ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾ ಲಕೃಷ್ಣ ‘ಸ್ವಾಮಿ ವಿವೇಕಾನಂದರು ಜೀವಿಸಿದ ಅವಧಿ ಬಹಳ ಕಡಿಮೆಯಾದರೂ ಅವರ ತತ್ವಗಳು ಈ ಭೂಮಂಡಲ ಇರುವವರೆಗೂ ಚಿರಸ್ಥಾಯಿಯಾಗಿ ಉಳಿಯಲಿವೆ. ವಿವೇಕಾನಂದರ ತತ್ವಗಳು ಯುವಜನರ ಮನಸ್ಸಿಗೆ ನಾಟಬೇಕು. ಯುವಕರು ಕಲೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದುಕೊಡಬೇಕು’ ಎಂದು ಸಲಹೆ ನೀಡಿದರು.