ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ಒಡೆಯರ್ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಜಾಥಾ
187 ಕೋಟಿ ದುರ್ಬಳಕೆ: ಆರೋಪ
‘ಭ್ರಷ್ಟ ಮಾರ್ಗದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿ ದುರ್ಬಳಕೆ ಆಗಿದೆ. ₹89 ಕೋಟಿಯನ್ನು 700ಕ್ಕೂ ಹೆಚ್ಚು ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಬಳ್ಳಾರಿ ದಾವಣಗೆರೆ ತೆಲಂಗಾಣ ರಾಜ್ಯದ ಹೈದರಾಬಾದ್ ಬ್ಯಾಂಕ್ಗಳಲ್ಲಿ ಖಾತೆ ತೆರೆದು ಕೂಲಿ ಕಾರ್ಮಿಕರು ದನ ಎಮ್ಮೆ ಕಾಯುವ ಅಮಾಯಕ ವ್ಯಕ್ತಿಗಳಿಗೆ ₹2ಲಕ್ಷದಿಂದ ರಿಂದ 5 ಲಕ್ಷದವರೆಗೆ ಹಣ ಹಾಕಿ ವಿತ್ ಡ್ರಾ ಮಾಡಿಕೊಳ್ಳುವ ಮೂಲಕ ಲೋಕಸಭೆ ಚುನಾವಣೆ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ’ ಎಂದು ಬಿಜೆಪಿ ಮುಖಂಡರು ಕಿಡಿಕಾರಿದರು. ಹಗರಣದಲ್ಲಿ ಹಣ ಮರುವರ್ಗಾವಣೆ ಮಾಡಿಸಿದ ವ್ಯಕ್ತಿಗಳು ಯಾರು ಅವರನ್ನು ಇದುವರೆಗೆ ಏಕೆ ಬಂಧಿಸಿಲ್ಲ? ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಸಹಿ ತಮ್ಮದಲ್ಲ ಎಂದು ಹೇಳಿದ್ದಾರೆ. ಆದರೆ ಅವರದೇ ಸಹಿ ಎಂದು ಬ್ಯಾಂಕ್ನವರು ತಿಳಿಸಿದ್ದಾರೆ. ಇದರಲ್ಲಿ ಯಾವುದು ಸತ್ಯ ಎಂಬುದು ಪತ್ತೆ ಹಚ್ಚಬೇಕು. ನಿಗಮದ ಹೆಸರಿನಲ್ಲಿ ಬೇರೆ ಬ್ಯಾಂಕಿನಲ್ಲಿ ಖಾತೆ ತೆರೆದಾಗ ಆರ್ಥಿಕ ಇಲಾಖೆ ಗಮನಕ್ಕೆ ಏಕೆ ಬಂದಿಲ್ಲ ಹಣಕಾಸು ಇಲಾಖೆ ಜವಾಬ್ದಾರಿ ನಿರ್ವಹಿಸುವ ಸಿದ್ದರಾಮಯ್ಯ ಹೊಣೆಗಾರರಲ್ಲವೇ ಎಂದು ಪ್ರಶ್ನಿಸಿದರು.