<p><strong>ಪಾಂಡವಪುರ:</strong> ‘ನಮ್ಮ ಜಮೀನಿಗೆ ತೆರಳಲು ರಸ್ತೆ ನಿರ್ಮಾಣ ಮಾಡಿಕೊಡಬೇಕು. ಇಲ್ಲದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುತ್ತೇವೆ’ ಎಂದು ಬೀರಶೆಟ್ಟಹಳ್ಳಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ಮಾಡಿದರು.</p>.<p>ತಾಲ್ಲೂಕಿನ ಹಿರೇಮರಳಿ ರಸ್ತೆಯಲ್ಲಿ ಜಮಾವಣೆಗೊಂಡ ರೈತರು, ಕಳೆದ 3–4 ವರ್ಷಗಳಿಂದ ರಸ್ತೆ ನಿರ್ಮಾಣಕ್ಕೆ ಮನವಿ ಮಾಡಿದರೂ ತಾಲ್ಲೂಕು ಆಡಳಿತ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಪಟ್ಟಣಕ್ಕೆ ಹೊಂದಿರುವ ಹಿರೋಡೆ ಕೆರೆಗೆ ಸೇರಿದ ಜಮೀನು ಅನ್ನು ತಾಲ್ಲೂಕು ಆಡಳಿತವು ಅರಣ್ಯ ಇಲಾಖೆ ವಶಕ್ಕೆ ಒಪ್ಪಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಜಮೀನನ್ನು ಸರ್ವೇ ಮಾಡಿ ಗಡಿ ಗುರುತಿಸಿ ರೈತರು ಜಮೀನಿಗೆ ತೆರಳಲು ರಸ್ತೆ ಬಿಟ್ಟುಕೊಡಬೇಕಿದೆ. ಆದರೆ ಇದುವರೆಗೂ ಸರ್ವೇ ನಡೆಸಿ ಗಡಿ ಗುರುತಿಸುವ ಕೆಲಸ ಆಗಿಲ್ಲ. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿಕೊಂಡರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಫಂದಿಸುತ್ತಿಲ್ಲ’ ಎಂದು ದೂರಿದರು.</p>.<p>‘ಜಮೀನಿಗೆ ತೆರಳಲು 50 ಅಡಿ ಜಾಗ ನಿಗದಿಪಡಿಸಲಾಗಿದೆ. ಈ ಸ್ಥಳದಲ್ಲಿ ರೈತರೇ ರಸ್ತೆ ನಿರ್ಮಿಸಿಕೊಳ್ಳಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಲಕ್ಷಾಂತರ ಹಣ ಹಾಕಿ ರೈತರು ರಸ್ತೆ ನಿರ್ಮಿಸಲು ಸಾಧ್ಯವೇ? ನಿಗಧಿಗೊಳಿಸಿರುವ ಜಮೀನು ಸಂಪೂರ್ಣ ಹಳ್ಳವಾಗಿದೆ’ ಎಂದು ದೂರಿದರು.</p>.<p>ರೈತ ಮಹಿಳೆ ಲಕ್ಷ್ಮಮ್ಮ ಮಾತನಾಡಿ, ‘ವಯಸ್ಸಾದ ನಾನು ಕೃಷಿ ಮಾಡಿ ಜೀವನ ಸಾಗಿಸುತ್ತಿದ್ದೇವೆ. ಆದರೆ ಜಮೀನಿಗೆ ತೆರಳಲು ರಸ್ತೆಯೇ ಇಲ್ಲ. ಜಮೀನಿಗೆ ತೆರಳಲು ರಸ್ತೆ ನಿರ್ಮಾಣ ಮಾಡಿಕೊಡದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನೆಯಲ್ಲಿ ನಿಂಗಮ್ಮ, ಲಕ್ಷ್ಮಮ್ಮ, ಮಧು, ಆನಂದ, ನಂಜುಂಡ, ಕುಳ್ಳೇಗೌಡ, ಶ್ರೀಕಂಠೇಗೌಡ, ಜವರೇಗೌಡ, ಮಧುಸೂದನ್, ಚಿದಾನಂದ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ:</strong> ‘ನಮ್ಮ ಜಮೀನಿಗೆ ತೆರಳಲು ರಸ್ತೆ ನಿರ್ಮಾಣ ಮಾಡಿಕೊಡಬೇಕು. ಇಲ್ಲದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುತ್ತೇವೆ’ ಎಂದು ಬೀರಶೆಟ್ಟಹಳ್ಳಿ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ಮಾಡಿದರು.</p>.<p>ತಾಲ್ಲೂಕಿನ ಹಿರೇಮರಳಿ ರಸ್ತೆಯಲ್ಲಿ ಜಮಾವಣೆಗೊಂಡ ರೈತರು, ಕಳೆದ 3–4 ವರ್ಷಗಳಿಂದ ರಸ್ತೆ ನಿರ್ಮಾಣಕ್ಕೆ ಮನವಿ ಮಾಡಿದರೂ ತಾಲ್ಲೂಕು ಆಡಳಿತ ಸ್ಪಂದಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಪಟ್ಟಣಕ್ಕೆ ಹೊಂದಿರುವ ಹಿರೋಡೆ ಕೆರೆಗೆ ಸೇರಿದ ಜಮೀನು ಅನ್ನು ತಾಲ್ಲೂಕು ಆಡಳಿತವು ಅರಣ್ಯ ಇಲಾಖೆ ವಶಕ್ಕೆ ಒಪ್ಪಿಸಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಜಮೀನನ್ನು ಸರ್ವೇ ಮಾಡಿ ಗಡಿ ಗುರುತಿಸಿ ರೈತರು ಜಮೀನಿಗೆ ತೆರಳಲು ರಸ್ತೆ ಬಿಟ್ಟುಕೊಡಬೇಕಿದೆ. ಆದರೆ ಇದುವರೆಗೂ ಸರ್ವೇ ನಡೆಸಿ ಗಡಿ ಗುರುತಿಸುವ ಕೆಲಸ ಆಗಿಲ್ಲ. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿಕೊಂಡರೂ ಅರಣ್ಯ ಇಲಾಖೆ ಅಧಿಕಾರಿಗಳು ಸ್ಫಂದಿಸುತ್ತಿಲ್ಲ’ ಎಂದು ದೂರಿದರು.</p>.<p>‘ಜಮೀನಿಗೆ ತೆರಳಲು 50 ಅಡಿ ಜಾಗ ನಿಗದಿಪಡಿಸಲಾಗಿದೆ. ಈ ಸ್ಥಳದಲ್ಲಿ ರೈತರೇ ರಸ್ತೆ ನಿರ್ಮಿಸಿಕೊಳ್ಳಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಲಕ್ಷಾಂತರ ಹಣ ಹಾಕಿ ರೈತರು ರಸ್ತೆ ನಿರ್ಮಿಸಲು ಸಾಧ್ಯವೇ? ನಿಗಧಿಗೊಳಿಸಿರುವ ಜಮೀನು ಸಂಪೂರ್ಣ ಹಳ್ಳವಾಗಿದೆ’ ಎಂದು ದೂರಿದರು.</p>.<p>ರೈತ ಮಹಿಳೆ ಲಕ್ಷ್ಮಮ್ಮ ಮಾತನಾಡಿ, ‘ವಯಸ್ಸಾದ ನಾನು ಕೃಷಿ ಮಾಡಿ ಜೀವನ ಸಾಗಿಸುತ್ತಿದ್ದೇವೆ. ಆದರೆ ಜಮೀನಿಗೆ ತೆರಳಲು ರಸ್ತೆಯೇ ಇಲ್ಲ. ಜಮೀನಿಗೆ ತೆರಳಲು ರಸ್ತೆ ನಿರ್ಮಾಣ ಮಾಡಿಕೊಡದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನೆಯಲ್ಲಿ ನಿಂಗಮ್ಮ, ಲಕ್ಷ್ಮಮ್ಮ, ಮಧು, ಆನಂದ, ನಂಜುಂಡ, ಕುಳ್ಳೇಗೌಡ, ಶ್ರೀಕಂಠೇಗೌಡ, ಜವರೇಗೌಡ, ಮಧುಸೂದನ್, ಚಿದಾನಂದ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>