<p><strong>ಭಾರತೀನಗರ:</strong> ಇಲ್ಲಿಯ ಹಳೇ ಊರಿನ ವೆಂಕಟೇಶ್ವರ ಸ್ವಾಮಿ ದೇವಾಲಯದ 3ನೇ ವಾರ್ಷಿಕೋತ್ಸವ, ಹರಿಸೇವೆ (ಪರ) ಅದ್ಧೂರಿಯಾಗಿ ಜರುಗಿತು.</p>.<p>ಪ್ರಶಾಂತ್ ಶಾಲೆಯ ಹತ್ತಿರದ ಸೂಳೆಕರೆ ನಾಲೆಯಲ್ಲಿ ಹೂ, ಹೊಂಬಾಳೆ ಪೂಜಾ ಕಾರ್ಯಕ್ರಮದ ಮೂಲಕ ಚಾಲನೆಗೊಂಡಿತು. ಲಕ್ಷ್ಮೀವೆಂಕಟೇಶ್ವರಸ್ವಾಮಿ ಉತ್ಸವ ಮೂರ್ತಿಯನ್ನು ರಥದಲ್ಲಿ ಇರಿಸಿ ಮಣೆಸೇವೆ (ಪರಾಕ್) ಮೂಲಕ ಮೆರವಣಿಗೆ ಹೊರಟಿತು.</p>.<p>ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ಜಾನಪದ ಕಲಾ ಪ್ರಕಾರಗಳು, ಚರ್ಮವಾದ್ಯ ಮೇಳಗಳೊಂದಿಗೆ ಮರವಣಿಗೆ ದೇವಾಲಯದವರೆಗೆ ಸಾಗಿತು. ಮಾರ್ಗ ಮಧ್ಯೆ ಭಕ್ತಾದಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. </p>.<p>ಮೇಲುಕೋಟೆಯ ಡಾ.ಶೆಲ್ವ ಪಿಳ್ಳೈ ಅಯ್ಯಂಗಾರ್ ನೇತೃತ್ವದಲ್ಲಿ ಪುರೋಹಿತರಾದ ಯು.ವಿ.ಗಿರೀಶ್, ವೆಂಕಟೇಶ್ ಪೂಜಾ ಕೈಂಕರ್ಯಗಳನ್ನು ನಡೆಸಿದರು. ಭಕ್ತರು ದೇವರ ದರ್ಶನ ಪಡೆದರು.</p>.<p>ಶಾಸಕರಾದ ಕೆ.ಎಂ.ಉದಯ್, ಮಧು ಜಿ.ಮಾದೇಗೌಡ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಬಿಇಟಿ ಟ್ರಸ್ಟ್ ಕಾರ್ಯನಿರ್ವಹಣಾಧಿಕಾರಿ ಆಶಯ್ ಮಧು ಸೇರಿದಂತೆ ಹಲವು ಗಣ್ಯರು ದೇವರ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀನಗರ:</strong> ಇಲ್ಲಿಯ ಹಳೇ ಊರಿನ ವೆಂಕಟೇಶ್ವರ ಸ್ವಾಮಿ ದೇವಾಲಯದ 3ನೇ ವಾರ್ಷಿಕೋತ್ಸವ, ಹರಿಸೇವೆ (ಪರ) ಅದ್ಧೂರಿಯಾಗಿ ಜರುಗಿತು.</p>.<p>ಪ್ರಶಾಂತ್ ಶಾಲೆಯ ಹತ್ತಿರದ ಸೂಳೆಕರೆ ನಾಲೆಯಲ್ಲಿ ಹೂ, ಹೊಂಬಾಳೆ ಪೂಜಾ ಕಾರ್ಯಕ್ರಮದ ಮೂಲಕ ಚಾಲನೆಗೊಂಡಿತು. ಲಕ್ಷ್ಮೀವೆಂಕಟೇಶ್ವರಸ್ವಾಮಿ ಉತ್ಸವ ಮೂರ್ತಿಯನ್ನು ರಥದಲ್ಲಿ ಇರಿಸಿ ಮಣೆಸೇವೆ (ಪರಾಕ್) ಮೂಲಕ ಮೆರವಣಿಗೆ ಹೊರಟಿತು.</p>.<p>ಮದ್ದೂರು-ಮಳವಳ್ಳಿ ಹೆದ್ದಾರಿಯಲ್ಲಿ ಜಾನಪದ ಕಲಾ ಪ್ರಕಾರಗಳು, ಚರ್ಮವಾದ್ಯ ಮೇಳಗಳೊಂದಿಗೆ ಮರವಣಿಗೆ ದೇವಾಲಯದವರೆಗೆ ಸಾಗಿತು. ಮಾರ್ಗ ಮಧ್ಯೆ ಭಕ್ತಾದಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. </p>.<p>ಮೇಲುಕೋಟೆಯ ಡಾ.ಶೆಲ್ವ ಪಿಳ್ಳೈ ಅಯ್ಯಂಗಾರ್ ನೇತೃತ್ವದಲ್ಲಿ ಪುರೋಹಿತರಾದ ಯು.ವಿ.ಗಿರೀಶ್, ವೆಂಕಟೇಶ್ ಪೂಜಾ ಕೈಂಕರ್ಯಗಳನ್ನು ನಡೆಸಿದರು. ಭಕ್ತರು ದೇವರ ದರ್ಶನ ಪಡೆದರು.</p>.<p>ಶಾಸಕರಾದ ಕೆ.ಎಂ.ಉದಯ್, ಮಧು ಜಿ.ಮಾದೇಗೌಡ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ, ಬಿಇಟಿ ಟ್ರಸ್ಟ್ ಕಾರ್ಯನಿರ್ವಹಣಾಧಿಕಾರಿ ಆಶಯ್ ಮಧು ಸೇರಿದಂತೆ ಹಲವು ಗಣ್ಯರು ದೇವರ ದರ್ಶನ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>