ದೇವಾಲಯದಲ್ಲಿ ಮುಂಜಾನೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭವಾದವು. ಪ್ರಧಾನ ಅರ್ಚಕ ಕೆ.ಎಸ್. ಲಕ್ಷ್ಮೀಶ್ ಶರ್ಮಾ ಅವರ ನೇತೃತ್ವದಲ್ಲಿ ದೇವಿಗೆ ಪಂಚಾಮೃತ ಅಭಿಷೇಕ , ಸಹಸ್ರನಾಮ, ಶ್ರೀ ಚಕ್ರ ನವಾವರಣ, ಮಹಾ ಮಂಗಳಾರತಿ ಇತರ ವಿಧಿ, ವಿಧಾನಗಳು ಜರುಗಿದವು. ಸ್ಥಳೀಯರು ಮಾತ್ರವಲ್ಲದೆ ಆಸುಪಾಸಿನ ಗ್ರಾಮಗಳ ನೂರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ಪ್ರಸಾದ ವಿತರಿಸಲಾಯಿತು.