<p><strong>ಭಾರತೀನಗರ</strong>: ‘ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿದ್ದಲ್ಲಿ ಸಂಸ್ಕಾರ ಬರುತ್ತದೆ’ ಎಂದು ಬೆಂಗಳೂರು ವಿ.ವಿ ನಿಕಟ ಪೂರ್ವ ಕುಲಸಚಿವ ಪ್ರೊ.ಕೆ.ಎನ್.ನಿಂಗೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಇಲ್ಲಿನ ಅಣ್ಣೂರು ಗೇಟ್ನ ಜ್ಞಾನಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ‘ಗಂಧದಗುಡಿ’ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಕ್ಷಣಕ್ಕೂ ಸಂಸ್ಕಾರಕ್ಕೂ ಬಹಳ ವ್ಯತ್ಯಾಸವಿದೆ. ಮಕ್ಕಳಿಗೆ ಶಿಕ್ಷಣವೂ ಅಗತ್ಯ, ಶಿಕ್ಷಣಕ್ಕಿಂತ ಹೆಚ್ಚು ಸಂಸ್ಕಾರವು ಅಗತ್ಯ’ ಎಂದು ಹೇಳಿದರು.</p>.<p>ಜ್ಞಾನಗಂಗೋತ್ರಿ ಪಬ್ಲಿಕ್ ಶಾಲೆಯ ಗೌರವಾಧ್ಯಕ್ಷ ಈರೇಗೌಡ ಮಾತನಾಡಿದರು. ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p>ಶಾಲೆ ಅಧ್ಯಕ್ಷ ಎಂ.ಇ.ಪ್ರತಾಪ್, ಪ್ರಮುಖ ಸಲಹೆಗಾರ ಚಂದ್ರಪ್ಪ, ಕಾರ್ಯದರ್ಶಿ ಎಂ.ಇ.ಪವಿತ್ರಾ, ಖಜಾಂಚಿ ವೇದಶ್ರೀ, ಮುಖ್ಯ ಶಿಕ್ಷಕ ಗಿರೀಶ್, ಸಿಆರ್ಪಿ ನಂದೀಶ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀನಗರ</strong>: ‘ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿದ್ದಲ್ಲಿ ಸಂಸ್ಕಾರ ಬರುತ್ತದೆ’ ಎಂದು ಬೆಂಗಳೂರು ವಿ.ವಿ ನಿಕಟ ಪೂರ್ವ ಕುಲಸಚಿವ ಪ್ರೊ.ಕೆ.ಎನ್.ನಿಂಗೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಇಲ್ಲಿನ ಅಣ್ಣೂರು ಗೇಟ್ನ ಜ್ಞಾನಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ‘ಗಂಧದಗುಡಿ’ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಕ್ಷಣಕ್ಕೂ ಸಂಸ್ಕಾರಕ್ಕೂ ಬಹಳ ವ್ಯತ್ಯಾಸವಿದೆ. ಮಕ್ಕಳಿಗೆ ಶಿಕ್ಷಣವೂ ಅಗತ್ಯ, ಶಿಕ್ಷಣಕ್ಕಿಂತ ಹೆಚ್ಚು ಸಂಸ್ಕಾರವು ಅಗತ್ಯ’ ಎಂದು ಹೇಳಿದರು.</p>.<p>ಜ್ಞಾನಗಂಗೋತ್ರಿ ಪಬ್ಲಿಕ್ ಶಾಲೆಯ ಗೌರವಾಧ್ಯಕ್ಷ ಈರೇಗೌಡ ಮಾತನಾಡಿದರು. ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<p>ಶಾಲೆ ಅಧ್ಯಕ್ಷ ಎಂ.ಇ.ಪ್ರತಾಪ್, ಪ್ರಮುಖ ಸಲಹೆಗಾರ ಚಂದ್ರಪ್ಪ, ಕಾರ್ಯದರ್ಶಿ ಎಂ.ಇ.ಪವಿತ್ರಾ, ಖಜಾಂಚಿ ವೇದಶ್ರೀ, ಮುಖ್ಯ ಶಿಕ್ಷಕ ಗಿರೀಶ್, ಸಿಆರ್ಪಿ ನಂದೀಶ್ ಉಪಸ್ಥಿತರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>