ಇಲ್ಲಿ ಮಾತನಾಡಿದ ಅವರು, ಕೊರೊನಾ ಹಬ್ಬುವುದನ್ನು ತಡೆಗಟ್ಟಲು ಸರ್ಕಾರ ಮತ್ತು ಜಿಲ್ಲಾಡಳಿತದ ತೀರ್ಮಾನದಂತೆ ವೈರಮುಡಿ ಜಾತ್ರಾ ಮಹೋತ್ಸವವನ್ನು ಮುಂದೂಡಲಾಗಿದೆ. ಇದರಿಂದ ಲಕ್ಷಾಂತರ ಭಕ್ತರು ನಿರಾಶರಾಗಿದ್ದರು. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದ ನಂತರ ಧಾರ್ಮಿಕ ನಿಯಮಾವಳಿಗಳ ಅನುಸಾರ ದಿನ ನಿಗದಿ ಮಾಡಿ, ಎಲ್ಲಾ ಪೂಜಾ ವಿಧಿವಿಧಾನಗಳನ್ನು ಅನುಸರಿಸಿ ಜಾತ್ರೆ ಹಾಗೂ ವೈರಮುಡಿ ಕಿರೀಟಧಾರಾ ಮಹೋತ್ಸವವನ್ನು ವೈಭವದಿಂದ ಆಚರಿಸಲಾಗುವುದು’ ಎಂದರು.