<p><strong>ಮಂಡ್ಯ: </strong>ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ (ಪಿಎಸ್ಎಸ್ಕೆ)ಯನ್ನು 40 ವರ್ಷಗಳವರೆಗೆ ಗುತ್ತಿಗೆ ಪಡೆದಿರುವ ನಿರಾಣಿ ಶುಗರ್ಸ್ ಆಡಳಿತ ಮಂಡಳಿ ಕರಾರು ಉಲ್ಲಂಘಿಸಿದ್ದು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಡಾ.ಎಚ್.ಎನ್.ರವೀಂದ್ರ ಶನಿವಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ್ದಾರೆ.</p>.<p>ನಿರಾಣಿ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ವಿಜಯ ಎಂ ನಿರಾಣಿ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ ನಿರಾಣಿ ಅವರ ಪುತ್ರರಾಗಿದ್ದು ತಂದೆಯ ಅಧಿಕಾರ ದುರ್ಬಳಕೆ ಮಾಡಿಕೊಂಡು ಪಿಎಸ್ಎಸ್ಗೆ ಗುತ್ತಿಗೆ ಕರಾರಿನ 11 ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.</p>.<p>ಗುತ್ತಿಗೆ ಕರಾರು ವೇಳೆ ಆಡಳಿತ ಮಂಡಳಿಯು ಕಾರ್ಖಾನೆಗೆ ಮುಂಗಡವಾಗಿ ₹ 20 ಕೋಟಿ ಹಣ ಪವಾತಿಸಬೇಕಾಗಿತ್ತು, ಭದ್ರತಾ ಠೇವಣಿಯಾಗಿ ₹ 5 ಕೋಟಿ ಇಡಬೇಕಾಗಿತ್ತು. ಈ ಹಣದಿಂದ 2017ರಿಂದ ನೌಕರರ ಬಾಕಿ ವೇತನ, ಭವಿಷ್ಯ ನಿಧಿ ಪಾವತಿ ಹಾಗೂ ಕಾರ್ಖಾನೆಯ ಸಾಲ ತೀರಿಸಬೇಕಾಗಿತ್ತು. ಗುತ್ತಿಗೆ ಪಡೆದು ವರ್ಷ ಕಳೆದರೂ ಮುಂಗಡ ಹಣ, ಠೇವಣಿ ಹಣ ಪಾವತಿಸಿಲ್ಲ ಎಂದು ಆರೋಪಿಸಿದ್ದಾರೆ.</p>.<p>ಗುತ್ತಿಗೆ ಒಪ್ಪಂದ ಪೂರ್ಣಗೊಂಡ ನಂತರ 90 ದಿನಗಳ ಒಳಗಾಗಿ ಒಪ್ಪಂದವನ್ನು ಸಕ್ಷಮ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಬೇಕಾಗಿತ್ತು. ಆದರೆ ಗುತ್ತಿಗೆ ಕರಾರು ಈಗಲೂ ನೋಂದಣಿಯಾಗಿಲ್ಲ. ಕಾರ್ಖಾನೆಯನ್ನು ಉನ್ನತದರ್ಜೆಗೇರಿಸಲು ₹ 24 ಕೋಟಿ ಹಣ ಮೀಸಲಿಡುವ ಷರತ್ತನ್ನೂ ನಿರಾಣಿ ಷುಗರ್ಸ್ ಉಲ್ಲಂಘಿಸಿದೆ. ಮೊದಲು ಇದ್ದ ಕಾರ್ಮಿಕರನ್ನು ಮುಂದುವರಿಸಬೇಕಾಗಿತ್ತು, ಆದರೆ 54 ಕಾರ್ಮಿಕರನ್ನು ವಜಾಗೊಳಿಸಿ ಒಪ್ಪಂದ ಮುರಿಯಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ (ಪಿಎಸ್ಎಸ್ಕೆ)ಯನ್ನು 40 ವರ್ಷಗಳವರೆಗೆ ಗುತ್ತಿಗೆ ಪಡೆದಿರುವ ನಿರಾಣಿ ಶುಗರ್ಸ್ ಆಡಳಿತ ಮಂಡಳಿ ಕರಾರು ಉಲ್ಲಂಘಿಸಿದ್ದು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡ ಡಾ.ಎಚ್.ಎನ್.ರವೀಂದ್ರ ಶನಿವಾರ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ್ದಾರೆ.</p>.<p>ನಿರಾಣಿ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ವಿಜಯ ಎಂ ನಿರಾಣಿ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ ನಿರಾಣಿ ಅವರ ಪುತ್ರರಾಗಿದ್ದು ತಂದೆಯ ಅಧಿಕಾರ ದುರ್ಬಳಕೆ ಮಾಡಿಕೊಂಡು ಪಿಎಸ್ಎಸ್ಗೆ ಗುತ್ತಿಗೆ ಕರಾರಿನ 11 ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.</p>.<p>ಗುತ್ತಿಗೆ ಕರಾರು ವೇಳೆ ಆಡಳಿತ ಮಂಡಳಿಯು ಕಾರ್ಖಾನೆಗೆ ಮುಂಗಡವಾಗಿ ₹ 20 ಕೋಟಿ ಹಣ ಪವಾತಿಸಬೇಕಾಗಿತ್ತು, ಭದ್ರತಾ ಠೇವಣಿಯಾಗಿ ₹ 5 ಕೋಟಿ ಇಡಬೇಕಾಗಿತ್ತು. ಈ ಹಣದಿಂದ 2017ರಿಂದ ನೌಕರರ ಬಾಕಿ ವೇತನ, ಭವಿಷ್ಯ ನಿಧಿ ಪಾವತಿ ಹಾಗೂ ಕಾರ್ಖಾನೆಯ ಸಾಲ ತೀರಿಸಬೇಕಾಗಿತ್ತು. ಗುತ್ತಿಗೆ ಪಡೆದು ವರ್ಷ ಕಳೆದರೂ ಮುಂಗಡ ಹಣ, ಠೇವಣಿ ಹಣ ಪಾವತಿಸಿಲ್ಲ ಎಂದು ಆರೋಪಿಸಿದ್ದಾರೆ.</p>.<p>ಗುತ್ತಿಗೆ ಒಪ್ಪಂದ ಪೂರ್ಣಗೊಂಡ ನಂತರ 90 ದಿನಗಳ ಒಳಗಾಗಿ ಒಪ್ಪಂದವನ್ನು ಸಕ್ಷಮ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸಬೇಕಾಗಿತ್ತು. ಆದರೆ ಗುತ್ತಿಗೆ ಕರಾರು ಈಗಲೂ ನೋಂದಣಿಯಾಗಿಲ್ಲ. ಕಾರ್ಖಾನೆಯನ್ನು ಉನ್ನತದರ್ಜೆಗೇರಿಸಲು ₹ 24 ಕೋಟಿ ಹಣ ಮೀಸಲಿಡುವ ಷರತ್ತನ್ನೂ ನಿರಾಣಿ ಷುಗರ್ಸ್ ಉಲ್ಲಂಘಿಸಿದೆ. ಮೊದಲು ಇದ್ದ ಕಾರ್ಮಿಕರನ್ನು ಮುಂದುವರಿಸಬೇಕಾಗಿತ್ತು, ಆದರೆ 54 ಕಾರ್ಮಿಕರನ್ನು ವಜಾಗೊಳಿಸಿ ಒಪ್ಪಂದ ಮುರಿಯಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>