<p><strong>ಮೇಲುಕೋಟೆ (ಮಂಡ್ಯ ಜಿಲ್ಲೆ):</strong> ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಕ್ಷೇತ್ರದಲ್ಲಿ ಏ.7ರಂದು ವೈರಮುಡಿ ಬ್ರಹ್ಮೋತ್ಸವ ನಡೆಯಲಿದೆ. ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆಯಿಂದ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.</p><p>ಇಲ್ಲಿನ ಚೆಲುವನಾರಾಯಣ ಸ್ವಾಮಿ ದೇವಾಲಯದ ಸಂಪ್ರದಾಯದಂತೆ ಬುಧವಾರ ರಾತ್ರಿ ರೋಹಿಣಿ ನಕ್ಷತ್ರದಲ್ಲಿ ವೈರಮುಡಿ ಬ್ರಹ್ಮೋತ್ಸವಕ್ಕೆ ಅಂಕುರಾರ್ಪಣೆಯೊಂದಿಗೆ ಅಧಿಕೃತ ಚಾಲನೆ ನೀಡಲಾಯಿತು.</p><p>ಇಲ್ಲಿನ ಅಕ್ಕತಂಗಿ ಕೊಳ, ಧನುಷ್ ಕೋಟೆ, ರಾಯಗೋಪುರ, ಪಂಚಕಲ್ಯಾಣಿ, ಯೋಗಾನರಸಿಂಹಸ್ವಾಮಿ ಬೆಟ್ಟ ಸೇರಿದಂತೆ ಅನೇಕ ತಾಣಗಳಿಗೆ ₹50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.</p><p>ಏ.7ರಂದು ಮಂಡ್ಯ ಜಿಲ್ಲಾ ಖಜಾನೆಯಿಂದ ತಂದ ವಜ್ರಖಚಿತ ವೈರಮುಡಿ ಕಿರೀಟ ಹಾಗೂ ಗಂಡಭೇರುಂಡ ಪದಕ ಸೇರಿದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಆಭರಣಗಳನ್ನು ಶ್ರೀದೇವಿ, ಭೂದೇವಿಯರೊಂದಿಗೆ ಗರುಢಾರೂಢನಾದ ಚಲುವನಾರಾಯಣಸ್ವಾಮಿಗೆ ಅಲಂಕಾರ ಮಾಡಲಾಗುತ್ತದೆ.</p><p>‘ಲೋಕ ಕಲ್ಯಾಣಾರ್ಥವಾಗಿ ಅರ್ಧ ಚಂದ್ರಕೃತಿಯ ವೈರಮುಡಿ ಬ್ರಹ್ಮೋತ್ಸವ ಸಡಗರದಿಂದ ಜರುಗಲಿದೆ. ಈ ಬಾರಿಯೂ ಮುಖ್ಯಮಂತ್ರಿ ₹10 ಕೋಟಿ ವಿಶೇಷ ಅನುದಾನ ನೀಡಿದ್ದಾರೆ’ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೇಲುಕೋಟೆ (ಮಂಡ್ಯ ಜಿಲ್ಲೆ):</strong> ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಕ್ಷೇತ್ರದಲ್ಲಿ ಏ.7ರಂದು ವೈರಮುಡಿ ಬ್ರಹ್ಮೋತ್ಸವ ನಡೆಯಲಿದೆ. ಲಕ್ಷಾಂತರ ಭಕ್ತರು ಸೇರುವ ನಿರೀಕ್ಷೆಯಿಂದ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.</p><p>ಇಲ್ಲಿನ ಚೆಲುವನಾರಾಯಣ ಸ್ವಾಮಿ ದೇವಾಲಯದ ಸಂಪ್ರದಾಯದಂತೆ ಬುಧವಾರ ರಾತ್ರಿ ರೋಹಿಣಿ ನಕ್ಷತ್ರದಲ್ಲಿ ವೈರಮುಡಿ ಬ್ರಹ್ಮೋತ್ಸವಕ್ಕೆ ಅಂಕುರಾರ್ಪಣೆಯೊಂದಿಗೆ ಅಧಿಕೃತ ಚಾಲನೆ ನೀಡಲಾಯಿತು.</p><p>ಇಲ್ಲಿನ ಅಕ್ಕತಂಗಿ ಕೊಳ, ಧನುಷ್ ಕೋಟೆ, ರಾಯಗೋಪುರ, ಪಂಚಕಲ್ಯಾಣಿ, ಯೋಗಾನರಸಿಂಹಸ್ವಾಮಿ ಬೆಟ್ಟ ಸೇರಿದಂತೆ ಅನೇಕ ತಾಣಗಳಿಗೆ ₹50 ಲಕ್ಷ ವೆಚ್ಚದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.</p><p>ಏ.7ರಂದು ಮಂಡ್ಯ ಜಿಲ್ಲಾ ಖಜಾನೆಯಿಂದ ತಂದ ವಜ್ರಖಚಿತ ವೈರಮುಡಿ ಕಿರೀಟ ಹಾಗೂ ಗಂಡಭೇರುಂಡ ಪದಕ ಸೇರಿದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಆಭರಣಗಳನ್ನು ಶ್ರೀದೇವಿ, ಭೂದೇವಿಯರೊಂದಿಗೆ ಗರುಢಾರೂಢನಾದ ಚಲುವನಾರಾಯಣಸ್ವಾಮಿಗೆ ಅಲಂಕಾರ ಮಾಡಲಾಗುತ್ತದೆ.</p><p>‘ಲೋಕ ಕಲ್ಯಾಣಾರ್ಥವಾಗಿ ಅರ್ಧ ಚಂದ್ರಕೃತಿಯ ವೈರಮುಡಿ ಬ್ರಹ್ಮೋತ್ಸವ ಸಡಗರದಿಂದ ಜರುಗಲಿದೆ. ಈ ಬಾರಿಯೂ ಮುಖ್ಯಮಂತ್ರಿ ₹10 ಕೋಟಿ ವಿಶೇಷ ಅನುದಾನ ನೀಡಿದ್ದಾರೆ’ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>