ಮದ್ದೂರು ತಾಲ್ಲೂಕು ಮಾರಸಿಂಗನಹಳ್ಳಿ ಮೂಲದ ದಿನೇಶ್ ಕೆಪಿಸಿಸಿ ಕಚೇರಿಯಲ್ಲಿ ಹಲವು ವರ್ಷ ಮಾಧ್ಯಮ ಕೇಂದ್ರದ ಮುಖ್ಯಸ್ಥರಾಗಿದ್ದರು. ಎಸ್.ಎಂ.ಕೃಷ್ಣ ಅವರಿಗೆ ಆಪ್ತ ಸಹಾಯಕರಾಗಿಯೂ ಕೆಲಸ ಮಾಡಿದ್ದರು. ಡಾ.ಜಿ.ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಮಾಧ್ಯಮ ಸಂವಹನಾಧಿಕಾರಿಯಾಗಿದ್ದರು. ಪರಮೇಶ್ವರ ಅವರು ಸಮ್ಮಿಶ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ವಿಶೇಷ ಕರ್ತವ್ಯಾಧಿಕಾರಿಯಾಗಿಯೂ ಕೆಲಸ ಮಾಡಿದ್ದರು.