಷಣಾ ಪತ್ರ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಜೂನ್ 22 ನಾಲ್ಕನೇ ಶನಿವಾರ, ಜೂನ್ 23 ಭಾನುವಾರದ ರಜೆ ದಿನಗಳು ಕೂಡ ಕೆಲಸ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.