<p><strong>ಕೆರಗೋಡು:</strong> ಸಮೀಪದ ಆಲಕೆರೆ ಗ್ರಾಮದ ಇತಿಹಾಸ ಪ್ರಸಿದ್ಧ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ವೀರಭದ್ರಸ್ವಾಮಿ ರಥೋತ್ಸವ ಮತ್ತು ಶಿವದೀಪೋತ್ಸವ ಅಪಾರ ಭಕ್ತರ ಸಮೂಹದ ನಡುವೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.</p>.<p>ಮುಂಜಾನೆಯಿಂದಲೇ ಗ್ರಾಮಸ್ಥರು ಉದ್ಭವಲಿಂಗ ಮೂರ್ತಿ ಮತ್ತು ವೀರಭದ್ರೇಶ್ವರ ದೇವರ ಮೂರ್ತಿಗೆ ಬೆಣ್ಣೆ ಮತ್ತು ಹೂವಿನ ಅಲಂಕಾರ ಮಾಡಿದ್ದರು. ಬಳಿಕ ಮನೆಯಿಂದ ನೈವೇದ್ಯ ತಂದು ಎಡೆಪೂಜೆ ಸಲ್ಲಿಸಿದರು. ನಂತರ ದೇಗುಲದಲ್ಲಿ ಭಕ್ತರು ಪಂಚಾಮೃತ ತಯಾರಿಸಿ ದೇವರಿಗೆ ಅರ್ಪಿಸಿ, ಗ್ರಾಮದ ಪ್ರತಿ ಮನೆಗೂ ಪ್ರಸಾದ ವಿತರಣೆ ಮಾಡಿದರು.</p>.<p>ಸಂಜೆ 6 ಗಂಟೆಗೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ದೇಗುಲದಲ್ಲಿ ನೆರೆದಿದ್ದ ಭಕ್ತರು, ದೀಪ ಹಚ್ಚಲು ಸಿದ್ಧತೆ ನಡೆಸಿದರು. ಇದೇ ವೇಳೆ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ರಾತ್ರಿ 9 ಗಂಟೆಗೆ ಸಂಪ್ರದಾಯದಂತೆ ಕೀಲಾರ ಗ್ರಾಮಸ್ಥರನ್ನು ಸ್ವಾಗತಿಸಿದ ಆಲಕೆರೆ ಗ್ರಾಮಸ್ಥರು, ದೇವರ ಮನೆಯಲ್ಲಿ ಇರಿಸಲಾಗಿದ್ದ ವೀರಭದ್ರೇಶ್ವರ ದೇವರ ಪರಿಕರಗಳಾದ ನಂದಿಕಂಬ, ವೀರಭದ್ರ ದೇವರಿಗೆ ಸಂಬಂಧಿಸಿದ ವಸ್ತುಗಳನ್ನು ಸಿದ್ಧಪಡಿಸಲಾಯಿತು. ಉತ್ಸವ ಮೂರ್ತಿಯನ್ನು ದೇಗುಲದ ಮುಂಭಾಗಕ್ಕೆ ತಂದ ಕೂಡಲೇ ಭಕ್ತರು ದೀಪ ಹಚ್ಚಿ ಸಂಭ್ರಮಿಸಿದರು.</p>.<p>ರಾತ್ರಿ 11 ಗಂಟೆಗೆ ಕಿವಿಗಡಚಿಕ್ಕುವ ತಮಟೆ, ನಗಾರಿ ಸದ್ದು, ಸಿಡಿಮದ್ದುಗಳ ಭರಾಟೆಯಲ್ಲಿ ವೀರಭದ್ರ ದೇವರ ರಥ ಎಳೆಯಲಾಯಿತು. ದೇವರ ಮೂರ್ತಿಯನ್ನು ಹೊತ್ತು ಬುಧವಾರ ಬೆಳಗಿನವರೆಗೂ ಮೆರವಣಿಗೆ ನಡೆಸಿದರು. ಬಳಿಕ ದೇವಾಲಯದ ಆವರಣದಲ್ಲಿ ದೇವರಿಗೆ ಮಹಾಮಂಗಳಾರತಿ ನಡೆಸಿ, ತೀರ್ಥ ಪ್ರಸಾದ ನೀಡಿದ ಬಳಿಕ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.</p>.<p>ವೀರಗಾಸೆ, ಗಾರುಡಿ ಗೊಂಬೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು, ಗಾನ ಲಹರಿ ಕಾರ್ಯಕ್ರಮಗಳು ಜಾತ್ರಾ ಮಹೋತ್ಸವಕ್ಕೆ ವಿಶೇಷ ಮೆರುಗು ನೀಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರಗೋಡು:</strong> ಸಮೀಪದ ಆಲಕೆರೆ ಗ್ರಾಮದ ಇತಿಹಾಸ ಪ್ರಸಿದ್ಧ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ವೀರಭದ್ರಸ್ವಾಮಿ ರಥೋತ್ಸವ ಮತ್ತು ಶಿವದೀಪೋತ್ಸವ ಅಪಾರ ಭಕ್ತರ ಸಮೂಹದ ನಡುವೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.</p>.<p>ಮುಂಜಾನೆಯಿಂದಲೇ ಗ್ರಾಮಸ್ಥರು ಉದ್ಭವಲಿಂಗ ಮೂರ್ತಿ ಮತ್ತು ವೀರಭದ್ರೇಶ್ವರ ದೇವರ ಮೂರ್ತಿಗೆ ಬೆಣ್ಣೆ ಮತ್ತು ಹೂವಿನ ಅಲಂಕಾರ ಮಾಡಿದ್ದರು. ಬಳಿಕ ಮನೆಯಿಂದ ನೈವೇದ್ಯ ತಂದು ಎಡೆಪೂಜೆ ಸಲ್ಲಿಸಿದರು. ನಂತರ ದೇಗುಲದಲ್ಲಿ ಭಕ್ತರು ಪಂಚಾಮೃತ ತಯಾರಿಸಿ ದೇವರಿಗೆ ಅರ್ಪಿಸಿ, ಗ್ರಾಮದ ಪ್ರತಿ ಮನೆಗೂ ಪ್ರಸಾದ ವಿತರಣೆ ಮಾಡಿದರು.</p>.<p>ಸಂಜೆ 6 ಗಂಟೆಗೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ದೇಗುಲದಲ್ಲಿ ನೆರೆದಿದ್ದ ಭಕ್ತರು, ದೀಪ ಹಚ್ಚಲು ಸಿದ್ಧತೆ ನಡೆಸಿದರು. ಇದೇ ವೇಳೆ ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ರಾತ್ರಿ 9 ಗಂಟೆಗೆ ಸಂಪ್ರದಾಯದಂತೆ ಕೀಲಾರ ಗ್ರಾಮಸ್ಥರನ್ನು ಸ್ವಾಗತಿಸಿದ ಆಲಕೆರೆ ಗ್ರಾಮಸ್ಥರು, ದೇವರ ಮನೆಯಲ್ಲಿ ಇರಿಸಲಾಗಿದ್ದ ವೀರಭದ್ರೇಶ್ವರ ದೇವರ ಪರಿಕರಗಳಾದ ನಂದಿಕಂಬ, ವೀರಭದ್ರ ದೇವರಿಗೆ ಸಂಬಂಧಿಸಿದ ವಸ್ತುಗಳನ್ನು ಸಿದ್ಧಪಡಿಸಲಾಯಿತು. ಉತ್ಸವ ಮೂರ್ತಿಯನ್ನು ದೇಗುಲದ ಮುಂಭಾಗಕ್ಕೆ ತಂದ ಕೂಡಲೇ ಭಕ್ತರು ದೀಪ ಹಚ್ಚಿ ಸಂಭ್ರಮಿಸಿದರು.</p>.<p>ರಾತ್ರಿ 11 ಗಂಟೆಗೆ ಕಿವಿಗಡಚಿಕ್ಕುವ ತಮಟೆ, ನಗಾರಿ ಸದ್ದು, ಸಿಡಿಮದ್ದುಗಳ ಭರಾಟೆಯಲ್ಲಿ ವೀರಭದ್ರ ದೇವರ ರಥ ಎಳೆಯಲಾಯಿತು. ದೇವರ ಮೂರ್ತಿಯನ್ನು ಹೊತ್ತು ಬುಧವಾರ ಬೆಳಗಿನವರೆಗೂ ಮೆರವಣಿಗೆ ನಡೆಸಿದರು. ಬಳಿಕ ದೇವಾಲಯದ ಆವರಣದಲ್ಲಿ ದೇವರಿಗೆ ಮಹಾಮಂಗಳಾರತಿ ನಡೆಸಿ, ತೀರ್ಥ ಪ್ರಸಾದ ನೀಡಿದ ಬಳಿಕ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು.</p>.<p>ವೀರಗಾಸೆ, ಗಾರುಡಿ ಗೊಂಬೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು, ಗಾನ ಲಹರಿ ಕಾರ್ಯಕ್ರಮಗಳು ಜಾತ್ರಾ ಮಹೋತ್ಸವಕ್ಕೆ ವಿಶೇಷ ಮೆರುಗು ನೀಡಿದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>