ಸಂಜೆ 6 ಗಂಟೆಗೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ದೇಗುಲದಲ್ಲಿ ನೆರೆದಿದ್ದ ಭಕ್ತರು, ದೀಪ ಹಚ್ಚಲು ಸಿದ್ಧತೆ ನಡೆಸಿದರು. ಇದೇ ವೇಳೆ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ರಾತ್ರಿ 9 ಗಂಟೆಗೆ ಸಂಪ್ರದಾಯದಂತೆ ಕೀಲಾರ ಗ್ರಾಮಸ್ಥರನ್ನು ಸ್ವಾಗತಿಸಿದ ಆಲಕೆರೆ ಗ್ರಾಮಸ್ಥರು, ದೇವರ ಮನೆಯಲ್ಲಿ ಇರಿಸಲಾಗಿದ್ದ ವೀರಭದ್ರೇಶ್ವರ ದೇವರ ಪರಿಕರಗಳಾದ ನಂದಿಕಂಬ, ವೀರಭದ್ರ ದೇವರಿಗೆ ಸಂಬಂಧಿಸಿದ ವಸ್ತುಗಳನ್ನು ಸಿದ್ಧಪಡಿಸಲಾಯಿತು. ಉತ್ಸವ ಮೂರ್ತಿಯನ್ನು ದೇಗುಲದ ಮುಂಭಾಗಕ್ಕೆ ತಂದ ಕೂಡಲೇ ಭಕ್ತರು ದೀಪ ಹಚ್ಚಿ ಸಂಭ್ರಮಿಸಿದರು.